ಕನ್ನಡದಲ್ಲಿ ಎಂದಿಗೂ ಅಸ್ತಂಗತವಾಗದ ಧ್ರುವತಾರೆ


Team Udayavani, Apr 25, 2019, 3:05 AM IST

kannadaadalli

ಚಾಮರಾಜನಗರ: ಡಾ.ರಾಜ್‌ಕುಮಾರ್‌ ಮೇರು ವ್ಯಕ್ತಿತ್ವದ ಕಲಾವಿದರಾಗಿದ್ದು, ಚಲನಚಿತ್ರಗಳಲ್ಲಿನ ಅವರ ಅಭಿನಯ, ಸುಶ್ರಾವ್ಯ ಕಂಠಸಿರಿ, ಭಕ್ತಿ, ಭಾವಗೀತೆಗಳು ಇಂದಿಗೂ ಅವಿಸ್ಮರಣೀಯವಾಗಿವೆ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಅಭಿಪ್ರಾಯಪಟ್ಟರು.

ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರತ್ನ, ಪದ್ಮಭೂಷಣ, ಮೇರುನಟ ಡಾ.ರಾಜ್‌ಕುಮಾರ್‌ 91ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ‌ರು.

ಪಾತ್ರಕ್ಕೆ ಜೀವ ತುಂಬುತ್ತಿದ್ದ ರಾಜ್‌: ಅಭಿನಯ ಕಲೆಯಲ್ಲಿ ನವರಸಗಳನ್ನು ಮೈಗೂಡಿಸಿಕೊಂಡಿದ್ದ ರಾಜ್‌ಕುಮಾರ್‌ ನಟಿಸಿರುವ ಪ್ರತಿಯೊಂದು ಚಲನಚಿತ್ರಗಳು ಜೀವನಮೌಲ್ಯಗಳು ಹಾಗೂ ಆದಶ‌ìಗಳನ್ನು ಪ್ರಮುಖವಾಗಿ ಪ್ರತಿಪಾದಿಸುತ್ತವೆ. ವಿವಿಧ ಬಗೆಯ ಪಾತ್ರಗಳಿಗೆ ಜೀವತುಂಬುವ ಕಲೆ ರಾಜ್‌ಕುಮಾರ್‌ ಅವರಿಗಿತ್ತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಚಿತ್ರಗಳ ಮೂಲಕ ಕನ್ನಡಾಭಿಮಾನವನ್ನು ಜನರಲ್ಲಿ ಬಿತ್ತಿದ ಜನಾನುರಾಗಿಯಾಗಿದ್ದರು ಎಂದರು.

ಕನ್ನಡ ನಾಡಿಗೆ ಬಲ ನೀಡಿದ ವರನಟ: ಚಿತ್ರರಂಗದ ಮೂಲಕ ಕನ್ನಡ ಭಾಷೆಯನ್ನು ಬೆಳೆಸಿ ಕನ್ನಡದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಡಾ. ರಾಜ್‌ಕುಮಾರ್‌ ಅವರ ಕೊಡುಗೆ ಅಪಾರವಾಗಿದೆ. ಗೋಕಾಕ್‌ ಚಳವಳಿಯಲ್ಲೂ ಸಕ್ರಿಯವಾಗಿ ಪಾಲ್ಗೊಂಡು ಕನ್ನಡ ನಾಡಿಗೆ ಬಲ ನೀಡಿದ ಕೀರ್ತಿ ರಾಜ್‌ಗೆ ಸಲ್ಲುತ್ತದೆ ಎಂದು ತಿಳಿಸಿದರು.

ಡಾ.ರಾಜ್‌ಕುಮಾರ್‌ ಅವರಿಗೆ 70 ವರ್ಷ ದಾಟಿದ್ದರೂ ಉತ್ತಮ ಯೋಗಪಟುವಾಗಿದ್ದರು. ಅವರಲ್ಲಿದ್ದ ಮುಗ್ಧತೆ, ಸರಳ ಸಜ್ಜನಿಕೆಯ ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿಯಾಗಿದೆ. ನಮ್ಮ ಜಿಲ್ಲೆಯವರೇ ಆಗಿರುವುದು ನಮ್ಮ ಹೆಮ್ಮೆ ಎಂದು ಹರ್ಷ ವ್ಯಕ್ತಪಡಿಸಿದರು.

ಪರಿಪೂರ್ಣ ವ್ಯಕ್ತಿತ್ವ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ಡಾ.ರಾಜ್‌ಕುಮಾರ್‌ ಅವರ ಹೆಸರಿನಲ್ಲೇ ಒಂದು ಆಗಾಧ ಶಕ್ತಿಯಿದೆ. ರಾಜ್‌ ಅವರು ಅಭಿನಯ, ಭಾಷೆ, ಪರಿಪೂರ್ಣ ವ್ಯಕ್ತಿತ್ವದಂತಹ ಮೂರು ಮಜಲುಗಳನ್ನು ಹೊಂದಿದ್ದರಿಂದ ಕಲಾದೇವತೆ ಅವರಿಗೆ ಒಲಿದಿದ್ದಳು ಎಂದರು.

ಧ್ರುವತಾರೆ: ಡಾ.ರಾಜ್‌ಕುಮಾರ್‌ ಮಹಾನ್‌ ಕಲಾವಿದರಾಗಿದ್ದರು. ಕನ್ನಡ ಭಾಷೆಯನ್ನು ನಾಡಿನ ಮನೆಮನೆಗಳಿಗೆ, ಹಳ್ಳಿ ಹಳ್ಳಿಗಳಿಗೆ ತಲುಪಿಸಿದ ಗೌರವ ರಾಜ್‌ ಅವರಿಗೆ ಸಲ್ಲಬೇಕು. ಅವರ ಅಭಿನಯದಲ್ಲಿ ಭಾವನಾತ್ಮಕ ಚಿಂತನೆಯಿತ್ತು. ದನಿಯಲ್ಲಿ ರೋಮಾಂಚನವಿತ್ತು. ಆ ಮೂಲಕ ರಾಜ್‌ಕುಮಾರ್‌ ಕನ್ನಡದಲ್ಲಿ ಎಂದೂ ಸಹ ಅಸ್ತಂಗತವಾಗದ ಧ್ರುವತಾರೆಯಾಗಿದ್ದಾರೆ ಎಂದು ತಿಳಿಸಿದರು.

ಪರಿಪೂರ್ಣ ಜೀವನಮೌಲ್ಯ: ಮೈಸೂರು ಆಕಾಶವಾಣಿ ಉದ್ಘೋಷಕ ಹಾಗೂ ಚಿಂತಕ ಉಮೇಶ್‌ ಅವರು ವಿಶೇಷ ಉಪನ್ಯಾಸ ನೀಡಿ ಡಾ ರಾಜ್‌ಕುಮಾರ್‌ ಅವರು ಅಭಿನಯದಲ್ಲಿ ಸಾಗರದಷ್ಟು ಆಳದ ದೈತ್ಯ ಪ್ರತಿಭೆ ಹೊಂದಿದ್ದರು. ಐತಿಹಾಸಿಕ, ಸಾಮಾಜಿಕ, ಪೌರಾಣಿಕ, ಜನಪದ ಕಥೆಗಳ ಆಧಾರಿತ ಎಲ್ಲಾ ಪಾತ್ರಗ‌ಳಲ್ಲಿ ನಟಿಸಿ ಕನ್ನಡ ಪ್ರಜ್ಞೆಯಾಗಿದ್ದಾರೆ. ಇವರ ಚಿತ್ರಗಳು ಪರಿಪೂರ್ಣ ಜೀವನಮೌಲ್ಯಗಳನ್ನು ಎತ್ತಿ ಹಿಡಿದು ಉತ್ತಮ ಅಭಿರುಚಿಯನ್ನು ಸೂಸುವಂತಿದ್ದವು. ಪ್ರತಿಭೆಯ ಜತೆಗೆ ನೋಡುಗರನ್ನು ತನ್ನತ್ತ ಸೆಳೆಯುವ ಶಕ್ತಿ ರಾಜ್‌ ಅವರಿಗಿತ್ತು ಎಂದ‌ರು.

ಕನ್ನಾಢಾಭಿಮಾನ ಹೆಚ್ಚು: ಮಹದೇಶ್ವರ, ಮಂಟೇಸ್ವಾಮಿಯಂತಹ ಸಿದ್ಧಪುರುಷರು ನಡೆದಾಡಿದ ನೆಲದಲ್ಲಿ ಜನಿಸಿದ ರಾಜ್‌ಕುಮಾರ್‌ ಅವರು ಕನ್ನಡಾಭಿಮಾನವನ್ನು ನಾಡಿನ ಜನತೆಯಲ್ಲಿ ಬಿತ್ತಿ ಬೆಳೆದವರು. ಯಾವುದೇ ಮಾದರಿಯ ಚಿತ್ರಗಳ ಪಾತ್ರಗಳಿಗೆ ಪರಾಕಾಯ ಪ್ರವೇಶ ಮಾಡುತ್ತಿದ್ದ ಕಲೆ ರಾಜ್‌ ಅವರಿಗೆ ಸಿದ್ದಿಸಿತ್ತು. ಅಲ್ಲದೆ ಆ ಪಾತ್ರಕ್ಕೆ ಜೀವ ತುಂಬುವ ದೈತ್ಯಶಕ್ತಿ ಹೊಂದಿದ್ದರು. ಸರ್ವಜ್ಞ, ಕಬೀರ, ಕನಕದಾಸ, ಕಾಳಿದಾಸ ರಂತಹ ವåಹಾನ್‌ ಸಂತರ ಪಾತ್ರಗಳಲ್ಲಿ ಸುಲಲಿತವಾಗಿ ಅಭಿನಯ ನೀಡಿದ್ದರು. ಎಲ್ಲಾ ಬಗೆಯ ಗೀತೆಗಳನ್ನು ಹಾಡುವ ಮೂಲಕ ಕನ್ನಡದ ಶ್ರೇಷ್ಠ ಗಾಯಕರು ಸಹ ಆಗಿದ್ದರು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎ.ರಮೇಶ್‌, ಉಪನ್ಯಾಸಕ‌ ಸುರೇಶ್‌ ಋಗ್ವೇದಿ ಇದ್ದರು. ಜಿಲ್ಲೆಯ ಹೆಸರಾಂತ ಸ್ಥಳೀಯ ಕಲಾವಿದರು ನಡೆಸಿಕೊಟ್ಟ ಡಾ.ರಾಜ್‌ ಗೀತೆಗಳ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.