ಸಾರ್ವಜನಿಕರೇ, ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡಿ


Team Udayavani, Oct 22, 2021, 12:55 PM IST

ಸಾರ್ವಜನಿಕರೇ, ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡಿ

ಚಾಮರಾಜನಗರ: ಪ್ರತಿದಿನ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಪೊಲೀಸರ ಸೇವೆ, ಕರ್ತವ್ಯ ಪಾಲನೆ ಶ್ಲಾಘನೀಯವಾದದ್ದು ಎಂದು ನ್ಯಾಯಾಧೀಶ ಸದಾಶಿವ ಎಸ್‌. ಸುಲ್ತಾನ್‌ಪುರಿ ಹೇಳಿದರು. ನಗರದ ಜಿಲ್ಲಾ ಪೊಲೀಸ್‌ ಕವಾಯಿತು ಮೈದಾನದಲ್ಲಿ ಗುರುವಾರ, ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ನಡೆದ ಪೊಲೀಸ್‌ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದರು.

ನಿತ್ಯ ಹಗಲು ಇರುಳೆನ್ನದೇ ನಾಗರಿಕ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಕಾರ್ಯ ದೇಶದ ಗಡಿ ಕಾಯುವ ಸೈನಿಕರಿಗೆ ಸಮಾನವಾಗಿದೆ. ಕಾನೂನಿನ ರಕ್ಷಣೆಯಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ನ್ಯಾಯಾಂಗ ಹಾಗೂ ಪೊಲೀಸ್‌ ಇಲಾಖೆ ಸಮನ್ವ ಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮಾತನಾಡಿ, ಪೊಲೀಸ್‌ ಹುತಾತ್ಮರ ದಿನ ಆಚರಣೆ ವಿಶಿಷ್ಠ ಕಾರ್ಯಕ್ರಮವಾಗಿದೆ. ಸಾರ್ವಜನಿಕ ಬದುಕು, ಆಸಿ-ಪಾಸ್ತಿ ಹಾಗೂ ಜೀವ ರಕ್ಷಣೆಗೆ ಮುಂದಾಗಿರುವ ಪೊಲೀಸರ ತ್ಯಾಗ, ಬಲಿದಾನವನ್ನು ಸ್ಮರಿಸುವುದು ನಮ್ಮ ಪರಂಪರೆ ಯಾಗಿದೆ ಎಂದರು. ಎಸ್ಪಿ ದಿವ್ಯಾ ಸಾರಾ ಥಾಮಸ್‌ ಅವರು ಹುತಾತ್ಮರ ಹೆಸರುಗಳನ್ನು ವಾಚನ ಮಾಡಿ ಮಾತನಾಡಿ, ಭಾರತ ಚೀನಾ ಯುದ್ಧದಲ್ಲಿ ವೀರಮರಣವನ್ನಪ್ಪಿದ ಪೊಲೀಸರ ಸ್ಮರಣೆ ಕಾರ್ಯ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕರ್ನಾಟಕದ 16 ಮಂದಿ ಸೇರಿದಂತೆ ದೇಶದಲ್ಲಿ ಒಟ್ಟು 377 ಮಂದಿ ಹುತಾತ್ಮರಾಗಿದ್ದು, ದೇಶಕ್ಕಾಗಿ ಅವರ ಸೇವೆ ಚಿರಸ್ಮರಣೀಯವಾಗಿದೆ ಎಂದರು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ, ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಎಸ್‌.ಆರ್‌. ನಟೇಶ್‌, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು, ಬಿ.ಆರ್‌ .ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ. ಸಂತೋಷ್‌ಕುಮಾರ್‌, ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್‌.ಪಿ. ಗಿರೀಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಹೆಚ್ಚುವರಿ ಎಸ್ಪಿ ಕೆ.ಎಸ್‌. ಸುಂದರರಾಜು, ಅಬಕಾರಿ ಉಪ ಆಯುಕ್ತ ಮುರಳಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಆಸ್ಪತ್ರೆಯ ನೋಡಲ್‌ ಅಧಿಕಾರಿ ಡಾ. ಮಹೇಶ್‌, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ಆಹಾರ ಇಲಾಖೆಯ ಉಪನಿರ್ದೇಶಕ ಯೋಗಾನಂದ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 ಪ್ರತಿ ಠಾಣೆಯಲ್ಲಿ ಸಿವಿಲ್‌ ಕೋಡ್‌ ಪುಸ್ತಕ ಇಡಿ-  ಜಿಲ್ಲೆಯ ಪ್ರತಿ ಪೊಲೀಸ್‌ ಠಾಣೆಗಳಲ್ಲಿ ಸಿವಿಲ್‌ ಕೋಡ್‌ ನಿಯಮಗಳನ್ನು ಒಳಗೊಂಡಿರುವ ಪುಸ್ತಕಗಳನ್ನು ಇಡುವುದರಿಂದ ಪೊಲೀಸರು ಕಾನೂನನ್ನು ಸಮರ್ಪಕವಾಗಿ ಅರಿಯಲು ನೆರವಾಗಲಿದೆ. ಅಲ್ಲದೆ ಪ್ರಕರಣಗಳ ತನಿಖಾ ಸಂದರ್ಭದಲ್ಲಿ ತಾಂತ್ರಿಕತೆಯ ಸಹಾಯ ಪಡೆಯಬಹುದು. ತಾಂತ್ರಿಕತೆಯಿಂದ ತಪ್ಪಿತಸ್ಥರನ್ನು ಸುಲಭವಾಗಿ ಪತ್ತೆ ಹಚ್ಚಬಹುದು ಎಂದು ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ತಿಳಿಸಿದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.