ಕೈಕೊಟ್ಟ ಮಳೆ, ಬಾಡಿದ ಬೆಳೆ; ಬೆಳೆಗಾರರಲ್ಲಿ ಆತಂಕ

ರೈತರು ತಮ್ಮ ಜಮೀನಿನಲ್ಲಿ ಬೆಳೆದ ತಂಬಾಕನ್ನು ಮಂಡಳಿ ಶಿಫಾರಸಿನಂತೆ ಮಾಡಬೇಕು.

Team Udayavani, Jun 15, 2022, 6:14 PM IST

ಕೈಕೊಟ್ಟ ಮಳೆ, ಬಾಡಿದ ಬೆಳೆ; ಬೆಳೆಗಾರರಲ್ಲಿ ಆತಂಕ

ಪಿರಿಯಾಪಟ್ಟಣ: ತಾಲೂಕು ಅರೆ ಮಲೆನಾಡು ಪ್ರದೇಶವಾಗಿದ್ದು, ಅವಧಿಗೂ ಮುನ್ನ ಮುಂಗಾರು ಮಳೆ ಸುರಿದ ಕಾರಣ, ರೈತರು ಏಪ್ರಿಲ್‌, ಮೇನಲ್ಲೇ ಪ್ರಮುಖ ವಾಣಿಜ್ಯ ಬೆಳೆಗಳಾದ ಮೆಕ್ಕೆಜೋಳ, ಶುಂಠಿ, ಹೊಗೆಸೊಪ್ಪು (ತಂಬಾಕು) ಬಿತ್ತನೆ ಮಾಡಿದ್ದರು. ಆದರೆ, ಈಗ ಮಳೆ ಕೈಕೊಟ್ಟಿದ್ದು, ಬೆಳೆ ಒಣಗಲಾರಂಭಿಸಿದೆ.

ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದ ಕಾರಣ, ರೈತರ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಆದರೆ, 15 ದಿನಗಳಿಂದ ಮಳೆ ಬೀಳದೆ ಬಿತ್ತಿದ ಬೆಳೆ ಬಿಸಿಲಿಗೆ ಬಾಡಿದೆ. ನೀರಾವರಿ ಸೌಲಭ್ಯ ಹೊಂದಿದ್ದವರಿಗೆ ಯಾವುದೇ ತೊಂದರೆ ಇಲ್ಲ. ಆದರೆ, ಮಳೆ ನಂಬಿಕೊಂಡಿದ್ದವರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ.

ತಾಲೂಕಿನ ಬಹುಭಾಗ ರೈತರು ಹೊಗೆಸೊಪ್ಪು ಮುರಿಯಲಾರಂಭಿಸಿದ್ದರೆ, ಉಳಿದವರು ಸಾಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಕಸಬಾ ಹೋಬಳಿ ಸೇರಿ ತಾಲೂಕಿನ 25 ಸಾವಿರ ಹೆಕ್ಟೇರ್‌ನಲ್ಲಿ ಹೊಗೆಸೊಪ್ಪು ಬೆಳೆಯಲಾಗುತ್ತಿದೆ. ಆದರೆ, ಈ ಬಾರಿ ಮಳೆ ವೈಫ‌ಲ್ಯದಿಂದ ಶೇ.50 ಪ್ರದೇಶದಲ್ಲಿ ಮಾತ್ರ ಹೊಗೆಸೊಪ್ಪನ್ನು ಕೈಗೊಳ್ಳಲಾಗಿದೆ. ಈ ಪೈಕಿ ಶೇ.20ರಷ್ಟು ಬೆಳೆ ಮಾತ್ರ ನೀರಾವರಿಯಿಂದ ಕಟಾವಿಗೆ ಬಂದಿದೆ.

ನೆರಳಿನಲ್ಲಿ ಇಡಬೇಕು: ರೈತರು ತಮ್ಮ ಜಮೀನಿನಲ್ಲಿ ಬೆಳೆದ ತಂಬಾಕನ್ನು ಮಂಡಳಿ ಶಿಫಾರಸಿನಂತೆ ಮಾಡಬೇಕು. ಎಲೆಗಳನ್ನು ಬೆಳಗಿನ ವೇಳೆಯಲ್ಲಿಯೇ ಮುರಿದು, ಅದೇ ದಿನ ಸಂಜೆಯೊಳಗೆ ಬ್ಯಾರೆಲ್‌ನಲ್ಲಿ ಜೋಡಿಸಿ ಹದ ಮಾಡುವ ಕಾರ್ಯ ಪ್ರಾರಂಭಿಸಬೇಕು. ಪ್ರತಿ ಗಿಡದಲ್ಲಿ ಸರಿಯಾಗಿ ಬಲಿತ ಒಂದೆರಡು ಎಲೆ ಮಾತ್ರ ಮುರಿದು ಹದ ಮಾಡಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಮುರಿದ ಎಲೆಗಳು ಜಾಗರೂಕತೆ ವಹಿಸಿ ಬಿಸಿಲಿನ ಬೇಗೆಗೆ ಒಡ್ಡದಂತೆ ಗೋಣಿ ತಾಟಿನಿಂದ ಮುಚ್ಚಿ ತಕ್ಷಣವೇ ಸಾಗಿಸಿ ನೆರಳಿನಲ್ಲಿ ಇಡಬೇಕು.

ತೇವಾಂಶ ಕಳೆದುಕೊಳ್ಳದಿರಲಿ: ಒಂದು ಟಾರ್ಪಲಿನ್‌ ಮೇಲೆ ಎಲೆಗಳನ್ನು ಜೋಡಿಸಿ ಎಲೆ ತೇವಾಂಶ ಕಳೆದುಕೊಳ್ಳದಂತೆ ಜಾಗ್ರತೆ ವಹಿಸಬೇಕು. ಈ ಎಲ್ಲಾ ಪ್ರಕ್ರಿಯೆ ಬಗ್ಗೆ ಕಳೆದ ಬಾರಿ ತಂಬಾಕು ಮಂಡಳಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿ ವಾರಕ್ಕೆ ಒಮ್ಮೆ ಸಲಹೆ ಮಾಡತೊಡಗಿದ್ದರು. ಆದರೆ, ಈ ಬಾರಿ ಜೂನ್‌ ತಿಂಗಳು ಮುಗಿಯುವ ಹಂತಕ್ಕೆ ಬಂದಿದ್ದರೂ ಅಧಿಕಾರಿ, ಸಿಬ್ಬಂದಿ ಒಮ್ಮೆಯೂ ತಿರುಗಿ ನೋಡಿಲ್ಲ.

ತಲೆ ಮೇಲೆ ಕೈಹೊತ್ತು ಕೂತ ಬೆಳೆಗಾರ: ಕಳೆದ ಬಾರಿ ಇದೇ ಅವಧಿಯಲ್ಲಿ ಶೇ.30 ಬೆಳೆ ಕೈಗೆ ಬಂದಿದ್ದ ಹಿನ್ನೆಲೆ ಸೊಪ್ಪು ಮುರಿದು, ಬೇಯಿಸುವ ಕಾಯಕ ಪ್ರಗತಿಯಲ್ಲಿತ್ತು. ಅದೇ ನಿರೀಕ್ಷೆಯಲ್ಲಿ ಈ ಸಾಲಿನಲ್ಲಿಯೂ ತಂಬಾಕು ಬಿತ್ತನೆ ಕೈಗೊಳ್ಳಲಾಗಿತ್ತು. ಸಕಾಲದಲ್ಲಿ ಮಳೆಯಾಗದ ಪರಿಣಾಮ ಬೆಳೆಗಾರರ ತಲೆ ಮೇಲೆ ಕೈಹೊತ್ತು, ಪ್ರತಿನಿತ್ಯ ಮೋಡದತ್ತ ನೋಡುವಂತಾಗಿದೆ.

ಪಿ.ಎನ್‌.ದೇವೇಗೌಡ ಪಿರಿಯಾಪಟ್ಟಣ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.