ವಿದೇಶಗಳಿಗೂ ಗೊರವರ ಕುಣಿತ ಕಲೆ ಪಸರಿಸಿದ ಪುಟ್ಟಮಲ್ಲೇಗೌಡ


Team Udayavani, Jun 24, 2019, 3:00 AM IST

videsha

ಚಾಮರಾಜನಗರ: ಜಿಲ್ಲೆಯ ಮತ್ತು ಕರ್ನಾಟಕದ ಜಾನಪದ ಸಾಂಸ್ಕೃತಿಕ ರಾಯಭಾರಿಯಾಗಿ ದೇಶ ಹಾಗೂ ಪ್ರಪಂಚದೆಲ್ಲೆಡೆ ಚಾಮರಾಜನಗರದ ಗೊರವರ ಕುಣಿತ ಕಲೆಯನ್ನು ಪಸರಿಸಿದ ಕೀರ್ತಿ ಪುಟ್ಟಮಲ್ಲೇಗೌಡರಿಗೆ ಸಲ್ಲುತ್ತದೆ ಎಂದು ಸಾಹಿತಿ ಹಾಗೂ ಪ್ರಾಂಶುಪಾಲ ಬಿ.ಮಹೇಶ್‌ ಹರವೆ ಹೇಳಿದರು.

ತಾಲೂಕಿನ ಆಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಆತ್ಮೀಯ ರಂಗ ಪ್ರಯೋಗಾಲಯ ಟ್ರಸ್ಟ್‌ ಆಯೋಜಿಸಿದ್ದ ನಟ, ನಿರ್ದೇಶಕ, ನಾಟಕಕಾರ ಡಾ. ಗಿರೀಶ್‌ ಕಾರ್ನಾಡ್‌ ಮತ್ತು ಗೊರವರ ಕುಣಿತ ಕಲಾವಿದ ಪುಟ್ಟಮಲ್ಲೇಗೌಡರಿಗೆ ರಂಗನಮನ ಕಾರ್ಯಕ್ರಮದಲ್ಲಿ ಡಾ.ಗಿರೀಶ್‌ ಕಾರ್ನಾಡ್‌, ಪುಟ್ಟಮಲ್ಲೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ನೆನಪಾಗಿರುವ ಪುಟ್ಟಮಲ್ಲೇಗೌಡರು: ಜಿಲ್ಲೆಯ ರಾಮಸಮುದ್ರದಲ್ಲಿ ಜನಿಸಿ ಗೊರವನ ವೇಷ ತೊಟ್ಟು ಮನೆಮನೆಗೆ ತೆರಳಿ ಭಿಕ್ಷೆ ಬೇಡುತ್ತ ತಮ್ಮ ಜೀವನೋಪಾಯವನ್ನು ಪುಟ್ಟಮಲ್ಲೇಗೌಡರು ಆರಂಭಿಸಿದರು. ಮಲೆ ಮಹದೇಶ್ವರ ಬೆಟ್ಟದಿಂದ ತಮ್ಮ ಜನಪದ ಪಯಣ ಪ್ರಾರಂಭಿಸಿ ದೆಹಲಿ, ಮಲೇಶಿಯಾ, ಶ್ರೀಲಂಕಾ, ಅಂಡಮಾನ್‌ ಮತ್ತಿತರ ಕಡೆ ಸಂಚರಿಸಿ ಗೊರವರ ಕುಣಿತವನ್ನು ಪರಸರಿಸಿದರು.

ಪುಟ್ಟಮಲ್ಲೇಗೌಡರಿಂದ ಜಿಲ್ಲೆಗೆ ಗೌರವ ದೊರೆತಿದೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಆಕಾಡೆಮಿ ಪ್ರಶಸ್ತಿ, ಯಕ್ಷಗಾನ ಆಕಾಡೆಮಿ ಪ್ರಶಸ್ತಿ ಸೇರಿದಂತೆ ಇನ್ನು ಹಲವಾರು ಪ್ರಶಸ್ತಿಗಳು ದೊರೆತಿದ್ದು, ಇವರು ಗೊರವರ ಕುಣಿತ ಕಲಾಸೇವೆಯಿಂದ ಇನ್ನು ನಮ್ಮೊಂದಿಗೆ ಅಚ್ಚಳಿಯದ ನೆನಪಾಗಿ ಉಳಿದಿದ್ದಾರೆ ಎಂದು ತಿಳಿಸಿದರು.

ಸೃಜನಶೀಲ ಪ್ರತಿಭೆ: ಗಿರೀಶ್‌ ಕಾರ್ನಾಡ್‌ ಅವರು ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಕ್ರಿಯಾಶೀಲ ನಟರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ ತಮ್ಮ ಸೃಜನಶೀಲ ಪ್ರತಿಭೆಯಿಂದ ದೇಶ ಹಾಗೂ ವಿಶ್ವದೆಲ್ಲೆಡೆ ಚಿರಪರಿಚಿತರಾಗಿದ್ದಾರೆ. ಅವರ ನಾಟಕ ಸಾಹಿತ್ಯವು ಜನಪದ, ಪುರಾಣ, ಐತಿಹಾಸಿಕ ವಸ್ತುಗಳನ್ನೊಳಗೊಂಡು ಸಮಕಾಲೀನ ಪ್ರಶ್ನೆಗಳಿಗೆ ಉತ್ತರವನ್ನು ನೀಡುವುದಾಗಿದೆ ಎಂದು ತಿಳಿಸಿದರು.

ಪುಸ್ತಕಗಳನ್ನು ಸ್ನೇಹಿತರಾಗಿಸಿಕೊಳ್ಳಿ: ಸಾಹಿತಿ ಹಾಗೂ ಪ್ರಾಂಶುಪಾಲ ಮಂಜು ಕೋಡಿಉಗನೆ ಮಾತನಾಡಿ, ಬೆಳಕು ಇಲ್ಲದ ದಾರಿಯಲ್ಲಿ ನಡೆಯಬಹುದು. ಆದರೆ ಕನಸೇ ಇಲ್ಲದ ಬದುಕನ್ನು ನಾನು ಸಾಗಿಸುವುದು ಹೇಗೆ ಎಂಬ ಡಾ.ಗಿರೀಶ್‌ ಕಾರ್ನಾಡ್‌ ಅವರ ನಾಟಕದ ಸಾಲಿನಂತೆ ಕಾರ್ನಾಡರು ತಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಹಾಗೂ ಸಾಹಿತ್ಯವನ್ನು ಲೋಕಕ್ಕೆ ಸರ್ಮಪಿಸಿದ್ದಾರೆ.

ವಿದ್ಯಾರ್ಥಿಗಳು ಪುಸ್ತಕವನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು. ನಮ್ಮೂರಿನ ಕಲಾವಿದ ಪುಟ್ಟಮಲ್ಲೇಗೌಡರು ಮತ್ತು ನಾಟಕಕಾರ ಕಾರ್ನಾಡ್‌ರಂತಹ ಚೇತನಗಳನ್ನು ಪ್ರೇರಣೆಯಾಗಿಟ್ಟುಕೊಂಡು ತಮ್ಮ ಗುರಿಗಳನ್ನು ಸಾಧಿಸಬೇಕು ಎಂದು ತಿಳಿಸಿದರು.

ರಂಗ ಗೀತೆಗಳ ಗಾಯನ: ಆತ್ಮೀಯ ರಂಗ ಪ್ರಯೋಗಾಲಯ ಕಲಾವಿದರು ಕಾರ್ನಾಡರ ತುಘಲಕ್‌ ನಾಟಕದ ದೃಶ್ಯವೊಂದರ ವಾಚನಾಭಿನಯ ಹಾಗೂ ಹಯವದನ ನಾಟಕದ ರಂಗಗೀತೆಗಳ ಗಾಯನವನ್ನು ನಡೆಸಿಕೊಟ್ಟರು.

ಟ್ರಸ್ಟ್‌ ಅಧ್ಯಕ್ಷ ಎಸ್‌.ಕೆ.ಕಿರಣ್‌ಕುಮಾರ್‌ ಗಿರ್ಗಿ, ಕಾರ್ಯದರ್ಶಿ ಶಿವುಕುಮಾರ್‌ ಜನ್ನೂರು ಹೊಸೂರು, ಶಿವಶಂಕರ್‌ ಚಟ್ಟು, ಜೇಮ್ಸ್‌ ದೇಶ್ವಳ್ಳಿ, ನವೀನ್‌ ಉಡಿಗಾಲ, ಮೂರ್ತಿಕೆಂಗಾಕಿ, ಆಲೂರು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಬಳಗ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.