ದಲಿತರ ಬೀದಿಗೆ ಉತ್ಸವ ಬರಲಿ ಎಂದಿದ್ದಕ್ಕೆ ದಂಡ!


Team Udayavani, Oct 18, 2020, 4:38 PM IST

cn-tdy-1

ಯಳಂದೂರು: ದಲಿತರ ಬೀದಿಗೆ ಉತ್ಸವ ಮೂರ್ತಿಯನ್ನು ತರಬೇಕು ಎಂದು ಮನವಿ ಮಾಡಿದ್ದಕ್ಕಾಗಿ ಕೂಲಿ ಕಾರ್ಮಿಕರೊಬ್ಬರಿಗೆ ಗ್ರಾಮದ ಯಜಮಾನರೆಲ್ಲರೂ ಸೇರಿ ಬರೋಬ್ಬರಿ 50,101 ರೂ. ದಂಡ ವಿಧಿಸಿರುವ ಅಮಾನವೀಯ ಘಟನೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಜರುಗಿದೆ.

ಹೊನ್ನೂರು ಗ್ರಾಮದ ದಲಿತರ ಬೀದಿಯ ನಿವಾಸಿ ನಿಂಗರಾಜು ದಂಡನೆಗೊಳಪಟ್ಟ ವ್ಯಕ್ತಿ. ಹೊನ್ನೂರು ಗ್ರಾಮದಲ್ಲಿ ಪ್ರತಿವರ್ಷ ಚಾಮುಂಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ ನಡೆಯುತ್ತದೆ. ಈ ಸಂಬಂಧ ಇತ್ತೀಚೆಗೆ ತಹಶೀಲ್ದಾರ್‌ ನೇತೃತ್ವದಲ್ಲಿ ಉತ್ಸವ ಮಾಡಲು ಪೂರ್ವಭಾವಿ ಸಭೆ ನಡೆಸಲಾಗಿತ್ತು. ಇದಾದ ಬಳಿಕ ಗ್ರಾಮದ ನಿಂಗರಾಜು, ಈ ದೇಗುಲವು ಸರ್ಕಾರಕ್ಕೆ ಸೇರಿದ್ದು, ನವರಾತ್ರಿ ವೇಳೆ ಉತ್ಸವವು ಸವರ್ಣೀಯರ ಬೀದಿಗೆ ಮಾತ್ರ ನಡೆಯುತ್ತದೆ. ಇದನ್ನು ದಲಿತರ ಬೀದಿಗೂ ವಿಸ್ತರಿಸಬೇಕು ಎಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು.

ಇದಾದ ನಂತರ ಗ್ರಾಮದಲ್ಲಿ 13 ಕೋಮಿನ ಯಜಮಾನರು ಹಾಗೂ ಮುಖಂಡರು ಸಭೆ ಸೇರಿ ನಿಂಗರಾಜು ಅವರನ್ನು ಕರೆದು, “ಗ್ರಾಮದಲ್ಲಿ ಈ ಹಿಂದೆ ಇಲ್ಲದ ನಿಯಮಗಳನ್ನು ಮಾಡಿ ಎಂದು ನೀನು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದೀಯಾ. ಹೀಗಾಗಿ ನಿನಗೆ50,101 ರೂ. ದಂಡ ಹಾಕಲಾಗಿದೆ. ಇದನ್ನು ಕಡ್ಡಾಯವಾಗಿ ಪಾವತಿಸಲೇಬೇಕು’ ಎಂದು ಕಟ್ಟಪ್ಪಣೆ ಮಾಡಿದ್ದಾರೆ. ಆದರೆ, ಕೂಲಿ ಕಾರ್ಮಿಕರಾಗಿರುವ ನಿಂಗರಾಜು ಹಣ ವಿಲ್ಲದೆ ಪರದಾಡುತ್ತಿದ್ದ ಸಂದರ್ಭದಲ್ಲಿ ಅವರ ಪತ್ನಿಮಹಾದೇವಮ್ಮ ತಮ್ಮ ಬಳಿ ಇದ್ದ ಒಡವೆಗಳನ್ನು ಒತ್ತೆ ಇಟ್ಟು, ಸಾಲವನ್ನು ಮಾಡಿ ದಂಡದ ಮೊತ್ತವನ್ನು ಪಾವತಿಸಿದ್ದಾರೆ.

ತಹಶೀಲ್ದಾರ್‌ಗೆ ಮನವಿ: ಈ ಸಂಬಂಧ ನಿಂಗರಾಜು ತಮ್ಮ ಪತ್ನಿ ಮಹಾದೇವಮ್ಮ ಜೊತೆಗೂಡಿ ಶನಿವಾರ ತಹ ಶೀಲ್ದಾರ್‌ ಸುದರ್ಶನ್‌ ಅವರನ್ನುಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ನಮ್ಮ ಗ್ರಾಮದ ಚಾಮುಂಡೇಶ್ವರಿ ದೇಗುಲವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳ ಪಟ್ಟಿದೆ. ದಲಿತರ ಬೀದಿಗೆ ಉತ್ಸವ ಮೂರ್ತಿ ಬರುವಂತೆ ನಾನು ಮನವಿ ಪತ್ರ ಸಲ್ಲಿಸಿದ್ದೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡು ನನ್ನ ಮೇಲೆ ಷಡ್ಯಂತ್ರ ರೂಪಿಸಲಾಗಿದೆ. ಬಡವನಾಗಿರುವ ನನಗೆ 50 ಸಾವಿರ ರೂ. ಹಣ ಕಟ್ಟುವುದು ಕಷ್ಟವಾಗಿತ್ತು. ನಾನು ಇನ್ನೂ ಸಾಲವಂತನಾಗಿದ್ದೇನೆ. ಕೂಲಿಯಿಂದ ಜೀವನ ನಡೆಸುವ ನನಗೆ ಈ ಹಣ ಅತ್ಯಮೂಲ್ಯವಾಗಿದೆ. ಇದರಿಂದ ನಾನು ಮತ್ತು ನನ್ನ ಕುಟುಂಬ ಮಾನಸಿಕವಾಗಿ ನೊಂದಿದ್ದೇವೆ. ಹಾಗಾಗಿ ಕೂಡಲೇ ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಸಲ್ಲಿಸಿದರು

. ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್‌ ಸುದರ್ಶನ್‌, ಈ ಸಂಬಂಧ ಗ್ರಾಮಸ್ಥ ರೊಂದಿಗೆ ಮಾತುಕತೆ ನಡೆಸಿ ನಿಮ್ಮ ಮನವಿಗೆ ಸ್ಪಂದಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.