ಗುಂಡ್ಲುಪೇಟೆ: ಮೊಲ ಬೇಟೆ; ಇಬ್ಬರ ಬಂಧನ
Team Udayavani, Feb 22, 2022, 7:46 PM IST
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿ ಮೊಲ ಬೇಟೆಯಾಡಿ ಮಾಂಸದಡುಗೆ ತಯಾರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಅಣ್ಣೂರುಕೇರಿ ಗ್ರಾಮದ ಮಹೇಶ ಮತ್ತು ಕೋಡಹಳ್ಳಿಯ ಕುಮಾರ ಬಂಧಿತರು. ಫೆ.22 ಬೆಳಗಿನ ಜಾವ 3.30ರ ಸಮಯದಲ್ಲಿ ಕುಂದುಕರೆ ವಲಯದ ಕುಂದುಕರೆ ಶಾಖೆಯ, ಕಡಬೂರು ಬೀಟ್ನ ಕುರುಬರಹುಂಡಿ ಮಡಿವಾಳಪ್ಪನವರ ಜಮೀನಿನ ಹತ್ತಿರ ಇಬ್ಬರು ವ್ಯಕ್ತಿಗಳು ಕಾಡು ಪ್ರಾಣಿಯಾದ ಮೊಲ ಮಾಂಸವನ್ನು ಬೇಯಿಸುತ್ತಿದ್ದರು.
ಈ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ನನ್ನ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶ್ರೀನಿವಾಸನಾಯಕ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಧಿತ ಆರೋಪಿಗಳಿಂದ ದ್ವಿಚಕ್ರ ವಾಹನ, ನಾಡ ಬಂದೂಕು, ತಲೆ ಬ್ಯಾಟರಿ, ಬಿಳಿ ಬಣ್ಣದ ಪ್ಲಾಸ್ಟಿಕ್ ಬ್ಯಾಗ್, ಮಾಂಸ ಬೇಯಿಸಿದ ದೊಡ್ಡ ಪಾತ್ರೆ, ಅನ್ನ ಬೇಯಿಸಿದ ಚಿಕ್ಕ ಪಾತ್ರೆ-1 ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಜಿ.ಎಂ.ಎಫ್.ಸಿ. ನ್ಯಾಯಾಲಯ, ಗುಂಡ್ಲುಪೇಟೆ ರವರ ಮುಂದೆ ಹಾಜರುಪಡಿಸಲಾಗಿದೆ ಎಂದು ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪರಮೇಶ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!