ಗಡಿಯಂಚಿನ ಗ್ರಾಮಗಳಿಗೆ ಸಾರಿಗೆ ಕಲ್ಪಿಸಿ


Team Udayavani, Nov 29, 2019, 2:29 PM IST

cn-tdy-1

ಹನೂರು: ರಾಜ್ಯದ ಗಡಿಯಂಚಿನ ಕಂಬಿಗುಡ್ಡ ಮತ್ತು ಅರೆಕಡುವಿನ ದೊಡ್ಡಿ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಜ್ಯದ ಗಡಿ ಗ್ರಾಮ ಪಂಚಾಯ್ತಿಯಾದ ಬೈಲೂರು ವ್ಯಾಪ್ತಿಗೆ ಒಳಪಡುವ ಕಂಬಿಗುಡ್ಡ ಮತ್ತು ಅರೆಕಡುವಿನ ದೊಡ್ಡಿ ಗ್ರಾಮಗಳು ಕೊಳ್ಳೇಗಾಲ -ಹಸನೂರು ಘಾಟ್‌ ಮುಖ್ಯ ರಸ್ತೆಯಿಂದ ಸುಮಾರು5 ಕಿ.ಮೀ ದೂರವಿದೆ. ಗ್ರಾಮ ಪಂಚಾಯ್ತಿ ಕೇಂದ್ರಸ್ಥಾನ ಬೈಲೂರಿನಿಂದ 3 ಕಿ.ಮೀ ಅಂತರವಿದೆ. ಇಲ್ಲಿನ ಗ್ರಾಮಸ್ಥರು ದೈನಂದಿನ ಚಟುವಟಿಕೆಗಳಿಗಾಗಿ ಮತ್ತು ಶಾಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಡೆದುಕೊಂಡೇ ಬರಬೇಕಾದ ಪರಿಸ್ಥಿತಿಯಿದೆ.

ವನ್ಯಜೀವಿಗಳ ಹಾವಳಿ: ಕಂಬಿಗುಡ್ಡ ಮತ್ತು ಅರೆಕಡುವಿನ ದೊಡ್ಡಿ ಗ್ರಾಮಗಳಿಂದ ಸುಮಾರು 20ಕ್ಕೂ ಹೆಚ್ಚು ಗಿರಿಜನ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ನಡುದುಕೊಂಡೇ ಹೋಗಬೇಕಿದೆ. ಈ ಗ್ರಾಮಗಳು ಕರ್ನಾಟಕ ಮತ್ತು ತಮಿಳುನಾಡನ್ನು ಬೇರ್ಪಡಿಸುವ ಗಡಿಗ್ರಾಮಗಳಾಗಿದ್ದು ಸುತ್ತಲೂ ದಟ್ಟ ಅರಣ್ಯದಿಂದ ಕೂಡಿದೆ. ಈ ವಿದ್ಯಾರ್ಥಿಗಳು ಶಾಲೆಗೆ ತೆರಳು ವೇಳೆಹಲವಾರು ಬಾರಿ ಕಾಡುಹಂದಿಗಳು, ಕಾಡಾನೆ ಸೇರಿದಂತೆ ಹಲವಾರು ವನ್ಯಜೀವಿಗಳು ಪ್ರತ್ಯಕ್ಷವಾಗಿವೆ.

ಅಲ್ಲದೆ, ಹಲವಾರು ಬಾರಿ ಜಮೀನುಗಳಿಂದ ಹಂದಿಗಳು ಓಡಾಡುವುದನ್ನು ಕಂಡು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಸಂಜೆಯಾಗುತ್ತಲೇ ಕಾಯಬೇಕಾದ ಪರಿಸ್ಥಿತಿ: ಈ ಎರಡೂ ಗ್ರಾಮಗಳ ಗ್ರಾಮಸ್ಥರು ಯಾರಾದರೂ ವೈದ್ಯಕೀಯ ತಪಾಸಣೆಗೆ, ಸಂಬಂಧಿಕರ ಮನೆಗಳಿಗೆ, ಇನ್ನಿತರೆ ಕೆಲಸ ಕಾರ್ಯಗಳಿಗೇನಾದರೂ ತೆರಳಿದರೆ ಸಂಜೆಯಾಗುತ್ತಲೇ ಸಂಜೆ ವೇಳೆಗೆ ಆಗಮಿಸುವ ಬಸ್ಸು ಬೈಲೂರು ತಲುಪಿದ ಬಳಿಕ ಆ ಬಸ್ಸಿನಲ್ಲಿ ಬಂದವರನ್ನು ಕರೆದುಕೊಂಡು ಗ್ರಾಮಗಳತ್ತ ತೆರಳಲು ಮತ್ತೂಬ್ಬರು ಕಾಯಬೇಕಾದ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಗ್ರಾಮಸ್ಥರು ವನ್ಯಜೀವಿಗಳ ದಾಳಿಯ ಭೀತಿಯಲ್ಲಿಯೇ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.

ಈ ಹಿನ್ನೆಲೆ ಬೈಲೂರು ಗ್ರಾಮದವರೆಗೆ ಆಗಮಿಸುವ ಬಸ್ಸನ್ನೇ ಬೆಳಗ್ಗೆ ಒಂದು ಬಾರಿ ಸಂಜೆ ಒಂದು ಬಾರಿ ಕಂಬಿಗುಡ್ಡ ಗ್ರಾಮದವರೆಗೆ ವಿಸ್ತರಿಸಿದಲ್ಲಿ ಈ ಭಾಗದ ಜನರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅರೆಕಡುವಿನದೊಡ್ಡಿ ಮತ್ತು ಕಂಬಿಗುಡ್ಡ ಗ್ರಾಮಗಳ ರಸ್ತೆಯು ಉತ್ತಮ ಸ್ಥಿತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಮಾದರಿಯಲ್ಲಿ ನಿರ್ಮಾಣವಾಗಿದೆ. ಆದ್ದರಿಂದ ಸಾರಿಗೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಬೆಳಗ್ಗೆ ಶಾಲಾ ಪ್ರಾರಂಭವಾಗುವ ವೇಳೆಗೆಮತ್ತು ಸಂಜೆಯ ವೇಳೆಗೆ ಒಮ್ಮೆ ಕಂಬಿಗುಡ್ಡದವರೆಗೆ ಬಸ್‌ ಸೌಲಭ್ಯ ವಿಸ್ತರಿಸಿದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ. –ಮಾದೇಗೌಡ, ಗ್ರಾಮ ಪಂಚಾಯ್ತಿ ಸದಸ್ಯ

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.