ಬೌದ್ಧ ಧರ್ಮದ ಅವಶೇಷಗಳನ್ನು ರಕ್ಷಿಸಿ
Team Udayavani, Jun 23, 2020, 5:00 AM IST
ಯಳಂದೂರು: ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ರಾಮಮಂದಿರದ ಜಾಗದಲ್ಲಿ ದೊರೆತಿರುವ ಬೌದ್ಧ ಧರ್ಮದ ಕುರುಹುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ದಸಂಸ ಜಿಲ್ಲಾ ಸಂಚಾಲಕ ರಾಜಣ್ಣ ಮಾತನಾಡಿದರು.
ಸರ್ವೋಚ್ಚ ನ್ಯಾಯಾಲಯ ಬಾಬರಿ ಮಸೀದಿ- ರಾಮಮಂದಿರ ವಿವಾದ ಬಗೆಹರಿಸಿ, ಅಲ್ಲಿ ರಾಮ ಮಂದಿರ ನಿರ್ಮಿಸಲು ತೀರ್ಪು ನೀಡಿತ್ತು. ಈ ನಿಟ್ಟಿನಲ್ಲಿ ರಾಮಮಂದಿರ ನಿರ್ಮಾಣದ ವೇಳೆ ಆ ಸ್ಥಳದಲ್ಲಿ ಬೌದ್ಧ ಧರ್ಮದ ಅವಶೇಷಗಳು, ಕಲಾಕೃತಿಗಳು, ಕುರುಹುಗಳು ದೊರೆತಿವೆ. ಇದರಿಂದ ಇಲ್ಲಿ ಬೌದ್ಧವಿಹಾರ ಇತ್ತು ಎಂಬುದು ಸ್ಪಷ್ಟವಾಗುತ್ತದೆ. ಹಾಗಾಗಿ ಅವುಗಳನ್ನು ಸಂರಕ್ಷಿಸಬೇಕು ಎಂದು ಆಗ್ರಹಿಸಿದರು.
ದಸಂಸ ಕಂದಹಳ್ಳಿ ನಾರಾಯಣ ಮಾತನಾಡಿ, ರಾಮಮಂದಿರ ನಿರ್ಮಿಸುವ ಸ್ಥಳವನ್ನು ಮತ್ತೂಮ್ಮೆ ಉತನನ ನಡೆಸಬೇಕು. ರಾಮಮಂದಿರ ನಿರ್ಮಾಣ ಮಾಡುತ್ತಿ ರುವ ಟ್ರಸ್ಟ್ ಕಾರ್ಯದರ್ಶಿ ಚಂಪತ್ರಾಯ್ ಹಾಗೂ ಇದಕ್ಕೆ ಅನುಕೂಲ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಕಾನೂನು ಕ್ರಮ ವಹಿಸಬೇಕು ಎಂದರು. ಪ್ರತಿಭಟನೆಯಲ್ಲಿ ರಾಮಪುರ ರಂಗಸ್ವಾಮಿ, ಮದ್ದೂರು ಚಕ್ರವರ್ತಿ, ಹೊನ್ನೂರು ರೇವಣ್ಣ, ಚಂದ್ರು, ರಾಜಣ್ಣ, ನಂಜುಂಡ ಸ್ವಾಮಿ, ಮಂಜು, ನಾರಾಯಣಸ್ವಾಮಿ, ನಿಂಗರಾಜು, ಕುಮಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?