ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ


Team Udayavani, Sep 13, 2019, 11:55 AM IST

cn-tdy-1

ಸಮೀಪದ ಲೊಕ್ಕನಹಳ್ಳಿಯಲ್ಲಿ ನಿರ್ಮಿಸಲಾಗಿದ್ದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಶಾಸಕ ಆರ್‌. ನರೇಂದ್ರ ಉದ್ಘಾಟಿಸಿದರು. ಜಿಪಂ ಸದಸ್ಯೆ ಮರಗದಮಣಿ, ತಾಪಂ ಅಧ್ಯಕ್ಷ ರಾಜೇಂದ್ರ ಇದ್ದರು.

ಹನೂರು: ಸಮೀಪದ ಲೊಕ್ಕನಹಳ್ಳಿಯಲ್ಲಿ ನರೇಗಾ ಯೋಜನೆಯಡಿ 13.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಶಾಸಕ ಆರ್‌. ನರೇಂದ್ರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮದ 1ನೇ ಅಂಗನವಾಡಿ ಕೇಂದ್ರವು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿನ ಕಟ್ಟಡದಲ್ಲಿ ನಡೆಯುತ್ತಿತ್ತು. ಆದರೆ ಸಮರ್ಪಕ ಮೂಲ ಸೌಕರ್ಯ ಇರಲಿಲ್ಲ. ಇದರ ಜತೆಗೆ ಕಳೆದ 3 ವರ್ಷಗಳಿಂದೀಚೆ ಕಟ್ಟಡ ಶಿಥಿಲಾ ವಸ್ಥೆ ಯ ಹಂತ ತಲುಪಿತ್ತು. ಇದರಿಂದ ಮಕ್ಕಳು ಹಾಗೂ ನೌಕರರು ತೊಂದರೆ ಪಡುವಂತಾಗಿತ್ತು ಎಂದರು.

ಮೂಲ ಸೌಕರ್ಯ ಕಲ್ಪಿಸಲಾಗಿದೆ: ಕಟ್ಟಡ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ಅಗತ್ಯ ಕ್ರಮವ ಹಿಸುವಂತೆ ಸೂಚನೆ ನೀಡಲಾಗಿತ್ತು. ಈ ದಿಸೆಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಕಟ್ಟಡ ನಿರ್ಮಿಸ ಲಾಗಿದ್ದು, ಪ್ರತ್ಯೇಕ ಅಡುಗೆ ಕೋಣೆ, ಶೌಚಗೃಹ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯವನ್ನು ಕಲ್ಪಿಸ ಲಾಗಿದೆ. ಇದರಿಂದ ಮಕ್ಕಳ ಮಕ್ಕಳ ಶಿಕ್ಷಣಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗುಣಮಟ್ಟದ ಶಿಕ್ಷಣ ನೀಡಿ: ಬಳಿಕ ಸರ್ಕಾರಿ ಶಾಲೆಗೆ ತೆರಳಿದ ಶಾಸಕರು ಆಂಗ್ಲ ಮಾಧ್ಯಮದ ಎಲ್ಕೆಜಿ ಕೇಂದ್ರಕ್ಕೆ ತೆರಳಿ ಅಲ್ಲಿನ ಶಿಕ್ಷಕರಿಂದ ಮಕ್ಕಳ ದಾಖಲಾತಿ ಹಾಗೂ ಶಿಕ್ಷಣದ ಬಗ್ಗೆ ಮಾಹಿತಿ ಪಡೆದುಕೊಂಡು ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದರು.

ಶೌಚಗೃಹ ಉದ್ಘಾಟನೆ: ಗ್ರಾಪಂನ 14ನೇ ಹಣಕಾಸು ಯೋಜನೆಯಡಿ 1.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿ ಸಲಾಗಿದ್ದ ಸಾರ್ವಜನಿಕ ಶೌಚ ಗೃಹವನ್ನು ಜಿಪಂ ಸದಸ್ಯೆ ಮರ ಗದಮಣಿ ಉದ್ಘಾಟಿಸಿ ದರು. ಶಾಸಕರು ಸ್ವಚ್ಛತೆ ಕಾಪಾಡು ವುದರ ಜತೆಗೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಹುತ್ತೂರು ಶಾಲೆಗೆ ಭೇಟಿ: ಬಳಿಕ ಹುತ್ತೂರು ಗ್ರಾಮಕ್ಕೆ ತೆರಳಿದ ಶಾಸಕರು ಅಲ್ಲಿನ ಉನ್ನತೀಕರಿಸಿದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪ್ರಗತಿ ಹಂತದಲ್ಲಿರುವ ಶಾಲಾ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ಸಂಬಂಧಪಟ್ಟವರಿಗೆ ಕಾಮಗಾರಿ ಗುಣಮಟ್ಟವನ್ನು ಕಾಯ್ದು ಕೊಳ್ಳುವುದರ ಮೂಲಕ ಬೇಗ ಪೂರ್ಣ ಗೊಳಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಬಿಸಿಯೂಟ ಸವಿಯುುತ್ತಿದ್ದ ವಿದ್ಯಾ ರ್ಥಿಗಳ ಬಳಿ ತೆರಳಿ ಊಟದ ರುಚಿ, ಶುಚಿಯ ಬಗ್ಗೆ ಮಕ್ಕಳಿಂದ ಅನಿಸಿಕೆ ಪಡೆದುಕೊಂಡರು. ಈ ವೇಳೆ ಮಕ್ಕಳು ಬಿಸಿಯೂಟ ಉತ್ತಮವಾಗಿ ನೀಡುತ್ತಿದ್ದಾರೆ ಸರ್‌ ಎಂಬ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯೆ ಶಿವಮ್ಮ, ಲೊಕ್ಕನಹಳ್ಳಿ ಗ್ರಾಪಂ ಅಧ್ಯಕ್ಷ ರಂಗಶೆಟ್ಟಿ, ಸದಸ್ಯರಾದ ಮಲ್ಲಯ್ಯ, ರುದ್ರಪ್ಪ, ಸನ್ನಿಯಪ್ಪ, ಇತರರು ಇದ್ದರು.

1.30 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ:

ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಲೋಕೋ ಪಯೋಗಿ ಇಲಾಖಾ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ಮಂಜೂರಾಗಿದ್ದ 1.30 ಕೋಟಿ ರೂ. ವೆಚ್ಚದಲ್ಲಿನ ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆರ್‌. ನರೇಂದ್ರ ಭೂಮಿಪೂಜೆ ನೆರವೇರಿಸಿದರು.

ಕ್ಷೇತ್ರ ವ್ಯಾಪ್ತಿಯ ಕಂಡಯ್ಯನಪಾಳ್ಯ, ಬೂದಿ ಪಡಗ, ಪಿ.ಜಿ ಪಾಳ್ಯ, ಹುತ್ತೂರು ಹಾಗೂ ಇನ್ನಿತರೆ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿ, ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ 400 ಕ್ಕೂ ಹೆಚ್ಚು ಗ್ರಾಮಗಳಿದ್ದು, ಗಿರಿಜನರು, ಪರಿಶಿಷ್ಟ ಜಾತಿ, ಪಂಗಡ, ಅಲ್ಪ ಸಂಖ್ಯಾತರು ಸೇರಿದಂತೆ ಇನ್ನು ಹಲವು ವರ್ಗದ ಜನರಿದ್ದಾರೆ ಎಂದರು.

ಈಗಾಗಲೇ ಕಳೆದ ಅವಧಿಯಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ಗಿರಿಜನರು ಹಾಗೂ ಪರಿಶಿಷ್ಟ ಜಾತಿ, ಪಂಗಡದ ಜನರು ವಾಸಿಸುವ ಕಾಲನಿಗಳಲ್ಲಿ ಶೇಕಡ 80ರಷ್ಟು ಸಿ.ಸಿ. ರಸ್ತೆ ಹಾಗೂ ಚರಂಡಿಯನ್ನು ನಿರ್ಮಿಸಲಾಗಿದ್ದು, ಇನ್ನುಳಿದ ಶೇ.20ರಷ್ಟು ಗ್ರಾಮದ ಕೆಲವು ಕಾಲನಿಗಳಲ್ಲಿ ಸಿ.ಸಿ. ಹಾಗೂ ಚರಂಡಿ ರಸ್ತೆ ನಿರ್ಮಿಸಿರಲಿಲ್ಲ. ಈ ಬಗ್ಗೆ ಸರ್ಕಾರಕ್ಕೆ ತಂದು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಈ ದಿಸೆಯಲ್ಲಿ ಲೊಕ್ಕನಹಳ್ಳಿ ಜಿಪಂ ಕ್ಷೇತ್ರ ವ್ಯಾಪ್ತಿಗೆ 1.30 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಇದೀಗ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಗುಣಮಟ್ಟ ಕಾಯ್ದುಕೊಳ್ಳಿ: ಕಾಮಗಾರಿಯ ಜವಾ ಬ್ದಾರಿ ಹೊತ್ತವರು ಗುಣಮಟ್ಟವನ್ನು ಕಾಯ್ದು ಕೊಳ್ಳುವುದರ ಮೂಲಕ ಬೇಗ ಪೂರ್ಣ ಗೊಳಿಸ ಬೇಕು. ಒಂದು ವೇಳೆ ಕಾಮಗಾರಿ ಕಳಪೆಯಿಂದ ಕೂಡಿದ್ದರೆ ಬಿಲ್ ತಡೆಹಿಡಿಯ ಲಾಗುವುದು. ಆಗಾಗಿ ಗುತ್ತಿಗೆದಾರರು ಎಚ್ಚರ ವಹಿಸಬೇಕು. ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು. ಜತೆಗೆ ಗ್ರಾಮಸ್ಥರು ಕಾಮಗಾರಿಯ ವೇಳೆ ಪರಿಶೀಲನೆ ನಡೆಸಬೇಕು. ಕಾಮಗಾರಿ ಕಳಪೆಯಿಂದ ಕೂಡಿದ್ದರೆ ನನ್ನ ಹಾಗೂ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು. ಜಿಪಂ ಸದಸ್ಯೆ ಮರಗದಮಣಿ, ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯೆ ಶಿವಮ್ಮ, ಗ್ರಾಪಂ ಅಧ್ಯಕ್ಷೆ ಪುಷ್ಪಾ, ಸದಸ್ಯರಾದ ದಾಸೇಗೌಡ, ಪುಟ್ಟಮ್ಮ, ಪಿಡಬ್ಯುಡಿ ಇಇ ರಮೇಶ್‌, ಎಇಇ ಮಹದೇವ ಸ್ವಾಮಿ, ಗುತ್ತಿಗೆದಾರರಾದ ನಾತೀಕ್‌ ಪಾಷಾ, ಶಿವಶಂಕರ, ಶಾಂತರಾಜು ಮುಖಂಡ ರಾದ ಕೆ.ಸಿ ಮಾದೇಶ್‌, ರವಿಕುಮಾರ್‌ ಇದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.