ಗೃಹ ರಕ್ಷಕರಿಗೆ ಸೌಲಭ್ಯ ನೀಡಲು ಸಿದ್ಧ


Team Udayavani, Dec 17, 2019, 3:00 AM IST

ghruha mak

ಯಳಂದೂರು: ಗೃಹ ರಕ್ಷಕ ಸಿಬ್ಬಂದಿಯನ್ನು ಸರ್ಕಾರ ಎಲ್ಲಾ ಕೆಲಸಗಳಿಗೂ ಬಳಸಿಕೊಳ್ಳುತ್ತಿದೆ. ಆದರೆ, ಇನ್ನೂ ಕೆಲವು ಸೌಲಭ್ಯಗಳಿಂದ ಇವರು ವಂಚಿತರಾಗಿದ್ದಾರೆ. ಇವರಿಗೆ ಪಿಎಫ್, ಇಎಸ್‌ಐ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲು ಗೃಹ ಸಚಿವರು ಹಾಗೂ ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಶಾಸಕ ಎನ್‌. ಮಹೇಶ್‌ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಖೀಲ ಭಾರತ ಗೃಹ ರಕ್ಷಕದಳದ ದಿನಾಚರಣೆಯ ಜಿಲ್ಲಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರ ಅನುಪಸ್ಥಿತಿಯಲ್ಲಿ ಇವರ ಸೇವೆ ಅನನ್ಯವಾಗಿದೆ. ಪ್ರಾಮಾಣಿಕವಾಗಿ ದೇಶ ಸೇವೆ ಮಾಡುವ ಇವರು, ಈಚೆಗೆ ಟ್ರಾಫಿಕ್‌ ಸಮಸ್ಯೆಯನ್ನು ತಡೆಗಟ್ಟುವಲ್ಲಿಯೂ ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ರಕ್ಷಣಾ ಕಾರ್ಯಕ್ಕೆ ಬಳಕೆ: ದೇಶದಲ್ಲಿ ಗೃಹ ರಕ್ಷಕ ಇಲಾಖೆಗೆ ಇತಿಹಾಸವಿದೆ. 1946ರಲ್ಲಿ ಬಾಂಬೆ ಸರ್ಕಾರದಿಂದ ಇವರ ಸೇವೆ ಆರಂಭಗೊಂಡಿತು. 1962ರಲ್ಲಿ ಭಾರತ -ಚೀನಾ ಯುದ್ಧದ ಸಂದರ್ಭದಲ್ಲಿ ಇವರನ್ನೂ ಸಹ ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿತ್ತು. ದೇಶದಲ್ಲಿ 6 ಲಕ್ಷಕ್ಕೂ ಹೆಚ್ಚು ಮಂದಿ ಗೃಹ ರಕ್ಷಕದಳದ ಸಿಬ್ಬಂದಿ ಇದ್ದಾರೆ. ಇದರಲ್ಲಿ ಪದವಿ ಪಡೆದವರೂ ಇದ್ದಾರೆ. ಈಗಲೂ ಇವರು ಪ್ರತಿನಿತ್ಯ 360 ರೂ.ಗಳ ಗೌರವಧನದ ಆಧಾರದ ಮೇಲೆಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಏಪ್ರಿಲ್‌ನಿಂದ 750 ರೂ.: ಮುಂದಿನ ವರ್ಷದ ಏಪ್ರಿಲ್‌ನಿಂದ ಇವರ ಗೌರವಧನವನ್ನು ಪ್ರತಿನಿತ್ಯ 750 ರೂ.ಗಳಿಗೆ ಏರಿಸಲು ಸರ್ಕಾರದ ಯೋಜನೆ ಇದೆ. ವರ್ಷಕ್ಕೆ ಪೊಲೀಸ್‌ ಸಿಬ್ಬಂದಿಗೆ ನೀಡುವಂತೆ ಇವರಿಗೂ 2 ಸಮವಸ್ತ್ರಗಳನ್ನು ನೀಡಲು ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗುವುದು. ಗೃಹ ರಕ್ಷಕ ದಳದ ಮುಖ್ಯ ಕಮಾಂಡೆಂಟ್‌ ಎಂ.ಎನ್‌. ರೆಡ್ಡಿ ಹಾಗೂ ಗೃಹ ಸಚಿವರೊಂದಿಗೆ ಈ ವಿಷಯ ಚರ್ಚಿಸಲಾಗುವುದು.

ಇವರ ಸೇವೆಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಆರೋಗ್ಯ ಸೌಲಭ್ಯದೊಂದಿಗೆ ಇತರೆ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸಲಾಗುವುದು. ಪಟ್ಟಣ ಪಂಚಾಯ್ತಿ ಹಳೆ ಕಟ್ಟಡದಲ್ಲಿ ಇವರಿಗೆ ಕಚೇರಿಯನ್ನು ನಿರ್ಮಿಸಿಕೊಳ್ಳಲು ಸೂಚನೆ ನೀಡಲಾಗುವುದು. ಇದರಿಂದ ಇಲ್ಲಿನ ಮಹಿಳಾ ಸಿಬ್ಬಂಗಿಗೂ ಸಮವಸ್ತ್ರಗಳನ್ನು ಧರಿಸಲು ನೆರವು ಸಿಗಲಿದೆ ಎಂದರು. ಈ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ, ಕ್ರೀಡೆಯಲ್ಲಿ ಬಹುಮಾನ ಪಡೆದ ಸಿಬ್ಬಂದಿ ಹಾಗೂ ಇವರಿಗೆ ಸಹಕರಿಸಿದ ಅನೇಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಆರಕ್ಷಕ ಉಪಾಧೀಕ್ಷ ಎನ್‌. ನವೀನ್‌ಕುಮಾರ್‌, ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್‌ ಬಿ.ಎಸ್‌. ಬಸವರಾಜು, ಪಿಎಸ್‌ಐ ರವಿಕುಮಾರ್‌, ಜಿಲ್ಲಾ ಬೋಧಕ ಎಂ.ರಾಮಣ್ಣ, ಘಟಕಾಧಿಕಾರಿ ಎಂ. ನಾಗರಾಜು, ಉಪಾಧ್ಯಕ್ಷ ಭೀಮಪ್ಪ, ಮಾಜಿ ಸದಸ್ಯ ವೈ.ವಿ. ಉಮಾಶಂಕರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದಿದ್ದ ನೂರಾರು ಗೃಹ ರಕ್ಷಕ ಸಿಬ್ಬಂದಿ ಹಾಜರಿದ್ದರು.

ಗೃಹ ರಕ್ಷದ ದಳದ ಸೇವೆ ಅನನ್ಯವಾಗಿದೆ. ಪ್ರಕೃತಿ ವಿಕೋಪ, ಚುನಾವಣೆ, ಇತರೆ ಗಲಭೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇವರ ಸೇವೆ ಅಗತ್ಯವಿದೆ. ಪಟ್ಟಣ ಪಂಚಾಯ್ತಿ ಹಳೆ ಕಟ್ಟಡದಲ್ಲಿ ಕಚೇರಿ ನಿರ್ಮಿಸುವ ಇವರ ಬೇಡಿಕೆಯನ್ನು ಪಪಂ ಮುಖ್ಯಾಧಿಕಾರಿಯೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು.
-ವರ್ಷಾ, ತಹಶೀಲ್ದಾರ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.