ಮಿಡತೆ ಹತೋಟಿಗೆ ಮುನ್ನೆಚ್ಚರಿಕೆ ತರಬೇತಿ ನೀಡಿ


Team Udayavani, Jun 1, 2020, 5:48 AM IST

maroobhoomi

ಚಾಮರಾಜನಗರ: ಅನ್ಯ ರಾಜ್ಯಗಳಲ್ಲಿ ಉಂಟಾಗಿರುವ ಮರುಭೂಮಿ ಮಿಡತೆ ಹಾವಳಿ ಜಿಲ್ಲೆಯಲ್ಲೂ ಕಾಣಿಸಿಕೊಂಡರೆ ಯಾವ ಬಗೆಯಲ್ಲಿ ಹತೋಟಿಗೆ ತರಬೇಕೆಂಬ ಬಗ್ಗೆ ರೈತರು ಹಾಗೂ ಅಧಿಕಾರಿಗಳಿಗೆ ಪೂರ್ವ ಮುನ್ನೆಚ್ಚರಿಕೆ  ಹಾಗೂ ತರಬೇತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮರುಭೂಮಿ ಮಿಡತೆ ನಿವಾರಣೆ ಕುರಿತ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಮರುಭೂಮಿ ಮಿಡತೆ  ಗಳ ಹಾವಳಿ ಇದುವರೆಗೆ ಕಂಡುಬಂದಿಲ್ಲ. ಒಂದು ವೇಳೆ ಕಂಡುಬರಬಹುದಾದರೆ ಯಾವ ಬಗೆಯಲ್ಲಿ ತಡೆಯಬೇಕು ಎಂಬ ಬಗ್ಗೆ ಜಾಗೃತಗೊಳಿಸಬೇಕಿದೆ ಎಂದು ಹೇಳಿದರು.

ರೈತರಿಗೆ ಜಾಗೃತಿ: ಇದುವರೆಗೆ ಎಲ್ಲಿಯೂ ಹಾವಳಿ ಪ್ರಕರಣ ವರದಿಯಾಗಿಲ್ಲ. ಆದರೂ ರೈತರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ತಾಲೂಕು  ಮಟ್ಟದ ಸಭೆಗಳಲ್ಲಿ ತಹಶೀಲ್ದಾರ್‌, ಪೊಲೀಸ್‌, ರೈತ ಸಂಘದ ಪ್ರತಿನಿಧಿಗಳು, ಗ್ರಾಮಲೆಕ್ಕಿಗರು, ಗ್ರಾಮ ಪಂಚಾಯತಿಗಳನ್ನು ಒಳಗೊಂಡ ಸಭೆ  ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ಸೂಚಿಸಿದರು.

ಮುಂಜಾಗ್ರತೆ ಅಗತ್ಯ: ಕೃಷಿ ವಿಜ್ಞಾನ ಕೇಂದ್ರ ಕೀಟತಜ್ಞ ಡಾ. ಶಿವರಾಯ ನಾವಿ ಮಾತ  ನಾಡಿ, ಪ್ರಸ್ತುತ ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ರಾಜ್ಯದ ಉತ್ತರ ಗಡಿಜಿಲ್ಲೆಗಳಲ್ಲಿ ಮರುಭೂಮಿ ಮಿಡತೆ ಕಂಡುಬಂದಿದ್ದು,  ಜಿಲ್ಲೆಗೆ ಬರುವ ಸಾಧ್ಯತೆ ಶೇ.99 ಇಲ್ಲ. ಮರುಭೂಮಿ ಮಿಡತೆ ಕಂಡುಬಂದಲ್ಲಿ ಕ್ರಮಕೈಗೊಳ್ಳಬಹುದು ಎಂದು ತಿಳಿಸಿದರು.

ಉಳುಮೆ ಮಾಡಿ: ಮಿಡತೆಗಳು ಮೊಟ್ಟೆ ಇಡುವ ಜಾಗವನ್ನು ಗುರುತಿಸಿ ಉಳುಮೆ ಮಾಡಬೇಕು. ಸುತ್ತ ಕಂದಕ ಬದು ನಿರ್ಮಿಸಿ ಮೊಟ್ಟೆಯಿಂದ ಬರುವ ಮರಿಗಳನ್ನು ಕಂದ ಕದ ಬದುಗಳಲ್ಲಿ ಬಿಟ್ಟು ಮೊಟ್ಟೆಗಳನ್ನು ನಾಶಪಡಿಸಲು ಪದೇ  ಪದೆ ಉಳುಮೆ ಮಾಡ ಬೇಕು. ಮಿಡತೆ ಕಾಣಿಸಿಕೊಂಡಾಗ ತಗಡಿನ ಡಬ್ಬಿ, ಡ್ರಮ್ಮು, ತಟ್ಟೆ ಮತ್ತು ಎಲೆಕ್ಟ್ರಾನಿಕ್‌ ಮೂಲಕ ಭಾರಿ ಶಬ್ದ ಉಂಟು ಮಾಡಿದಲ್ಲಿ ಮಿಡತೆಗಳನ್ನು ಹತೋಟಿಗೆ ತರಬಹುದು ಎಂದರು.

ಬೇವಿನ ದ್ರವ ಸಿಂಪಡಣೆ: ಬೇವು ಆಧಾರಿತ ದ್ರವ ಸಿಂಪಡಣೆ ಮಾಡಿ ನೀರಿನಲ್ಲಿ ಬೆರಸಿ ಗಿಡಗಳಿಗೆ ಸಿಂಪಡಿಸಬೇಕು. ಬೆಳೆದು ನಿಂತ ಬೆಳೆಗಳಿಗೆ ಕ್ಲೋರಿಪೈರಿಪಾಸ್‌, ಮೆಲಾಥಿನ್‌ ಯನ್ನು ಧೂಳೀಕರಿಸಬೇಕು. ಬಲಿಯುತ್ತಿರುವ ಮಿಡತೆ‌ಗಳು  ಹೊಲದಲ್ಲಿ ಓಡಾಡುವಾಗ ಬೆಂಕಿ ಹಚ್ಚಿ ಸುಡುವ ಮೂಲಕ ಮರುಭೂಮಿ ಮಿಡತೆಗಳ ನಿಯಂತ್ರಣ ಮಾಡಬಹುದು ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚಂದ್ರಕಲಾ,  ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್‌, ರೇಷ್ಮೆ ಇಲಾಖೆಯ ಉಪನಿರ್ದೇಶಕ ಲಕ್ಷ್ಮೀನರ ಸಿಂಹಯ್ಯ, ಕೆವಿಕೆ ಕೃಷಿ ವಿಜ್ಞಾನ ಕೇಂದ್ರ ಕೀಟತಜ್ಞ  . ಯೋಗೇಶ್‌ ಹಾಜರಿದ್ದರು.

ವಿಪತ್ತುಗಳು ಬರುವ ಮೊದಲೇ ಅಧಿಕಾರಿಗಳು ವಿಜ್ಞಾನಿಗಳ ಸಹಾಯ ಪಡೆದು ಪೂರ್ವಸಿದಟಛಿತೆ ಗಳನ್ನು ರೂಪಿಸಿಕೊಂಡು ನಿಯಂತ್ರಣದ ಬಗ್ಗೆ ರೈತರಿಗೆ ಹೆಚ್ಚು ಜಾಗೃತಿಯನ್ನು ಮೂಡಿಸಬೇಕು.
-ಡಾ.ಎಂ.ಆರ್‌.ರವಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.