ವಾಣಿಜ್ಯ ಮಳಿಗೆಗಳ ಬಹಿರಂಗ ಮರು ಹರಾಜು


Team Udayavani, Jan 29, 2020, 3:00 AM IST

vanijya

ಹನೂರು: ಪಪಂನಿಂದ ಖಾಸಗಿ ಬಸ್‌ ನಿಲ್ದಾಣದಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ವಾಣಿಜ್ಯ ಮಳಿಗೆಗಳ ಬಹಿರಂಗ ಮರು ಹರಾಜು ಮಂಗಳವಾರ ನಡೆಯಿತು. ಕಳೆದ 3 ವರ್ಷದ ಹಿಂದೆ ಪಪಂ ಅನುದಾನದಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಬಸ್‌ ನಿಲ್ದಾಣ ನಿರ್ಮಿಸುವುದರ ಜತೆಗೆ ಪಪಂಗೆ ಆದಾಯ ಬರುವ ದೃಷ್ಟಿಯಿಂದ 36 ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿತ್ತು. ಈ ಅಂಗಡಿ ಮಳಿಗೆಗಳನ್ನು 2016ರಲ್ಲಿ ಟೆಂಡರ್‌ ಮೂಲಕ ಬಾಡಿಗೆಗೆ ನೀಡಲಾಗಿತ್ತು.

ಈ ವೇಳೆ ಟೆಂಡರ್‌ದಾರರ ಪೈಪೋಟಿಯಿಂದ ಅಂಗಡಿಗಳ ಬಾಡಿಗೆ ದರ ತಿಂಗಳಿಗೆ 6,500 ರೂ.ನಿಂದ ಹಿಡಿದು 34,300 ರೂ.ರವರೆಗೆ ನಡೆದಿತ್ತು. ಬಳಿಕ ಬಾಡಿಗೆದಾರರು ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಪ್ರಾರಂಭಿಸಿದ್ದರು. ಆದರೆ, ಮೂರು ತಿಂಗಳ ನಂತರ 6 ಮಳಿಗೆಗಳನ್ನು ಹೊರತುಪಡಿಸಿ ಇನ್ನುಳಿದ ಮಳಿಗೆಗಳ ಬಾಡಿಗೆದಾರರು ಹಣ ಪಾವತಿಸದ ಕಾರಣ ಪಪಂ ಆಡಳಿತ ಮಳಿಗೆಗಳಿಗೆ ಬೀಗ ಹಾಕಲಾಗಿತ್ತು. 2 ವರ್ಷವೇ ಕಳೆದರೂ ಸಹ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮರು ಟೆಂಡರ್‌ ಕರೆಯಲಿಲ್ಲ. ಪರಿಣಾಮ ಬರುವ ಆದಾಯ ಪಪಂಗೆ ಖೋತಾ ಆಗಿತ್ತು.

ಮಳಿಗೆಗಳಿಗೆ ಜೀವಕಳೆ: ಪಟ್ಟಣದಲ್ಲಿ ಬಹುತೇಕ ಮಂದಿ ಬೀದಿ ಬದಿ ವ್ಯಾಪಾರಿಗಳಿದ್ದು, ಇವರು ಬಸ್‌ ನಿಲ್ದಾಣದ ಅಕ್ಕ ಪಕ್ಕ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇವರೆಲ್ಲರೂ ಕಳೆದ ವರ್ಷದ ಹಿಂದೆ ಮಳಿಗೆಗಳನ್ನು ಮರು ಟೆಂಡರ್‌ ಕರೆದು ಬಾಡಿಗೆ ನೀಡುವಂತೆ ಒತ್ತಾಯಿಸಿದ್ದರು. ಈ ದಿಸೆಯಲ್ಲಿ ಶಾಸಕ ಆರ್‌. ನರೇಂದ್ರ ಸಾಮಾನ್ಯ ಸಭೆಯಲ್ಲಿ ಮಳಿಗೆಗಳ ಮರು ಟೆಂಡರ್‌ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದು ಬಾಡಿಗೆಗೆ ನೀಡುವಂತೆ ಪಪಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಅದರಂತೆಯೇ ಮುಖ್ಯಾಧಿಕಾರಿ ಮೂರ್ತಿ ಅವರು ಅಗತ್ಯ ಕ್ರಮವಹಿಸಿದ್ದು, ಮಂಗಳವಾರ ಟೆಂಡರ್‌ ನಡೆಯಿತು. ಇದರಿಂದ 2 ವರ್ಷದಿಂದ ಮುಚ್ಚಿದ್ದ ಮಳಿಗೆಗಳಿಗೆ ಜೀವಕಳೆ ಬಂದಂತಾಯಿತು.

ಮಳಿಗೆಗಳ ಮೀಸಲು ಹಂಚಿಕೆ: 28 ಮಳಿಗೆಗಳಿಗೆ ಮರು ಟೆಂಡರ್‌ ಕರೆಯಲಾಗಿದ್ದು, ಇದರಲ್ಲಿ 17, 18, 19, 29, 32, 33 ಸಂಖ್ಯೆಯ ಮಳಿಗೆಗಳು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ, 2, 4, 5, 9, 14, 16, 20, 22-28, 30, 31, 35, 36ರ ಮಳಿಗೆಗಳು ಸಾಮಾನ್ಯ ವರ್ಗಕ್ಕೆ ಹಾಗೂ 21 ಸಂಖ್ಯೆಯ ಮಳಿಗೆ ವಿಕಲಚೇತನರಿಗೆ, 1ರ ಮಳಿಗೆ ಪರಿಶಿಷ್ಟ ಜಾತಿ ಹಾಗೂ 10ರ ಮಳಿಗೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರಿಸಲಾಗಿತ್ತು. ಮರು ಟೆಂಡರ್‌ನಲ್ಲಿ ಭಾಗವಹಿಸುವವರಿಗೆ 80 ಸಾವಿರ ಠೇವಣಿ ಮೊತ್ತ ನಿಗದಿಪಡಿಸಲಾಗಿದ್ದು, ಮಳಿಗೆಯ ಪ್ರತಿ ತಿಂಗಳ ಬಾಡಿಗೆ 2,500ರಿಂದ ಕರೆಯಲಾಯಿತು. ಬಿಡ್‌ನ‌ಲ್ಲಿ 2,600 ರೂನಿಂದ 23,700 ರೂ. ವರೆಗೆ ಮಳಿಗೆಗಳನ್ನು ಬಾಡಿಗೆ ನೀಡಲಾಯಿತು. ಆದರೆ, ವಿಕಲಚೇತನರಿಗೆ ಮೀಸಲಾಗಿದ್ದ 21 ಸಂಖ್ಯೆಯ ಮಳಿಗೆಗೆ ಯಾರು ಟೆಂಡರ್‌ಗೆ ಭಾಗವಹಿಸದ ಪರಿಣಾಮ ಹಾಗೆಯೇ ಉಳಿಸಲಾಗಿದೆ.

ಎಲ್ಲದಕ್ಕೂ ಟೆಂಡರ್‌: ಪ್ರಾರಂಭದಲ್ಲಿ ಬಸ್‌ ನಿಲ್ದಾಣಕ್ಕೆ ಆಗಮಿಸುವ ಖಾಸಗಿ ಬಸ್‌ಗಳಿಂದ ಶುಲ್ಕ ವಸೂಲಿ ಮಾಡಲಾಗುತ್ತಿತ್ತು. ಆದರೆ, ಕ್ರಮೇಣ ಶುಲ್ಕ ವಸೂಲಾತಿ ಸ್ಥಗಿತವಾಗಿತ್ತು. ಇದರಿಂದ ಪಪಂಗೆ ಬರುತ್ತಿದ್ದ ಆದಾಯ ಕೈತಪ್ಪಿತ್ತು. ಇದರಿಂದ ಸೂಕ್ತ ಕ್ರಮವಹಿಸಿದ ಪಪಂ ಅಧಿಕಾರಿಗಳು ಬಸ್‌ಗಳಿಂದ ಶುಲ್ಕ ವಸೂಲಿಗಾಗಿಯೂ ಮಂಗಳವಾರ ಟೆಂಡರ್‌ ಕರೆಯಲಾಗಿತ್ತು. ಭಾಗವಹಿಸಿದ್ದ ಚಂದ್ರು ಎಂಬವರು 1 ಲಕ್ಷ ರೂ. ಠೇವಣಿ ಹಣ ಪಾವತಿಸಿ 7,300 ರೂಗೆ ಟೆಂಡರ್‌ ಪಡೆದರು. ಜತೆಗೆ ಸತೀಶ್‌ ಎಂಬವರು 7,200 ರೂ.ಗೆ ನೆಲ ಸುಂಕದ ಟೆಂಡರ್‌ ಪಡೆದುಕೊಂಡರು. ಇನ್ನು ಅಂಬೇಡ್ಕರ್‌ ವೃತ್ತದಲ್ಲಿನ ವಾಣಿಜ್ಯ 7 ಮಳಿಗೆಗಳಿಗೆ ಟೆಂಡರ್‌ ನೀಡಲಾಯಿತು. ಈ ವೇಳೆ ಪಪಂ ಮುಖ್ಯಾಧಿಕಾರಿ ಮೂರ್ತಿ, ಕಂದಾಯ ಇಲಾಖೆಯ ಶಿರಸ್ತೆದಾರ್‌ ಸುರೇಶ್‌, ಇಂಜಿನೀಯರ್‌ ಶಿವಶಂಕರ ಆರಾಧ್ಯ ಹಾಗೂ ಕಚೇರಿಯ ನೌಕರರು ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.