ಉಮ್ಮತ್ತೂರು ಕೆರೆಗೆ ಹರಿಯದ ನೀರು: ದಿಢೀರ್ ಪ್ರತಿಭಟನೆ ಆರಂಭಿಸಿದ ರೈತರು

ನೀರು ಹರಿಸುವವರೆಗೂ ರಾತ್ರಿ ಹಗಲು ನಿರಂತರ ಧರಣಿಗೆ ನಿರ್ಧಾರ

Team Udayavani, Aug 28, 2021, 7:41 PM IST

protest at chamarajanagara

ಚಾಮರಾಜನಗರ: ಉಮ್ಮತ್ತೂರು ದೊಡ್ಡಕೆರೆಗೆ ಸುತ್ತೂರಿನ ಕಬಿನಿ ನದಿಯಿಂದ ನೀರು ಹರಿಸದೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಉಮ್ಮತ್ತೂರು ಕೆರೆ ಪುನಶ್ಚೇತನ ಸಮಿತಿ ವತಿಯಿಂದ ಅಚ್ಚುಕಟ್ಟುದಾರರು ಹಾಗೂ ರೈತರು  ಶನಿವಾರ ಸಂಜೆಯಿಂದ ದೊಡ್ಡ ಕೆರೆ ಮುಂದೆ ದಿಢೀರ್ ಪ್ರತಿಭಟನೆ ಆರಂಭಿಸಿದರು. ನೀರು ಹರಿಸುವವರೆಗೂ ಹಗಲು ರಾತ್ರಿ ಧರಣಿ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಾಲೂಕಿನ ಉಮ್ಮತ್ತೂರು ದೊಡ್ಡಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆಗೆ 2017ರಲ್ಲೇ ಭೂಮಿಪೂಜೆ ನೆರವೇರಿತ್ತು. ಅಂದಿನಿಂದ ಕಾಮಗಾರಿ ಕುಂಟುತ್ತಾ ಸಾಗಿ, 2021 ಆದರೂ ಕೆರೆಗೆ ನೀರು  ಹರಿಯಲಿಲ್ಲ. ಇದರಿಂದ ಬೇಸತ್ತ ಅಚ್ಚುಕಟ್ಟುದಾರರು, ರೈತರು, ಗ್ರಾಮಸ್ಥರು  2021ರ ಫೆಬ್ರವರಿ 15 ರಂದು ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಅಂದು ಜಿಲ್ಲಾಳಿಡಳಿತ ಭವನದ ಆವರಣದಲ್ಲಿ ನಡೆಯುತ್ತಿದ್ದ 11ನೇ ಜಿಲ್ಲಾ  ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ್ದ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಅವರು ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು. ಆಗ ರೈತರು ಈ ಯೋಜನೆಯ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಅಂದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ  ಮಾತನಾಡಿದ ಸುರೇಶ್‌ಕುಮಾರ್ ಅವರು, 32 ಕಿಮೀ ಪೈಪ್‌ಲೈನ್ ಕೆಲಸ ಪೂರ್ಣವಾಗಿದೆ. ಇನ್ನು 1.40 ಕಿ.ಮೀ. ಕೆಲಸ ಬಾಕಿಯಿದೆ. ಅದನ್ನು ಏಪ್ರಿಲ್ ಮಧ್ಯಭಾಗದಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಇದನ್ನು ಲಿಖಿತವಾಗಿ ಕೊಡಿ ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದರು. ಅದರಂತೆ ನೀರಾವರಿ ಶಾಖಾಧಿಕಾರಿ, ಎಇಇ,  ಅಧೀಕ್ಷಕ ಇಂಜಿನಿಯರ್, ಗುತ್ತಿಗೆದಾರರು ಸಹಿ ಮಾಡಿ ಲಿಖಿತವಾಗಿ ಸಚಿವರಿಗೆ ಬರೆದುಕೊಟ್ಟ ಪತ್ರವನ್ನು ಓದಿದ್ದರು. ಹಗಲು ರಾತ್ರಿ ಸಮರೋಪಾದಿಯಲ್ಲಿ ಕಾಮಗಾರಿ ಕೈಗೊಂಡು ಮುಂಬರುವ ಏಪ್ರಿಲ್  ಅಂತ್ಯಕ್ಕೆ ಈ ಯೋಜನೆಯನ್ನು ಚಾಲನೆಗೊಳಿಸಲಾಗುವುದು ಎಂದು ಲಿಖಿತವಾಗಿ ತಿಳಿಸಿದ್ದರು.

ಆದರೆ ಈ ಭರವಸೆ ಈಡೇರಲಿಲ್ಲ. ಇದರಿಂದ ಉಮ್ಮತ್ತೂರು ಗ್ರಾಮಸ್ಥರು ಜುಲೈ ತಿಂಗಳಲ್ಲಿ ಕೆರೆ ಮುಂದೆ ಸಭೆ ಸೇರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಅಂದು ಸ್ಥಳಕ್ಕೆ ತೆರಳಿದ ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜುಲೈ 31ರೊಳಗೆ ನೀರು ಬಾರದಿದ್ದರೆ, ಆಗಸ್ಟ್ 1 ರಂದು ನಿಮ್ಮ ಜೊತೆ ಪ್ರತಿಭಟನೆ ನಡೆಸುವುದಾಗಿ ಭರವಸೆ ನೀಡಿದ್ದರು. ಅದಾದ ಮೇಲೆ ಆಗಸ್ಟ್ 1 ಆದರೂ ಭರವಸೆ ಈಡೇರಲಿಲ್ಲ. ಈ ನಡುವೆ ಸುರೇಶ್‌ಕುಮಾರ್ ಸಚಿವ ಸ್ಥಾನದಿಂದ ಪದಚ್ಯುತಗೊಂಡು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಜಿಲ್ಲೆಯ ಕೋವಿಡ್ ನಿರ್ವಹಣೆ ಉಸ್ತುವಾರಿ ನೀಡಲಾಗಿದೆ.

ಇದನ್ನೂ ಓದಿ:ಉಡುಪಿ ಶ್ರೀಕೃಷ್ಣಾಷ್ಟಮಿಯಂದು ಭಕ್ತರಿಗೆ ದರ್ಶನಾವಕಾಶ : ಭರದಿಂದ ನಡೆಯುತ್ತಿದೆ ತಯಾರಿ

ಶುಕ್ರವಾರವಷ್ಟೇ ಕಬಿನಿ ನದಿಯಿಂದ ನೀರೆತ್ತುವ ಸುತ್ತೂರಿನ ಕಾರ್ಯಾಗಾರಕ್ಕೆ ತೆರಳಿದ ಸಚಿವ ಎಸ್.ಟಿ. ಸೋಮಶೇಖರ್ ಆ. 31ರೊಳಗೆ ಉಮ್ಮತ್ತೂರು ಕೆರೆಗೆ ನೀರು ಹರಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಆ. 31ರೊಳಗೂ ನೀರು ಹರಿಯುವುದಕ್ಕೆ ಅನುಮಾನ ವ್ಯಕ್ತಪಡಿಸಿದ ರೈತರು, ಶನಿವಾರ ಮಧ್ಯಾಹ್ನ ಉಮ್ಮತ್ತೂರು ದೊಡ್ಡ ಕೆರೆ  ಪಕ್ಕದ ಕೊಟ್ಟೂರು ಬಸವೇಶ್ವರ ದೇವಾಲಯದ ಎದುರು ಸಭೆ ನಡೆಸಿದರು. ಅಚ್ಚುಕಟ್ಟುದಾರರು ,ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಸಭೆ ನಡೆಯಿತು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಸಚಿವರು, ಅಧಿಕಾರಿಗಳು ಸುಳ್ಳು ಭರವಸೆ ನೀಡುತ್ತಿದ್ದಾರೆ. ಆ. 31ರೊಳಗೆ ನೀರು ಹರಿಸುವುದು ಅನುಮಾನ. ಶಾಸಕ ಎನ್. ಮಹೇಶ್ ಅವರು ಆ. 31ರೊಳಗೆ ನೀರು ಹರಿಸದಿದ್ದರೆ ಚಳವಳಿಯಲ್ಲಿ ಭಾಗವಹಿಸಬೇಕು. ಇಲ್ಲದಿದ್ದರೆ ಅವರು ವಚನಭ್ರಷ್ಟರಾದಂತೆ ಎಂದು ಟೀಕಿಸಿದರು.

ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ, ಆ. 31ರಂದು ನೀರು ಹರಿಸದಿದ್ದರೆ, ಸುತ್ತೂರಿನಲ್ಲಿ ರೈತ ಮಹಿಳೆಯೊಬ್ಬರ ಕೈಯಲ್ಲಿ ಉದ್ಘಾಟಿಸಲಾಗುವುದು. ಇದಕ್ಕೆ ಅವಕಾಶ ದೊರಕದಿದ್ದರೆ ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು, ಅಲ್ಲಿಯೇ ಚಳವಳಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಶನಿವಾರ ಸಂಜೆಯಿಂದಲೇ ಪ್ರತಿಭಟನೆ  ಆರಂಭಿಸಲು ನಿರ್ಧರಿಸಿ, ಅಲ್ಲಿಯೇ ಶಾಮಿಯಾನ ಹಾಕಿ, ಮಹಾತ್ಮಾಗಾಂಧಿ ಭಾವಚಿತ್ರ ಇರಿಸಿ ಧರಣಿ ಆರಂಭಿಸಿದರು. ಆ. 31ರವೆರೆಗೂ ಅದೇ ಸ್ಥಳದಲ್ಲಿ ರಾತ್ರಿ ಹಗಲು ಎನ್ನದೇ ನಿರಂತರ ಧರಣಿ ನಡೆಸಲು ರೈತರು ತೀರ್ಮಾನಿಸಿದ್ದಾರೆ.

ರೈತ ಮುಖಂಡರಾದ ಹೊನ್ನೂರು ಬಸವಣ್ಣ, ಹೆಗ್ಗವಾಡಿಪುರ ಮಹದೇವಸ್ವಾಮಿ, ದಾಸನೂರು ಮಲ್ಲಣ್ಣ, ಅಗ್ರಹಾರ ಮಂಜುನಾಥ್, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರ ನಂದೀಶ್,  ಉಮ್ಮತ್ತೂರು, ಜನ್ನೂರು, ಮೂಡಲ ಅಗ್ರಹಾರ,  ಚುಂಚನಹಳ್ಳಿ, ಹನುಮನಪುರ, ಹಳ್ಳಿಕೆರೆಹುಂಡಿ, ಹೊಮ್ಮ,  ದಾಸನೂರು, ಹೆಗ್ಗವಾಡಿ, ಹೆಗ್ಗವಾಡಿಪುರದ ಗ್ರಾಮಸ್ಥರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.