ಪಡಿತರ ವಿತರಣೆ ಅವ್ಯವಸ್ಥೆ: ಡೀಸಿ ತರಾಟೆ
Team Udayavani, Apr 29, 2021, 1:50 PM IST
ಯಳಂದೂರು: ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನಮಾರಾಟ ಸಹಕಾರ ಸಂಘದ ಬಳಿ ಪಡಿತರ ವಿತರಣೆ ಮಾಡುತ್ತಿದ್ದಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಬುಧವಾರ ದಿಢೀರ್ ಭೇಟಿ ನೀಡಿ, ಜನರು ಸಾಮಾಜಿಕ ಅಂತರ ಪಾಲಿಸದಕ್ಕೆ ಹಾಗೂ ಇಲ್ಲಿನ ಅವ್ಯಸ್ಥೆಯನ್ನು ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಬಯೋಮೆಟ್ರಿಕ್ ನಿಷೇಧ :ಇಲ್ಲಿನ ಪಡಿತರ ವಿತರಣೆಗೆ ಬೆರಳಚ್ಚುಪಡೆಯುತ್ತಿದ್ದ ಆಹಾರ ನಿರೀಕ್ಷಕ ಬಿಸಲಯ್ಯ ವಿರುದ್ಧ ಹರಿಹಾಯ್ದಜಿಲ್ಲಾಧಿಕಾರಿಗಳು, ಜಿಲ್ಲಾದ್ಯಂತ ಪಡಿತರ ವಿತರಣೆಗೆ ಕೋವಿಡ್ಹಿನ್ನೆಲೆಯಲ್ಲಿ ಬೆರಳಚ್ಚು ಮಾಡುವುದನ್ನು ತಾತ್ಕಾಲಿಕವಾಗಿಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ್ದರೂ ಇಂತಹದುಸ್ಸಾಹಸ ಮಾಡುತ್ತಿ ದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಇಲ್ಲೇ ರಾಗಿಯನ್ನು ಚೀಲದಲ್ಲಿ ತುಂಬಿಡುವ ಬದಲುಗುಡ್ಡೆ ಹಾಕಿಕೊಂಡು ಕೊಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಇಲ್ಲಿನನೌಕರರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದರು.ಸಾಮಾಜಿಕ ಅಂತರ ಪಾಲಿಸುವಂತೆ ಟೋಕನ್ಗಳನ್ನು ಕೊಟ್ಟುಕೇವಲ 10 ಮಂದಿ ಮಾತ್ರ ಸರತಿ ಸಾಲಿನಲ್ಲಿ ನಿಂತು ಪಡಿತರಪಡೆಯುವಂತೆ ಮಾಡಬೇಕು, ಇಲ್ಲವಾದಲ್ಲಿ ಇದಕ್ಕೆ ಕಾರಣದವರವಿರುದ್ಧ ಕಾನೂನು ಕ್ರಮ ವಹಿಸುವಂತೆ ಎಚ್ಚರಿಕೆ ನೀಡಿದರು.
ಬಸ್ ನಿಲ್ದಾಣದಲ್ಲಿ ಅನಗತ್ಯವಾಗಿ ಓಡಾಡುತ್ತಿರುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಬೇಕು ಎಂದು ಪೊಲೀಸರಿಗೆ ಡೀಸಿಸೂಚಿಸಿದರು. ತಹಶೀಲ್ದಾರ್ ಜಯಪ್ರಕಾಶ್, ಇಒ ಉಮೇಶ್,ಸಮಾಜ ಕಲ್ಯಾಣ ಇಲಾಖೆಯ ಜಯಕಾಂತ, ಮುಖ್ಯಾಧಿಕಾರಿಎಂ.ಸಿ. ನಾಗರತ್ನ, ಆರೋಗ್ಯಾಧಿಕಾರಿ ಮಹೇಶ್ಕುಮಾರ್ ಸಿಪಿಐಶೇಖರ್, ಗಂಗಾಧರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…