ಮಳೆ, ಅನುದಾನ ಕೊರತೆ: ಬಿಗಡಾಯಿಸಿದ ನೀರಿನ ಸಮಸ್ಯೆ
ತಾಲೂಕಿನಲ್ಲಿ 800-1000 ಅಡಿ ಕೊರೆದರೂ ನೀರು ಸಿಗುತ್ತಿಲ್ಲ ಪಾವತಿಯಾಗದ ಹಳೇ ಬಿಲ್ಗಳು, ದುರಸ್ತಿ ಕಾರ್ಯಗಳು ವಿಳಂಬ
Team Udayavani, Aug 21, 2021, 3:27 PM IST
ಹನೂರು: ಸಮರ್ಪಕ ಮಳೆಯಾಗದ ಹಿನ್ನೆಲೆ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ಕುಸಿದಿದ್ದು, ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ.
ತಾಲೂಕಿಗೆ ಒಳಪಡುವ ಜಿಲ್ಲೆಯ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು,
ವಡಕೆಹಳ್ಳ, ಕೌದಳ್ಳಿ, ಎಲ್ಲೇಮಾಳ, ಕುರಟ್ಟಿ ಹೊಸೂರು, ಮಹಾಲಿಂಗನಕಟ್ಟೆ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇನ್ನು ಈ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು 800-1000 ಅಡಿ ಆಳ ಕೊರೆದರೂ ನೀರು ದೊರಕುತ್ತಿಲ್ಲ. ಈ ಭಾಗದ ಜನರು ಕುಡಿಯುವ ನೀರು ಮತ್ತು ದೈನಂದಿನಬಳಕೆಗಾಗಿ ಗ್ರಾಮ ಸಮೀಪದ ಅಥವಾ ಹೊರವಲಯದ ಜಮೀನುಗಳಿಗೆ ತೆರಳಿ ನೀರು ತರಬೇಕಾದ ಪರಿಸ್ಥಿತಿಯಿದೆ.
ಅನುದಾನದ ಲಭ್ಯವಿಲ್ಲ: ಇನ್ನು ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ನೀರು ಒದಗಿಸಲು ಹೊಸದಾಗಿ ಬೋರ್ವೆಲ್ ಕೊರೆಸಲು ಸಂಬಂಧಪಟ್ಟ ಇಲಾಖೆಯಿಂದ ಅನುದಾನದ ಲಭ್ಯವಿಲ್ಲ. ಹೀಗಾಗಿ ಹೊಸದಾಗಿ ಬೋರ್ವೆಲ್ಗ ಳನ್ನು ಕೊರೆಯಲು ಸಾಧ್ಯ ವಾಗುತ್ತಿಲ್ಲ. ಜೊತೆಗೆ ನೀರಿನ ಲಭ್ಯತೆಯಿರುವ ಜಮೀನುಗಳಿಂದ ಖರೀದಿ ಮಾಡಿ ಸಾರ್ವಜನಿಕರಿಗೆ ನೀಡಲು ಮುಂದಾಗಲೂ ಈ ಹಿಂದಿನ ಸಾಲುಗಳಲ್ಲಿ ಖರೀದಿಸಿರುವ ನೀರಿನ ಬಿಲ್ಗಳ ಬಾಕಿ ಪಾವತಿಯಾಗದಕಾರಣ ಜಮೀನು ಮಾಲೀಕರು ನೀರು ನೀಡಲು ಮುಂದಾಗುತ್ತಿಲ್ಲ.
ಇದನ್ನೂ ಓದಿ:ಸುಗಂಧ ದ್ರವ್ಯ ಹಚ್ಚಿಕೊಂಡ ಅನುಯಾಯಿಗಳು ರಜನೀಶ್ ಹತ್ತಿರ ಸುಳಿಯಲೂ ಸಾಧ್ಯವಿಲ್ಲ!
ಇನ್ನು ಕೆಟ್ಟಿರುವ ಬೋರ್ವೆಲ್ಗಳನ್ನು ದುರಸ್ತಿಪಡಿ ಸಲು ಮ್ಯಕಾನಿಕ್ಗಳಿಗೆ ಸಮರ್ಪಕವಾಗಿ ಬಿಲ್ಗಳನ್ನೂ ಪಾವತಿಸಿಲ್ಲ. ಈ ಹಿನ್ನೆಲೆ ಸ್ಥಳೀಯ ಮ್ಯಕಾನಿಕ್ ಕೆಲಸಗಾರರು ಪಂಚಾಯಿತಿ ಕೆಲಸ ಕಾರ್ಯ ನಿರ್ವಹಿಸಲು ಯಾರೂ ಮುಂದಾಗುತ್ತಿಲ್ಲ.
2ನೇ ಹಂತದ ಯೋಜನೆ ಜಾರಿಗೊಳಿಸಿ: ತಾಲೂಕಿನ 100 ಗ್ರಾಮಗಳಿಗೆ ಮೊದಲ ಹಂತದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಯೋಜನೆ ಜಾರಿಯಾಗದ ಗ್ರಾಮಗಳಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆ 2ನೇ ಹಂತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಂಡು ಶೀಘ್ರ ನೀರಿನ ಬವಣೆಯನ್ನು ತಪ್ಪಿಸಬೇಕುಎಂಬುದುಸಾರ್ವಜನಿಕರ ಒತ್ತಾಯವಾಗಿದೆ.
ದಾನಿಗಳು ಸಹಕಾರ: ತಾಲೂಕಿನ ಗ್ರಾಮಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳಿಂದ ಅಥವಾ ಜನ ಪ್ರತಿನಿಧಿಗಳಿಂದ ಪರಿಹಾರ ದೊರಕದ ಹಿನ್ನೆಲೆ ಜನಾಶ್ರಯ ಟ್ರಸ್ಟ್ ಅಥವಾ ಮಾನಸ ಸೇವಾ ಫೌಂಡೇಷನ್ನ ಸಹಾಯ ಪಡೆದು ಕುಡಿಯುವ ನೀರಿನ ಸಮಸ್ಯೆ ನೀಗಿಸಿಕೊಳ್ಳುತ್ತಿದ್ದಾರೆ.
ತಾಲೂಕಿನ ಸಮರ್ಪಕ ಮಳೆಯಾಗದೆಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಬಗ್ಗೆ ಮತ್ತು ಕೃಷಿ ಚಟುವಟಿಕೆ ಕುಂಠಿತವಾಗಿರುವ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್ ಗಮನಕ್ಕೆ ತರಲಾಗಿದೆ. ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಜಿಲ್ಲಾಧಿಕಾರಿಗೆ
ಮನವಿ ಮಾಡಲಾಗಿದೆ. ಸಾಧ್ಯವಾದಷ್ಟು ಕಡೆ ನೀರಿನ ಸಮಸ್ಯೆ ನಿವಾರಿಸಲು ಕ್ರಮವಹಿಸಲಾಗಿದೆ.
-ಆರ್. ನರೇಂದ್ರ, ಶಾಸಕ
-ವಿನೋದ್ ಎನ್.ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ