ಹನೂರಿಗೆ ಶೀಘ್ರ ಬಸ್‌ ಡಿಪೋ


Team Udayavani, Feb 4, 2019, 7:24 AM IST

hanuri.jpg

ಹನೂರು: ಬಸ್‌ ಡಿಪೋ ಸ್ಥಾಪಿಸಲು 5 ಎಕರೆ ಜಾಗವನ್ನು ರಾಮನಗುಡ್ಡ ಸಮೀಪ ನಿಗದಿಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಕೂಡ ಹನೂರು ಪಟ್ಟಣಕ್ಕೆ ಪ್ರತ್ಯೇಕ ಡಿಪೋ ನೀಡಲು ಆಸಕ್ತಿವಹಿಸಿದ್ದಾರೆ. ಅತಿ ಶೀಘ್ರ ಡಿಪೋ ಮಂಜೂರು ಮಾಡಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ನರೇಂದ್ರ ತಿಳಿಸಿದರು.

ಪಟ್ಟಣದ ಬಸ್‌ ನಿಲ್ದಾಣದಲ್ಲಿ 80 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ನೆಲಹಾಸು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹನೂರು ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು, ಪ್ರತ್ಯೇಕ ಡಿಪೋ ನೀಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ರಾಮನಗುಡ್ಡ ಸಮೀಪ 5 ಎಕರೆ ಜಾಗವನ್ನೂ ನಿಗದಿಪಡಿಸಲಾಗಿತ್ತು.

ಈ ಜಾಗವನ್ನು ಕಂದಾಯ ಇಲಾಖೆಯಿಂದ ಸಾರಿಗೆ ಸಂಸ್ಥೆಗೆ ನೀಡಲು ಜಿಲ್ಲಾಧಿಕಾರಿ ಕೂಡ ಸಮ್ಮತಿ ಸೂಚಿಸಿದ್ದರು. ಆದರೆ, ಕೆಎಸ್ಸಾರ್ಟಿಸಿಯ ಜಿಲ್ಲಾಧಿಕಾರಿಗಳು ಈ ಸ್ಥಳ ಪಟ್ಟಣದ ಬಸ್‌ ನಿಲ್ದಾಣದಿಂದ 6 ಕಿ.ಮೀ. ದೂರದಲ್ಲಿದ್ದು, ಪ್ರತಿ ಬಸ್‌ ಸಂಚರಿಸಲು 12 ಕಿ.ಮೀ. ಸಂಚಾರ ಮಾಡಬೇಕಿರುವುದರಿಂದ ಸಂಸ್ಥೆಗೆ ನಷ್ಟವಾಗುವ ಸಂಭವವಿದೆ ಎಂದು ವರದಿ ನೀಡಿದ್ದರು.

ಬಳಿಕ ಹನೂರು ಪಟ್ಟಣದಲ್ಲಿ ಜಾಗ ಖರೀದಿಸಲು ಹೆಚ್ಚಿನ ಹಣ ಖರ್ಚಾಗುವುದರಿಂದ ಸಾಧ್ಯವಿಲ್ಲ ಎಂದು ಮತ್ತೂಮ್ಮೆ ಮನವಿ ಮಾಡಿದಾಗ ಹಾಲಿ ನಿಗದಿಪಡಿಸಿರುವ ಜಾಗದಲ್ಲೇ ಮಂಜೂರಾತಿ ನೀಡಲು ಆಡಳಿತಾತ್ಮಕ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಅತಿ ಶೀಘ್ರದಲ್ಲಿಯೇ ಮಂಜೂರಾತಿ ದೊರೆಯಲಿದೆ ಎಂದು ತಿಳಿಸಿದರು.

ಉತ್ತಮ ಆದಾಯ: ಕೊಳ್ಳೇಗಾಲ ಡಿಪೋದಲ್ಲಿ ಉತ್ತಮ ಆದಾಯ ಬರುತ್ತಿರುವುದರಿಂದ ಮತ್ತು ಕ್ಷೇತ್ರ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರಾ ಸಂದರ್ಭಗಳಲ್ಲಿ ಲಕ್ಷಾಂತರ ಜನರು ಭೇಟಿ ನೀಡುವುದರಿಂದ ಹಾಗೂ ಅಮಾವಾಸ್ಯೆ, ಹುಣ್ಣಿಮೆ ಸಂದರ್ಭಗಳಲ್ಲೀ ಅತಿ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಿರುವುದರಿಂದ ಕೊಳ್ಳೇಗಾಲ ವಿಭಾಗ ಉತ್ತಮ ಆದಾಯದಲ್ಲಿದೆ.

ಈ ಹಿನ್ನೆಲೆ ಸಚಿವ ಪುಟ್ಟರಂಗಶೆಟ್ಟಿ ಕೂಡ ಹನೂರು ಪಟ್ಟಣದಲ್ಲಿ ಡಿಪೋ ಪ್ರಾರಂಭಿಸಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಿವಮ್ಮ, ತಾಪಂ ಅಧ್ಯಕ್ಷ ರಾಜೇಂದ್ರ, ಜಿಪಂ ಸದಸ್ಯ ಬಸವರಾಜು, ಪಪಂ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷ ಬಸವರಾಜು, ಚಾಮುಲ್‌ ಅಧ್ಯಕ್ಷ ಗುರುಮಲ್ಲಪ್ಪ, ಟಿಎಪಿಸಿ ಎಂಎಸ್‌ ನಿರ್ದೇಶಕ ಮಾದೇಶ್‌, ಮುಖಂಡರಾದ ಚಿಕ್ಕ ತಮ್ಮಯ್ಯ, ವೆಂಕಟರಮಣನಾಯ್ಡು, ಮಹೇಶ್‌, ರವಿ, ರಾಜು, ನಟರಾಜು, ನಂಜುಂಡೇಗೌಡ, ಮರಿಗೌಡ, ಗುತ್ತಿಗೆದಾರರಾದ ದಾಮೋದರ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.