ನೈಜ ಕಲಾವಿದರಿಗೆ ಪ್ರಶಸ್ತಿ ದೊರೆಯುತ್ತಿಲ್ಲ: ರಾಮಚಂದ್ರ


Team Udayavani, Jun 29, 2019, 3:00 AM IST

nyjaa

ಚಾಮರಾಜನಗರ: ರಾಜಕೀಯ ಹಸ್ತಕ್ಷೇಪದಿಂದಾಗಿ ನೈಜ ಕಲಾವಿದರಿಗೆ ಪ್ರಶಸ್ತಿಗಳು ದೊರೆಯುತ್ತಿಲ್ಲ ಎಂದು ಜಿಪಂ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ವಿಷಾದಿಸಿದರು. ನಗರದ ರೋಟರಿ ಭವನದಲ್ಲಿ ಕರ್ನಾಟಕ ರಂಗ ಪರಿಷತ್ತು ಜಿಲ್ಲಾ ಘಟಕ ಹಾಗೂ ಕರ್ನಾಟಕ ಬೀದಿ ನಾಟಕ ಅಕಾಡೆಮಿ ಸಹಯೋಗದಲ್ಲಿ ನಡೆದ ಸಿಜಿಕೆ ಬೀದಿ ರಂಗ ದಿನ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಕಲೆಯೇ ಜೀವನದ ಕೈಗನ್ನಡಿ. ರಂಗ ಕಲಾವಿದರು ಬೀದಿನಾಟಕಗಳು, ನಾಟಕಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದರು. ಇತ್ತೀಚಿನಲ್ಲಿ ಟೀವಿಯಲ್ಲಿ ಬರುವ ಧಾರಾವಾಹಿಗಳು ಕೌಟುಂಬಿಕ ಜಗಳವನ್ನು ತೋರಿಸುತ್ತದೆ. ಇದರಿಂದ ಮಾನವೀಯ ಮೌಲ್ಯಗಳೂ ಮರೆಯಾಗುತ್ತಿದೆ. ಕಲುಷಿತ ವಾತಾವರಣದಲ್ಲಿ ಸುಳ್ಳನ್ನೇ ನಿಜ ಎಂದು ನಿಜವನ್ನೇ ಸುಳ್ಳು ಎಂದು ಬಿಂಬಿಸಲಾಗುತ್ತಿದೆ ಎಂದರು.

ರಂಗಕಲೆ ಸಂಸ್ಕೃತಿ, ನಾಡು, ನುಡಿ ಹಾಗೂ ಊರಿನ ವೈಭವ ಬಿಂಬಿಸುವ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ಕಲಾವಿದನ ಕೌಶಲ್ಯಕ್ಕೆ ತಕ್ಕಂತೆ ಪ್ರಶಸ್ತಿ ಸಿಕ್ಕರೆ ರಂಗಕಲೆಗೆ ಬೆಲೆ ಸಿಗುತ್ತದೆ. ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಿ, ಸಹಕಾರ ನೀಡಬೇಕು ಎಂದು ಹೇಳಿದರು.

ತಬಲ ವಿದ್ವಾನ ದಶಪಾಲ್‌ರಿಗೆ ಸಿಜಿಕೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಬಹಳ ಅರ್ಥಪೂರ್ಣ. ಅವರಿಗೆ ರಾಜ್ಯ, ರಾಷ್ಟ್ರ ಪ್ರಶಸ್ತಿಗಳು ಲಭಿಸಲಿ ಎಂದು ಆಶಿಸಿದರು. ಅಧ್ಯಕ್ಷತೆ ವಹಿಸಿ ರಂಗಕರ್ಮಿ ಕೆ.ವೆಂಕಟರಾಜು, ಸಿಜಿಕೆ ಅವರು ರಂಗಕಲೆಗೆ ದೊಡ್ಡಕೊಡುಗೆ ನೀಡಿದ್ದಾರೆ. ಸಮುದಾಯ ತಂಡದ ಮೂಲಕ ನಾಡಿನ ಬಡವರು, ನಿರ್ಗತಿಕರು ಮತ್ತು ಶೋಷಿತರ ಪರವಾಗಿ ಹೋರಾಟ ಮಾಡಿದರು.

ಅನೇಕ ಪ್ರಸಿದ್ಧ ನಟ, ನಟಿಯರನ್ನು ನಾಡಿಗೆ ಪರಿಚಯಿಸಿದ್ದಾರೆ. ಯುವ ರಂಗಕರ್ಮಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಸಿಜಿಕೆ ಮಾಡಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾಥಾದ ಮೂಲಕ ಸಮುದಾಯ ಘಟಕವನ್ನು ಸ್ಥಾಪನೆ ಮಾಡಿದರು. ಶಿಬಿರದ ಮೂಲಕ ನಾಟಕ ಮಾಡಿ ಸಾಮಾಜಿಕ ಅರಿವು ಮೂಡಿಸಿದರು ಎಂದರು.

ಪ್ರಸ್ತುತ ನೂರಾರು ಕಲಾವಿದರು, ಬರಹಗಾರರ ಅಗತ್ಯವಿದೆ. ಕೇಂದ್ರ ಸರ್ಕಾರದಲ್ಲಿ ವಿರೋಧ ಪಕ್ಷ ಇಲ್ಲವಾಗಿದೆ. ದೇಶದಲ್ಲಿ ವಿಚಿತ್ರ ಬೆಳವಣಿಗೆ ನಡೆಯುತ್ತಿವೆ. ಕೊಲೆ, ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆ, ಪ್ರತಿರೋಧವನ್ನು ನಾಟಕ, ಕಾವ್ಯದ ಮೂಲಕ ಕಲಾವಿದರೂ ಮಾಡಬೇಕಿದೆ. ಪ್ರತಿಯೊಂದು ಕಲೆಯು ರಂಜನೆಯೂ ಹೌದು, ವಿರೋಧವೊ ಹೌದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಂಗ ಪರಿಷತ್ತು ರಾಜ್ಯ ಸಂಚಾಲಕ ಸಿ.ಎಂ.ನರಸಿಂಹಮೂರ್ತಿ, ಕಷ್ಟದ ಪರಿಸ್ಥಿತಿಯಲ್ಲಿರುವ ಕಲಾವಿದರಿಗೆ ಕಾರ್ಮಿಕರ ಕಲ್ಯಾಣ ನಿಧಿ ಇರುವಂತೆ ರಂಗಭೂಮಿ ಕಲಾವಿದರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ ಮಾಡಿ ಧನಸಹಾಯ ಮಾಡಬೇಕು. ಮಾಸಾಶನ ಹೆಚ್ಚಳ ಹಾಗೂ ಕಲಾವಿದರ ವಯೋಮಿತಿ ಕಡಿಮೆ ಮಾಡುವಂತೆ ಒತ್ತಾಯಿಸಿದರು.

ಪ್ರಶಸ್ತಿ ಪ್ರದಾನ: ಕೊಳ್ಳೇಗಾಲದ ತಬಲ ವಿದ್ವಾನ್‌ ವಿ.ದಶಪಾಲ್‌ ಅವರಿಗೆ ಸಿಜೆಕೆ ಪ್ರಶಸ್ತಿಯನ್ನು ಜಿಪಂ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಪ್ರದಾನ ಮಾಡಿದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಹೊನ್ನನಾಯಕ, ರೋಟರಿ ಅಧ್ಯಕ್ಷ ನಾಗರಾಜು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಬಸವರಾಜು,

ಕೊಳ್ಳೇಗಾಲ ದೇವಾಂಗ ಸಂಘ ಅಧ್ಯಕ್ಷ ಆಚಾಳ್‌ನಾಗರಾಜ್‌, ಕರ್ನಾಟಕ ರಂಗ ಪರಿಷತ್ತು ಜಿಲ್ಲಾಧ್ಯಕ್ಷ ಜಿ.ರಾಜಪ್ಪ, ಪ್ರಧಾನ ಕಾರ್ಯದರ್ಶಿ ಉಮ್ಮತ್ತೂರು ಬಸವರಾಜು, ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್‌ ಇದ್ದರು. ಇದೇ ವೇಳೆ ರಂಗಕಲಾವಿದರು ರಂಗಗೀತೆ ಗಾಯನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ರಂಗು ತುಂಬಿದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.