Public toilet: ಶತಮಾನದ ಶಾಲಾವರಣದಲಿ ಸಾರ್ವಜನಿಕ ಶೌಚಾಲಯ


Team Udayavani, Nov 28, 2023, 4:06 PM IST

Public toilet: ಶತಮಾನದ ಶಾಲಾವರಣದಲಿ ಸಾರ್ವಜನಿಕ ಶೌಚಾಲಯ

ಚಾಮರಾಜನಗರ: ನಗರದ ಶತಮಾನ ಕಂಡ ಸರ್ಕಾರಿ ಶಾಲೆಯಾದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ನಗರಸಭೆ ಮುಂದಾಗಿದ್ದು, ಸಾಹಿತಿಗಳು, ಚಿಂತಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಪೇಟೆ ಪ್ರೈಮರಿ ಶಾಲೆ 118 ವರ್ಷ ಹಳೆಯದಾಗಿದ್ದು, ಪಾರಂಪರಿಕ ಕಟ್ಟಡವನ್ನು ಹೊಂದಿದೆ. 1 ರಿಂದ 7ನೇ ತರಗತಿಯವರೆಗೆ, ಈ ಸಾಲೆಯಲ್ಲಿ ನೂರಾರು ವಿದ್ಯಾ ರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಇದನ್ನು ಪುನರುಜ್ಜೀವನಗೊಳಿಸ ಬೇಕೆಂದು ಹಿರಿಯ ವಿದ್ಯಾರ್ಥಿಗಳು, ಸಾರ್ವಜನಿಕರು ಒತ್ತಾಯಿಸಿದ್ದರು.

ಶೌಚಾಲಯ ನಿರ್ಮಾಣಕ್ಕಾಗಿ ಜಾಗ ಗುರುತು: ಆದರೆ ಶಾಲಾ ಕಟ್ಟಡ ಪುನರ್‌ನಿರ್ಮಾಣ ಮಾಡುವು ದಿರಲಿ, ಶಾಲೆಯ ಮುಂದೆ ವಿಶಾಲವಾದ ಆವರಣ ವಿದ್ದು, ಇಲ್ಲಿ ಸಾರ್ವಜನಿಕ ಬಳಕೆಗಾಗಿ ಸ್ನಾನಗೃಹ ಹಾಗೂ ಶೌಚಾಲಯ ನಿರ್ಮಾಣ ಮಾಡಲು ನಗರ ಸಭೆ ಆಯುಕ್ತರು ಮತ್ತು ಅಧಿಕಾರಿಗಳು ಮುಂದಾ ಗಿದ್ದಾರೆ. ಈಗಾಗಲೇ ನಗರಸಭೆ ಆಯುಕ್ತ ರಾಮ ದಾಸ್‌ ಮತ್ತು ಸಿಬ್ಬಂದಿ ಶಾಲೆಯ ಮೈದಾನದಲ್ಲಿ 30/40 ಅಡಿ ಜಾಗವನ್ನು ಶೌಚಾಲಯ ನಿರ್ಮಾಣ ಕ್ಕಾಗಿ ಗುರುತಿಸಿದ್ದಾರೆ.

ಶೈಕ್ಷಣಿಕ ವಾತಾವರಣವೇ ಕಲುಷಿತವಾಗಲಿದೆ: ಇಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾದಲ್ಲಿ ಶಾಲೆಯ ಶೈಕ್ಷಣಿಕ ವಾತಾವರಣವೇ ಕಲುಷಿತವಾಗ ಲಿದೆ ಎಂದು ಎಸ್‌ಡಿಎಂಸಿ ಸದಸ್ಯರು, ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹಿರಿಯ ಸಾಹಿತಿಗಳಾದ ಡಾ. ಹನೂರು ಕೃಷ್ಣಮೂರ್ತಿ ಮತ್ತು ಪ್ರೊ. ಜಿ.ಎಸ್‌. ಜಯದೇವ್‌ ಸೇರಿದಂತೆ ಚಿಂತಕರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

ಪಾರಂಪರಿಕ ಶೈಲಿಯ ಕಟ್ಟಡ: ಸರ್ಕಾರಿ ಪೇಟೆ ಹಿರಿಯ ಪ್ರಾಥಮಿಕ ಶಾಲೆಯು ಶತಮಾನದಾಟಿದ ಶಾಲೆಯಾಗಿದ್ದು, ಪಾರಂಪರಿಕ ಶೈಲಿಯ ಕಟ್ಟಡಗಳ ನ್ನೊಳಗೊಂಡ, ವಿಶಾಲ ಮೈದಾನವನ್ನೂ ಹೊಂದಿರುವ ಈ ಶಾಲೆಯು ನಗರದ ಹೃದಯ ಭಾಗದಲ್ಲಿರುವುದು ಇದರ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ. ದೂರದೃಷ್ಟಿ ಯುಳ್ಳ ತಾವು ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಇಂಟ್ಯಾಕ್‌ ಸಂಸ್ಥೆಯ ಮೂಲಕ ಪಾರಂಪರಿಕ ಶೈಲಿ ಯಲ್ಲೇ ಪುನರ್‌ನಿರ್ಮಾಣ ಮಾಡಿಸುವ ಪ್ರಯತ್ನದಲ್ಲಿ ದ್ದೀರಿ ಎಂದು ಪತ್ರಿಕೆಗಳು ವರದಿ ಮಾಡಿವೆ. ತಮ್ಮ ಈ ಶ್ಲಾಘನೀಯ ಪ್ರಯತ್ನವನ್ನು ನಾವೆಲ್ಲರೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇವೆ. ಆದರೆ ಸದರಿ ಶಾಲೆಯ ಆವರಣದಲ್ಲಿ ಹೈಟೆಕ್‌ ಸಾರ್ವಜನಿಕ ಶೌಚಾ ಲಯವೊಂದನ್ನು ನಿರ್ಮಿಸುವ, ಯೋಜನೆ ಯೊಂದು ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಯೆಂದು ಮತ್ತು ಈಗಾಗಲೇ ನಿರ್ಮಾಣ ಕಾರ್ಯಕ್ಕೆ ಸಂಬಂಧಪಟ್ಟ ಪೂರ್ವ ಸಿದ್ಧತೆಗಳನ್ನು ನಗರಸಭೆಯ ಪೌರಾಯುಕ್ತರು ಕೈಗೊಂಡಿದ್ದಾರೆಂದು ತಿಳಿದು ಬಂದಿದೆ.

ಅನ್ಯ ಉದ್ದೇಶಕ್ಕೆ ಶಾಲಾ ಆವರಣ ಬಳಸಬೇಡಿ: ಶತಮಾನ ದಾಟಿದ ಶಾಲೆಯ ಆವರಣವನ್ನು ಅನ್ಯ ಉದ್ದೇಶಗಳಿಗೆ ಹೀಗೆ ಬಳಸಲು ಪ್ರಾರಂಭಿಸಿದರೆ, ಶತಮಾನಗಳ ಕಾಲ ಸಮಾಜದ ಭಾಗವಾಗಿ ಬೆಳೆದು ಬಂದ ಈ ಶಿಕ್ಷಣ ಸಂಸ್ಥೆಯನ್ನು ನಾವೇ ನಾಶ ಮಾಡಿದ ಹಾಗೆ ಆಗುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಆಕ್ರಮಣಶೀಲವಾಗಿ ಸಂಭವಿಸುತ್ತಿರುವ ಪ್ರಗತಿ ಮಕ್ಕಳ ಶಿಕ್ಷಣವನ್ನು ಅಂಚಿಗೆ ತಳ್ಳುತ್ತಿದೆ.

ಈ ಸಂದರ್ಭದಲ್ಲಿ ತಾವು ದಯಮಾಡಿ ಶಾಲಾವರಣವನ್ನು ಶೌಚಾಲಯ ಇತ್ಯಾದಿ ಯಾವುದೇ ಅನ್ಯ ಉದ್ದೇಶಗಳಿಗೆ ಬಿಟ್ಟುಕೊಡದಂತೆ ತಡೆಯಾಜ್ಞೆ ಹೊರಡಿಸಬೇಕೆಂದು ಮತ್ತು ಶತಮಾನ ದಾಟಿದ ತಾಲೂಕಿನ ಅತಿಮುಖ್ಯವಾದ ಈ ಶಾಲೆಯನ್ನು ಪುನರುಜ್ಜೀವನಗೊಳಿಸಲು ತೀವ್ರ ಕ್ರಮಗಳನ್ನು ಕೈಗೊಳ್ಳಬೇಕೆಂದ ಈ ಮೂಲಕ ಕೋರುತ್ತೇವೆ ಎಂಬ ಪತ್ರವನ್ನು ಬರೆದಿದ್ದಾರೆ.

ಈ ಪತ್ರಕ್ಕೆ ಹನೂರು ಕೃಷ್ಣಮೂರ್ತಿ ಮತ್ತು ಜಿಎಸ್‌ ಜಯದೇವ್‌ ಅವರಲ್ಲದೇ, ರಂಗಕರ್ಮಿ ಕೆ. ವೆಂಕಟರಾಜು, ಸಾಹಿತಿ ಸೋಮಶೇಖರ ಬಿಸಲವಾಡಿ, ಗಾಯಕ ಸಿ.ಎಂ. ನರಸಿಂಹಮೂರ್ತಿ, ಮುಖ್ಯ ಶಿಕ್ಷಕ ನಾಗೇಂದ್ರ, ಶಿಕ್ಷಕಿ ಸುನೀತಮ್ಮ, ಪರಿಸರವಾದಿ ಡಿ.ಎಸ್‌. ದೊರೆಸ್ವಾಮಿ, ಹಿರಿಯ ಪತ್ರಕರ್ತ ಅಬ್ರಹಾಂ ಡಿಸಿಲ್ವ, ರಂಗನಿರ್ದೇಶಕಿ ಚಿತ್ರಾ, ನಳಿನಿ ವೆಂಕಟರಾಜು ಮತ್ತಿತರರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.