ಬಾಕಿ ಹಣ ಪಾವತಿಸಲು ಆಗ್ರಹಿಸಿ ಧರಣಿ


Team Udayavani, Oct 1, 2019, 3:00 AM IST

baaki-hana

ಕೊಳ್ಳೇಗಾಲ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಮಿತಿ ನಿಯಮಿತ ವತಿಯಿಂದ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಬರಬೇಕಾದ 9 ತಿಂಗಳ ಬಾಕಿಹಣ ನೀಡುವಂತೆ ಒತ್ತಾಯಿಸಿ ಕಚೇರಿ ಮುಂಭಾಗ ಮಾಲೀಕರು ಸೋಮವಾರ ಪ್ರತಿಭಟನೆ ನಡೆಸಿದರು.

ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ವೃಷಭೇಂದ್ರಪ್ಪ ನೇತೃತ್ವದಲ್ಲಿ ನ್ಯಾಯ ಬೆಲೆ ಅಂಗಡಿ ಮಾಲೀಕರು ಸೇರಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಮಿತಿ ನಿಯಮಿತದ ಕಚೇರಿಗೆ 9 ತಿಂಗಳ ಬಾಕಿ ಹಣವನ್ನು ಕೇಳುವ ಸಲುವಾಗಿ ಆಗಮಿಸಿದ್ದಾಗ ನಿಯಮಿತದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಗೈರು ಹಾಜರಾಗಿದ್ದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು.

ಲಾಭದ ಹಣ ನೀಡದ ಅಧ್ಯಕ್ಷ: ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ವೃಷಭೇಂದ್ರ ಮಾತನಾಡಿ, ಟಿಎಪಿಎಂಎಸ್‌ ಗೋದಾಮು ವತಿಯಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಆಹಾರ ಸಾಮಗ್ರಿಗಳನ್ನು ಲಾರಿಗೆ ವರ್ಗಾಯಿಸಲು ಮತ್ತು ಇಳಿಸಲು ಸೇರಿದಂತೆ ಮೂರು ಹಂತದಲ್ಲಿ ಬರಬೇಕಾಗಿದ್ದ ಲಾಭದ ಹಣವನ್ನು ಕಚೇರಿಯ ಅಧ್ಯಕ್ಷರಾಗಲಿ, ಕಾರ್ಯದರ್ಶಿಯವರಾಗಲಿ ನೀಡದೆ ಮೀನ ಮೇಷ ಎಸಗುತ್ತಿದ್ದಾರೆಂದು ದೂರಿದರು.

ಮಂಜೂರಾದ ಹಣ ಬಿಡುಗಡೆ ಮಾಡಿಲ್ಲ: ರಾಜ್ಯದ ಆಹಾರ ನಿಗಮದ ಅಧಿಕಾರಿಗಳಿಗೆ ಕಳೆದ ಒಂಭತ್ತು ತಿಂಗಳಿನಿಂದ ಬರಬೇಕಾಗಿರುವ ಬಾಕಿ ಹಣವನ್ನು ಮಂಜೂರು ಮಾಡುವಂತೆ ಮನವಿ ಮಾಡಿದ ವೇಳೆ ಅಧಿಕಾರಿಗಳು ಮಂಜೂರು ಮಾಡಿದ್ದಾರೆ. ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡುವಂತೆ ಬಿಲ್‌ ತಯಾರಿಸಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಮಂಜೂರು ಮಾಡಬೇಕಾದ ಅಧಿಕಾರಿಗಳು ಇದುವರೆವಿಗೂ ಹಣ ನೀಡದೆ ಮಾಲೀಕರನ್ನು ಅಲೆದಾಡಿಸುತ್ತಿದ್ದಾರೆಂದು ದೂರಿದರು.

ಅವ್ಯವಹಾರದ ಬಗ್ಗೆ ಸಮಗ್ರ ತನಿಖೆಯಾಗಲಿ: ಟಿಎಪಿಸಿಎಂಎಸ್‌ ಗೋದಾಮುನಲ್ಲಿ ಕೋಟ್ಯಂತರ ರೂ. ಹಣ ದುರ್ಬಳಕೆಯಾಗಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಹಲವರನ್ನು ಅಮಾನತಿನಲ್ಲಿಟ್ಟು ನ್ಯಾಯಾಂಗ ಬಂಧನಕ್ಕೂ ಒಪ್ಪಿಸಲಾಗಿದೆ. ಕೂಡಲೇ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅಧಿಕಾರಿಗಳೇ ಗೈರು: ಸಂಘದ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು ಮಾತನಾಡಿ, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬರಬೇಕಾಗಿರುವ ಬಾಕಿ ಹಣವನ್ನು ಕೊಡುವುದಾಗಿ ನಿಯಮಿತದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಅವರಲ್ಲಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡುವ ಸಲುವಾಗಿ ಎಲ್ಲಾ ಸದಸ್ಯರು ಬಂದು ಅಧಿಕಾರಿಗಳಿಲ್ಲದೆ ಬಂದ ದಾರಿಗೆ ಸುಂಕವಿಲ್ಲದಂತೆ ತೆರಳುವಂತೆ ಮಾಡಿದ್ದಾರೆಂದು ಆರೋಪಿಸಿದರು.

ಹೋರಾಟದ ಎಚ್ಚರಿಕೆ: ನ್ಯಾಯಬೆಲೆ ಅಂಗಡಿಯ ಸುಮಾರು 93 ಮಾಲೀಕರಿಗೆ 9 ತಿಂಗಳ ಬಾಕಿ ಹಣ 87 ಲಕ್ಷ ರೂ. ನೀಡಬೇಕಾಗಿದ್ದು, 10 ದಿನಗಳ ಒಳಗಾಗಿ ಬಿಡುಗಡೆ ಮಾಡದಿದ್ದರೆ ಕಚೇರಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕೂಡಲೇ ಹಣ ನೀಡಲಿ: ಕಳೆದ 2018ರಲ್ಲಿ ಗೋದಾಮು ಅಧಿಕಾರಿಗಳ ನಿರ್ಲಕ್ಷ್ಯಯಿಂದ ಕೋಟ್ಯಂತರ ರೂ. ದುಬಳìಕೆಯಾಗಿರುವ ವಿಷಯ ಹೊರ ಬರುತ್ತಿದ್ದಂತೆ ಜಿಲ್ಲಾಧಿಕಾರಿಗಳ ತಂಡ ಭೇಟಿ ನೀಡಿ ಗೋದಾಮಿನಲ್ಲಿದ್ದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ಬೀಗ ಜಡಿದು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕೆಎಸ್‌ಎಫ್ಸಿ ಗೋದಾಮಿಗೆ ವರ್ಗಾಯಿಸಿದ ಬಳಿಕ ಪ್ರತಿ ತಿಂಗಳು ಬರಬೇಕಾಗಿರುವ ಲಾಭದ ಹಣ ಬರುತ್ತಿದೆ. ಕಳೆದ ವರ್ಷದ ಬಾಕಿ ಹಣ ಮಾತ್ರ ಬರದೆ ಇದ್ದು, ಕೂಡಲೇ ಮಂಜೂರು ಮಾಡಬೇಕು ಇಲ್ಲವಾದ ಪಕ್ಷದಲ್ಲಿ ಟಿಎಪಿಸಿಎಂಎಸ್‌ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಕಾರ್ಯದರ್ಶಿ ಮರಿಸ್ವಾಮಿ, ಸಹಕಾರ್ಯದರ್ಶಿ ಶಾಂತರಾಜು, ಮುಖಂಡರಾದ ಆನಂದ್‌, ಜಗದೀಶ ನಾಯಕ, ಶಿವಣ್ಣ, ಸಿದ್ದರಾಜು, ಇತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.