ಸಮರ್ಪಕ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ರವಿ


Team Udayavani, Mar 2, 2021, 3:44 PM IST

ಸಮರ್ಪಕ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ರವಿ

ಚಾಮರಾಜನಗರ: ಬೇಸಿಗೆ ಕಾಲ ಆರಂಭ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಪ್ರದೇಶದ ಯಾವುದೇ ಭಾಗದಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಸಿಗೆ ವೇಳೆ ಉಂಟಾಗಬಹುದಾದ ಅಭಾವಪರಿಸ್ಥಿತಿ ಮತ್ತು ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿವ ನೀರಿನ ಸರಬರಾಜು ಕುರಿತು ಸೋಮವಾರ ನಡೆದಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂದಿನ 3-4 ತಿಂಗಳ ಕಾಲ ನಗರ, ಪಟ್ಟಣ ಪ್ರದೇಶಗಳೇ ಇರಲಿ ಅಥವಾ ಗ್ರಾಮೀಣ ಭಾಗಗಳೇಇರಲಿ ಎಲ್ಲಿಯೂ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಎಂದು ನಿರ್ದೇಶನ ನೀಡಿದರು.

ಆದ್ಯತೆ ಇರಲಿ: ಸಾರ್ವಜನಿಕ ನೀರಿನ ಲಭ್ಯತೆ ಇಲ್ಲದ ಕಡೆ ಖಾಸಗಿ ಬೋರ್‌ವೆಲ್‌ ಗುರುತಿಸಿನೀರು ಸರಬರಾಜು ಮಾಡಬೇಕಿದೆ,ತಹಶೀಲ್ದಾರರು, ತಾಪಂ ಇಒಗಳು, ಗ್ರಾಪಂಅಧಿಕಾರಿಗಳು ಜತೆಗೂಡಿ ಕುಡಿಯುವ ನೀರಿಬವಣೆ ನೀಗಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಆದ್ಯತೆ ಮೇರೆಗೆ ನೀರು ಒದಗಿಸುವ ಕಾರ್ಯ ಮಾಡಬೇಕೆಂದರು.

ಕಾಮಗಾರಿ ಪೂರ್ಣಗೊಳಿಸಿ: ಹಾಗೆಯೇ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಏನಾದರೂ ಸಮಸ್ಯಗಳಿವೆ ಎಂಬ ಬಗ್ಗೆ ಕೂಡಲೇ ಪರಿಶೀಲಿಸಿಕೊಳ್ಳಬೇಕು, ತಾಂತ್ರಿಕ ತೊಂದರೆಅಥವಾ ನಿರ್ವಹಣೆ ಕಾರ್ಯದಲ್ಲಿ ಬದಲಾವಣೆ ಅಗತ್ಯವಿದ್ದರೆ ಕೂಡಲೇ ಸರಿಪಡಿಸಬೇಕು. ಬಾಕಿಇರುವ ಶುದ್ಧ ಕುಡಿವ ನೀರಿನ ಘಟಕಗಳ ಅಳವಡಿಕೆಕಾಮಗಾರಿಯನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದರು.ಬೇಸಿಗೆ ವೇಳೆ ಜಾನುವಾರುಗಳಿಗೂ ನೀರಿನ ಕೊರತೆ ಕಾಡಬಾರದು. ಮೇವು ಪೂರೈಕೆಯಲ್ಲಿಯೂ ಯಾವುದೇ ವ್ಯತ್ಯಯವಾಗಬಾರದು ಎಂದರು.

ಅರಿವು ಮೂಡಿಸಿ: ಬೇಸಿಗೆ ವೇಳೆ ಸಾಮಾನ್ಯವಾಗಿಎದುರಾಗಬಹುದಾದ ನಿರ್ಜಲೀಕರಣ, ಮಕ್ಕಳಿಗೆ ಕಾಣಿಸಿಕೊಳ್ಳಬಹುದಾದ ಅನಾರೋಗ್ಯದಂತಹಸಮಸ್ಯೆಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಎಂಬಬಗ್ಗೆಯೂ ಸೇರಿ ಆರೋಗ್ಯ ಸಂಬಂಧಿ ಸಲಹೆಗಳನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ನೀಡುವ ವ್ಯವಸ್ಥೆಯಾಗಬೇಕು ಎಂದರು.

ಸಮರ್ಪಕ ತ್ಯಾಜ್ಯ ವಿಲೇವಾರಿ ಮಾಡಿ: ಗ್ರಾಪಂ, ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯಲ್ಲಿ ಸ್ವತ್ಛತೆಗೆವಿಶೇಷ ಗಮನ ಹರಿಸಬೇಕು. ಕಸ ಇತರ ತ್ಯಾಜ್ಯ ವಿಲೇವಾರಿ ನಿಗದಿತ ಸಮಯದೊಳಗೆ ಮುಗಿಯಬೇಕು. ಚರಂಡಿ ಶುಚಿಗೊಳಿಸಿಶುದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿ ದೇವಿ, ಉಪವಿಭಾಗಾಧಿಕಾರಿ ಡಾ.ಗಿರೀಶ್‌ ದಿಲೀಪ್‌ ಬಡೋಲೆ, ತಹಶೀಲ್ದಾರ್‌ರಾದ ಕೆ.ಕುನಾಲ್‌,ಚಿದಾನಂದ ಗುರುಸ್ವಾಮಿ, ನಾಗರಾಜು, ತಾಪಂ ಇಒ ಪ್ರೇಮ್‌ಕುಮಾರ್‌, ಶ್ರೀಕಂಠರಾಜೇಅರಸ್‌, ಜಿಪಂ ಸಹಾಯಕ ಯೋಜನಾಧಿಕಾರಿ ಕುಲದೀಪ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾನಿರ್ದೇಶಕ ಕೆ.ಸುರೇಶ್‌, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ಪಶುಪಾಲನಾ ಇಲಾಖೆಉಪನಿರ್ದೇಶಕ ವೀರಭದ್ರಯ್ಯ, ಇತರೆ ಇಲಾಖೆಗಳು ಇದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.