ಕೋವಿಡ್‌ ತಡೆಗೆ ಮುಂಜಾಗ್ರತೆ ಪಾಲಿಸಿ


Team Udayavani, Jun 29, 2020, 6:14 AM IST

kovid-palisi

ಚಾಮರಾಜನಗರ: ಮುಂಬರುವ 10 ದಿನಗಳಲ್ಲಿ ಕೋವಿಡ್‌-19 ವೈರಸ್‌ ತೀವ್ರವಾಗಿ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಅತ್ಯಂತ ಸಂಯಮ ಮತ್ತು ಜವಾಬ್ದಾರಿಯಿಂದ ವರ್ತಿಸಿ ಜಿಲ್ಲಾ ಡಳಿತ ನೀಡುವ  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿ ಸುವ ಮೂಲಕ ಜಿಲ್ಲೆಯನ್ನು ಸುರಕ್ಷಿತವಾಗಿಡಲು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಮನವಿ ಮಾಡಿದರು.

ಲಾಕ್‌ಡೌನ್‌ ಸಂದರ್ಭದಲ್ಲಿ ಜಿಲ್ಲೆಯ ಜನತೆ ತೋರಿದ ಪ್ರಬುದ ವರ್ತನೆ ಈಗ  ಅತ್ಯಗತ್ಯವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರು ಅತ್ಯಂತ ಎಚ್ಚರಿಕೆ ಹಾಗೂ ಜಾಗರೂಕತಾ ಕ್ರಮಗಳಿಗೆ ತುರ್ತಾಗಿ ಗಮನ ನೀಡಬೇಕಿದೆ. ಅನವಶ್ಯಕವಾಗಿ ಸ್ನೇಹಿತರ, ಹಿತೈಷಿಗಳು ಹಾಗೂ ಹತ್ತಿರದ ಸಂಬಂಧಿಗಳನ್ನು ಭೇಟಿ ಮಾಡದಿರುವುದು ಒಳಿತು ಎಂದು ತಿಳಿಸಿದ್ದಾರೆ.

ಅನಗತ್ಯ ಪ್ರಯಾಣಿಸಬೇಡಿ: ಗ್ರಾಮಗಳಿಂದ ಅನಗತ್ಯ ವಾಗಿ ನಗರ, ಪಟ್ಟಣ, ಪ್ರದೇಶಗಳಿಗೆ ಹೋಗಬಾರದು, ಅಕ್ಕಪಕ್ಕದ ಜಿಲ್ಲೆಗಳು ಹಾಗೂ ಊರುಗಳಿಗೂ ಪ್ರಯಾಣ ಮಾಡುವುದು ಸುರಕ್ಷಿತವಲ್ಲ. ಅಂತಾರಾಜ್ಯ ಪ್ರಯಾಣ ಕೈಗೊಳ್ಳದೇ  ಇರುವುದು ಅತ್ಯಂತ ಕ್ಷೇಮ. ಮನೆಗಳಲ್ಲಿ ಶುಭ ಕಾರ್ಯಗಳನ್ನು ಸದ್ಯಕ್ಕೆ ಮುಂದೂ ಡುವುದು ಒಳ್ಳೆಯದ ಎಂದು ಹೇಳಿದ್ದಾರೆ.

ಮಾಸ್ಕ್ ಕಡ್ಡಾಯ: ಕಾಪಾಡಿಕೊಳ್ಳುವ ಮಹತ್ತರ ಉದ್ದೇಶ ದಿಂದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸಾಬೂನು, ಸ್ಯಾನಿಟೈಸರ್‌ ಬಳಸಿ ಕೈತೊಳೆದುಕೊಳ್ಳುವುದನ್ನು ಮರೆಯಬಾರದು.  ಮನೆಗಳಲ್ಲಿಯೇ ಇದ್ದು ಸುರಕ್ಷಿತವಾಗಿರಬೇಕು. ಸುರ ಕ್ಷತೆ ಎಂಬುದು ವೈಯಕ್ತಿಕವಾಗಿ ಮಾತ್ರವಲ್ಲ ನಿಮ್ಮೆಲ್ಲರ ಪ್ರೀತಿಪಾತ್ರರ ಸುರಕ್ಷತೆಗೂ ಎಂಬುದನ್ನು ಮನಗಾಣಬೇಕು ಎಂದು ಜಿಲ್ಲಾಧಿಕಾರಿ ಆರ್‌. ರವಿ ಅವರು ಕಳಕಳಿ ವ್ಯಕ್ತಪಡಿಸಿದ್ದಾರೆ.

ಸಂಪೂರ್ಣ ಸಹಕರಿಸಿ: ಜೀವ ಉಳಿಯಬೇಕು, ಜೀವನವೂ ನಡೆಯ ಬೇಕು, ಪ್ರಸ್ತುತ ಎದುರಾಗುತ್ತಿರುವ ಸಂಕಷ್ಟ ಸಮಯದಲ್ಲಿ ಜಿಲ್ಲೆಯ ಜನರು ಅತ್ಯಂತ ಜಾಗ್ರತೆ ಯಿಂದ ವರ್ತಿಸಬೇಕು. ಈ ಮೂಲಕ ಇತರರಿಗೂ ಮಾದರಿಯಾಗಬೇಕು.  ಕೋವಿಡ್‌ 19 ತಡೆಯಲು ಸಮಸ್ತ ಜನತೆ ಜಿಲ್ಲಾಡಳಿತ ನೀಡುವ ಪ್ರತಿ ಯೊಂದು ಸೂಚನೆ, ಸಲಹೆಯನ್ನು ಚಾಚು ತಪ್ಪದೇ  ಪಾಲಿಸುವ ಮೂಲಕ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ. ಆರ್‌.ರವಿ  ಪ್ರಕಟಣೆಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.