ನಾಳೆ ಪರಿವರ್ತನಾ ಸಂಘದಿಂದ ಪ್ರತಿಭಟನೆ
Team Udayavani, Feb 15, 2021, 4:40 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಪಿಟಿಸಿಎಲ್ ಕಾಯ್ದೆ ತಿದ್ದುಪಡಿ, ಕೃಷಿ ಹಾಗೂ ಗೋಹತ್ಯಾ ಕಾಯಿದೆಗಳ ರದ್ದು, ತೈಲ ಮತ್ತು ಸಿಲಿಂಡರ್ ಬೆಲೆ ಇಳಿಕೆ, ಬಡ ನಿರುದ್ಯೋಗಿ ಪದವೀಧರರಿಗೆ ಕೃಷಿ ಭೂಮಿ ಹಂಚುವಂತೆ ಒತ್ತಾಯಿಸಿ ಭಾರತೀಯ ಪರಿವರ್ತನಾ ಸಂಘದ ವತಿಯಿಂದ ಫೆ.16 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆಲೂರುಮಲ್ಲು ಹೇಳಿದರು.
ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಪ್ರವಾಸಿ ಮಂದಿರದಲ್ಲಿ ಸಮಾವೇಶಗೊಂಡು ಬೆಳಗ್ಗೆ 11ಗಂಟೆಗೆಅಲ್ಲಿಂದ ಮೆರವಣಿಗೆ ಹೊರಟು ಡಿವಿಯೇಷನ್ ರಸ್ತೆ, ಭುವನೇಶ್ವರರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿ ಬೃಹತ್ ಧರಣಿ ನಡೆಸಲಾಗುವುದು ಎಂದರು. ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಹೆಚ್ಚಿಸಿರುವ ಬಸ್ದರವನ್ನು ವಾಪಸ್ನಾಳೆ ಪರಿವರ್ತನಾ ಸಂಘದಿಂದ ಪ್ರತಿಭಟನೆ ಪಡೆಯಬೇಕು ಎಂದರು.
ನಗರಸಭಾಸದಸ್ಯ ಪ್ರಕಾಶ್, ಸಂಘದ ಪ್ರಧಾನಕಾರ್ಯದರ್ಶಿ ವಾಸು, ತಾಲೂಕು ಅಧ್ಯಕ್ಷಚಿನ್ನಸ್ವಾಮಿ ರಾಮಸಮುದ್ರ, ಹೊನ್ನಹಳ್ಳಿ ಬಸವಣ್ಣ ಗೋಷ್ಠಿಯಲ್ಲಿ ಹಾಜರಿದ್ದರು.
ಅಕ್ರಮ ಪಡಿತರ ವಶ, ವ್ಯಕ್ತಿ ಸೆರೆ :
ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಶೇಖರಣೆ ಮಾಡಿ, ಮಾರುತಿ ವ್ಯಾನ್ ನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಗೀತಾ ಪ್ರೈ ಮರಿ ಶಾಲೆಯ ರಸ್ತೆಯಲ್ಲಿ ಬರುತ್ತಿದ್ದ ಮಾರುತಿ ವ್ಯಾನ್ ತಡೆದು ಪರಿಶೀಲಿಸಿದಾಗಪತ್ತೆಯಾದ ಅಕ್ರಮ ಪಡಿತರ ಅಕ್ಕಿಯನ್ನು ವಶ ಪಡಿಸಿಕೊಂಡು, ಹನೂರು ತಾಲೂಕಿನ ಕೌದಳ್ಳಿಯ ಆದಿಲ್ ಪಾಷ ಎಂಬಾತ ನನ್ನು ಬಂಧಿಸಿದ್ದಾರೆ. ಈ ಪಡಿತರ ಅಕ್ಕಿ ತನ್ವಿರ್ ಸದ್ದಾಂ ಅವರಿಗೆ ಸೇರಿದ್ದಾಗಿದೆ ಎಂದು ಆರೋಪಿ ತಿಳಿಸಿದ್ದಾನೆ. 367 ಕೆ.ಜಿ. ಪಡಿ ತರಅಕ್ಕಿ ಮತ್ತು ಮಾರುತಿ ವ್ಯಾನ್ ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ