ಕಸಾಪಗೆ ಕಚೇರಿ ಕಲ್ಪಿಸಲು ಮನವಿ


Team Udayavani, Aug 25, 2020, 1:05 PM IST

ಕಸಾಪಗೆ ಕಚೇರಿ ಕಲ್ಪಿಸಲು ಮನವಿ

ಗುಂಡ್ಲುಪೇಟೆ: ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಸಿ.ಎಸ್‌. ನಿರಂಜನಕುಮಾರ್‌ ಅವರನ್ನು ಸನ್ಮಾನಿಸಿ, ತಾಲೂಕು ಸಾಹಿತ್ಯ ಪರಿಷತ್ತಿಗೆ ಕಚೇರಿ ಕಲ್ಪಿಸಲು ಮನವಿ ಸಲ್ಲಿಸಿದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್‌.ವಿನಯ್‌, ತಾಲೂಕು ಅಧ್ಯಕ್ಷ ವೀ.ನಾ.ಚಿದಾನಂದಸ್ವಾಮಿ ಕೇರಳ ಹಾಗೂ ತಮಿಳುನಾಡಿನ ಗಡಿಯಲ್ಲಿರುವ ತಾಲೂಕಿನಲ್ಲಿ ಕಸಾಪ ತಾಲೂಕು ಘಟಕ ಕಚೇರಿ ನಿರ್ಮಾಣಕ್ಕೆ 4 ಗುಂಟೆ ಸ್ಥಳ ಮೀಸರಿರಿಸಿದ್ದು, ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡ ಬೇಕು. ತಾಪಂ ಆವರಣದಲ್ಲಿದ್ದ ಹಳೆಯ ಕಟ್ಟಡ ಶಿಥಿಲವಾಗಿ ನೆಲಕ್ಕುರುಳಿದ್ದರಿಂದ ಕಚೇರಿಯೇ ಇಲ್ಲದಂತಾಗಿದೆ. ಆದ್ದರಿಂದ ತಾತ್ಕಾಲಿಕವಾಗಿ ಕಚೇರಿ ನಡೆಸಲು ಸರ್ಕಾರಿ ಕಟ್ಟಡದಲ್ಲಿ ಸ್ಥಳಾವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಶಾಸಕರು, ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿ.ಶಿವಮೂರ್ತಿ ಅವರಿಗೆ ಕರೆ ಮಾಡಿ, ನೂತನ ಕಟ್ಟಡ ನಿರ್ಮಾಣವಾಗುವವರೆಗೆ ಯಾವುದಾದರೂ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಯನ್ನು ಕಸಾಪ ಕಚೇರಿಗೆ ನೀಡುವಂತೆ ಸೂಚನೆ ನೀಡಿದರು. ಕಸಾಪ ಜಿಲ್ಲಾ ಕಾರ್ಯದರ್ಶಿ ವೀರಭದ್ರಸ್ವಾಮಿ, ಶರಣ ಸಾಹಿತ್ಯ ಪರಿಷತ್‌ನ ಕೊಂಗರಹಳ್ಳಿ ನಾಗರಾಜು, ಆರ್‌.ಎಂ.ಸ್ವಾಮಿ, ಕೋಶಾಧಿಕಾರಿ ಬಿ.ಎಂ.ಪ್ರಭುಸ್ವಾಮಿ ಹಾಜರಿದ್ದರು.

………………………………………………………………………………………………………………………………………………..

ಕಾರ್ಖಾನೆ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿಗೆ ಮನವಿ : ಕೊಳ್ಳೇಗಾಲ: ಪಟ್ಟಣದ ರಾಜೀವ್‌ ನಗರ ಬಡವಾಣೆಯ 2ನೇ ಅಡ್ಡ ರಸ್ತೆಯಲ್ಲಿ ಜನ ವಾಸಿಸುವ ಪ್ರದೇಶದಲ್ಲಿ ಮರ ಕತ್ತರಿಸುವ ಮಿಲ್ಲು ಮತ್ತು ಕಬ್ಬಿಣದ ಇಂಜಿನಿಯರಿಂಗ್‌ ಕೆಲಸ ನಡೆಯುತ್ತಿದ್ದು, ಕೂಡಲೇ ಕಾರ್ಖಾನೆ ಸ್ಥಳಾಂತರ ಮಾಡಬೇಕು ಎಂದು ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ರಾಜೀವ್‌ ನಗರ ಬಡವಾಣೆಯ 2ನೇ ಅಡ್ಡ ರಸ್ತೆಯ ನಿವಾಸಿಗಳಾದ ಕೆಂಪೇಗೌಡ, ಸಿದ್ದಲಿಂಗಾಚಾರ್‌, ನಂಜಪ್ಪ, ಮಹಾದೇವ, ಅಬ್ದೂಲ್‌ ನೂರ್‌, ಬಾಬು, ಗಿರೀಶ್‌ ಸೇರಿದಂತೆ ಇತರರು ಜಿಲ್ಲಾಧಿಕಾರಿಗಳಿಗೆ ಮನವಿಸಲಿಸಿದ್ದಾರೆ.

ಮಂಜುನಾಥ್‌ ಎಂಬುವವರಿಗೆ ಸೇರಿದ 2 ಅಂಗಡಿಗಳು ತಲೆ ಎತ್ತಿರುವುದರಿಂದ ಬಡಾವಣೆಯಲ್ಲಿ ವಿವಿಧ ರೋಗಿಗಳಿಗೆ ಮತ್ತು ಜನರಿಗೆ ಮರದ ಮಿಲ್ಲು ಮತ್ತು ಕಬ್ಬಿಣದ ಕಾರ್ಖಾನೆಯಿಂದ ಬರುವ ಶಬ್ದಗಿಳಿಂದ ತೊಂದರೆಯಾಗುತ್ತಿದೆ. ಕಾರ್ಖಾನೆಯನ್ನು ಸ್ಥಳಾಂತರ ಮಾಡುವ ಮೂಲಕ ಜನರ ಆರೋಗ್ಯ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಆರ್‌ ರವಿ ಮನವಿ ಸ್ವೀಕರಿಸಿದ್ದು, ಕೂಡಲೇ ನಗರಸಭೆಯ ಪೌರಾಯುಕ್ತರು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.