ಸರ್ಕಾರಿ ನೌಕರರಿಗೆ ರಕ್ಷಣೆ ಕಲ್ಪಿಸಿ
Team Udayavani, Jul 11, 2020, 4:57 AM IST
ಯಳಂದೂರು: ಬಂಗಾರಪೇಟೆಯ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆಯಿಂದ ಸರ್ಕಾರಿ ನೌಕರರಲ್ಲಿ ಆತಂಕ ಉಂಟಾಗಿದ್ದು, ರಕ್ಷಣೆ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಪಟ್ಟಣ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಮಾತನಾಡಿ, ದರು.
ಜಮೀನು ವಿವಾದ ಸರ್ವೆ ಮಾಡಲು ಹೊರಟಿದ್ದ ತಹಶೀಲ್ದಾರರ ನ್ನು ಪೊಲೀಸರ ಸಮ್ಮುಖದಲ್ಲೇ ಇರಿದು ಕೊಲೆ ಮಾಡಿರುವುದು ಅಮಾನವೀಯ ಕೃತ್ಯ. ಇಂತಹ ದುರ್ಘಟನೆಗಳು ಸಂಭವಿಸುತ್ತ ಲೇ ಇವೆ. ಇದಕ್ಕೆ ಕಠಿಣ ಕಾನೂನು ಜಾರಿಗೊಳಿಸಬೇಕು. ಕೃತ್ಯವೆಸಗಿರುವ ಆರೋಪಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಉಪ ತಹಶೀಲ್ದಾರ್ ನಂಜಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಸಂಘದ ಉಪಾಧ್ಯಕ್ಷ ಮಹೇಶ್, ಸಿದ್ದ ರಾಜು, ಕಾರ್ಯದರ್ಶಿ ಮಹೇಶ್, ಇಒ ರಾಜು, ಖಜಾನೆ ಅಧಿಕಾರಿ ಪೂರ್ಣಿಮಾ, ಶಿರಸ್ತೇದಾರ್ ಶಾಂತಿ, ಮಂಜುಳಾ, ರಾಣಿ, ಮಾದಪ್ಪ, ಪ್ರಭುಸ್ವಾಮಿ, ರಾಜು, ಉಪ್ಪಿನ ಮೋಳೆ ನಾರಾಯಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ