ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಅರಿವು ಮೂಡಿಸಿ; ಎಂ. ಶ್ರೀಧರ

ಬಾಲ್ಯ ವಿವಾಹವನ್ನು ತಡೆಗಟ್ಟಲು ಪೊಲೀಸರ ಸಂಪೂರ್ಣ ಸಹಕಾರ ಅಗತ್ಯ

Team Udayavani, Jun 30, 2022, 5:15 PM IST

ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಅರಿವು ಮೂಡಿಸಿ; ಎಂ. ಶ್ರೀಧರ

ಚಾಮರಾಜನಗರ: ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ವಿರುದ್ಧ ಅರಿವು ಮೂಡಿಸುವುದರ ಜೊತೆಗೆ ಮಕ್ಕಳ ಸಂಬಂಧಿತ ದೂರುಗಳು ಬಂದಲ್ಲಿ ಮಕ್ಕಳ ಸ್ನೇಹಿಯಾಗಿ ಸ್ಪಂದಿಸಿ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಎಂ. ಶ್ರೀಧರ ಹೇಳಿದರು.

ಬುಧವಾರ, ನಗರದ ಜಿಲ್ಲಾ ಪೊಲೀಸ್‌ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್‌ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ವಿಶೇಷ ಮಕ್ಕಳ ಪೊಲೀಸ್‌ ಕಲ್ಯಾಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಸಾಗಾಣಿಕೆಯ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಮಕ್ಕಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಹಾಗೂ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಸೇರಿದಂತೆ ಮಕ್ಕಳ ರಕ್ಷಣೆ ಸಂಬಂಧಿತ ಕಾಯ್ದೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ಸಂಪೂರ್ಣ ಮಾಹಿತಿ ಹೊಂದಿರಬೇಕು. ಮಕ್ಕಳ ಮೇಲಿನ ದೌರ್ಜನ್ಯ ಸಂಬಂಧಿತ ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಿ ಮಕ್ಕಳ ಸ್ನೇಹಿಯಾಗಿ ವರ್ತಿಸಬೇಕು. ಪೋಕ್ಸೊ, ಬಾಲ್ಯ ವಿವಾಹ ಅಪರಾಧಗಳಿಗೆ ವಿಧಿಸುವ ಶಿಕ್ಷೆಗಳ ಬಗ್ಗೆ ಸಾರ್ವ ಜನಿಕರಿಗೆ ಮನದಟ್ಟು ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕಲು ಪೊಲೀಸ್‌ ಇಲಾಖೆ ಮುಂಚೂಣಿಯಲ್ಲಿದೆ. ಮಕ್ಕಳಿಗೆ ಸಂಬಂಧಿಸಿದ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಿ ದೂರು ದಾಖಲಿಸಿ ವಿಚಾರಣೆ ನಡೆಸುವಂತೆ ಠಾಣಾಧಿಕಾರಿ ಗಳಿಗೆ ಸೂಚಿಸಲಾಗಿದೆ. ಪ್ರತಿ ಠಾಣೆಗಳಲ್ಲಿಯೂ ಸಹ ಈ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮಿ ಮಾತನಾಡಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಮಕ್ಕಳ ದೌರ್ಜನ್ಯ ಸಂಬಂಧಿತ ದೂರುಗಳು ದಾಖಲಾಗುತ್ತಿವೆ. ಈ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಅತಿ ಹೆಚ್ಚು ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬರುವ ಪ್ರದೇಶ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸರಸ್ವತಿ ಮಾತನಾಡಿ, ಬಾಲ್ಯ ವಿವಾಹವನ್ನು ತಡೆಗಟ್ಟಲು ಪೊಲೀಸರ ಸಂಪೂರ್ಣ ಸಹಕಾರ ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹದ ವಿರುದ್ಧ ಅರಿವು ಮೂಡಿಸುವುದರ ಜೊತೆಗೆ ಅಪರಾಧದ ಶಿಕ್ಷೆಯ ಪ್ರಮಾಣ ಕುರಿತು ತಿಳಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಸ್‌. ಸುಂದರರಾಜ್‌, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್‌, ಸಂಪನ್ಮೂಲ ವ್ಯಕ್ತಿಗಳಾದ ಮೈಸೂರಿನ ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್‌ ಅಧಿಕಾರಿ ಜಿ.ಎಸ್‌. ಪ್ರಸನ್ನಕುಮಾರ್‌, ಬೆಂಗಳೂರಿನ ಡಿ.ಜಿ.ಪಿ ತರಬೇತಿ ಕಚೇರಿಯ ಪೊಲೀಸ್‌ ತರಬೇತುದಾರ ಸಿ.ಜಿ. ರೋಹಿತ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.