ವಿದ್ಯುತ್ ಖಾಸಗೀಕರಣ ವಿರೋಧಿಸಿ ಧರಣಿ
Team Udayavani, Oct 6, 2020, 12:41 PM IST
ಚಾಮರಾಜನಗರ: ಕೇಂದ್ರ ಸರ್ಕಾರವುವಿದ್ಯುತ್ ಕ್ಷೇತ್ರದಲ್ಲಿ ಹೊರಗುತ್ತಿಗೆ, ಖಾಸಗೀಕರಣ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಆಶ್ರಯದಲ್ಲಿ ನೌಕರರು, ಅಧಿಕಾರಿಗಳು ಕಪ್ಪುಪಟ್ಟಿ ಧರಿಸಿ ನಗರದ ಸೆಸ್ಕ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಮಹೇಶ್, ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಗ್ರಾಹಕರಿಗೆ, ನೌಕರರಿಗೆ ಮಾರಕವಾಗಿದ್ದು, ಇದು ಕಾರ್ಮಿಕರ ವಿರೋಧಿ ನೀತಿಯಾಗಿದೆ. ರೈತರು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ರೈತರಿಗೆ ನೀಡುತ್ತಿರುವ ಐಪಿಸೆಟ್ ಉಚಿತ ವಿದ್ಯುತ್ಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿಉಚಿತ ವಿದ್ಯುತ್ಗೆಕಡಿವಾಣಬೀಳುವ ಸಂಭವ ಇದೆ. ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ 60 ಸಾವಿರಕ್ಕೂ ಹೆಚ್ಚು ನೌಕರರು ಹಾಗೂ ಈ ಸಂಸ್ಥೆ ಕಟ್ಟಿ ಬೆಳಸಿದ 40 ಸಾವಿರ ಪಿಂಚಣಿದಾರರಿಗೆ ತೊಂದರೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ಮುರಳೀಕೃಷ್ಣಸ್ವಾಮಿ, ಕಾರ್ಯದರ್ಶಿ ಸಿದ್ದರಾಜಪ್ಪ, ಖಜಾಂಚಿ ಎಸ್.ರಮೇಶ್, ಉಪಾಧ್ಯಕ್ಷ ಮಂಜುನಾಥ್, ಲೆಕ್ಕಾಧಿಕಾರಿ ಭಾಸ್ಕರ್, ಎಸ್ಸಿ ಎಸ್ಟಿ ಕಲ್ಯಾಣ ಸಂಸೆ § ಅಧ್ಯಕ್ಷ ಸಿದ್ದರಾಜು, ಸಹಾಯಕ ಎಂಜಿನಿಯರ್ ರೇಖಾಮಣಿ, ನೌಕರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.