ನೀಲಗಾರ ಪರಂಪರೆ, ಸಂಸ್ಕೃತಿ ಗೌರವಿಸಿ; ಸುತ್ತೂರು ಶ್ರೀ

ಕಲಾವಿದರನ್ನು ಒಗ್ಗೂಡಿಸಿ ಮಾಹಿತಿಯನ್ನು ಸಂಗ್ರಹಿಸಿ ನಾವು ಕೂಗುವ ಕೂಗು ಕೃತಿ ರಚಿಸಲಾಗಿದೆ

Team Udayavani, Jun 16, 2022, 5:46 PM IST

ನೀಲಗಾರ ಪರಂಪರೆ, ಸಂಸ್ಕೃತಿ ಗೌರವಿಸಿ; ಸುತ್ತೂರು ಶ್ರೀ

ಚಾಮರಾಜನಗರ: ದೇಶದ ಶ್ರೀಮಂತ ಸಂಸ್ಕೃತಿ, ನೀಲಗಾರರ ಪರಂಪರೆ, ನೈಸರ್ಗಿಕ ಸಂಪತ್ತು ಹಾಗೂ ಸಾಹಿತ್ಯ ಕಲಾಪ್ರಕಾರಗಳ ಘನತೆಯನ್ನು ಮನವರಿಕೆ ಮಾಡಿಕೊಂಡು ಗೌರವಿಸುವುದು ಪೋಷಿಸುವುದು ಅಗತ್ಯವಾಗಿದೆ ಎಂದು ಸುತ್ತೂರು ವೀರಸಿಂಹಾಸನ ಮಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಹೊರವಲಯದಲ್ಲಿರುವ ಸುವರ್ಣಗಂಗೋತ್ರಿಯ ಡಾ.ಬಿ.ಆರ್‌. ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದ ನಿಜಗುಣ ಸಭಾಂಗಣದಲ್ಲಿ ಬುಧವಾರ, ಶ್ರೀ ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿದ್ದ ಮಂಟೇಸ್ವಾಮಿ ಪರಂಪರೆಯ ನೀಲಗಾರ ಆತ್ಮಕಥನವಾದ ನಾವು ಕೂಗುವ ಕೂಗು ಕೃತಿ ಬಿಡುಗಡೆಗೊಳಿಸಿ, ಸ್ನಾತಕೋತ್ತರ ಕೇಂದ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.

ಪ್ರಾಕೃತಿಕವಾಗಿ ಶ್ರೀಮಂತಿಕೆ: ಭಾರತವು ಸಮೃದ್ಧ ಸಂಸ್ಕೃತಿ ಹೊಂದಿದ ದೇಶವಾಗಿದೆ. ಹಾಗೆಯೇ ಜಿಲ್ಲೆಯು ಸಹ ಸಾಂಸ್ಕೃತಿಕ ಮತ್ತು ಪ್ರಾಕೃತಿಕವಾಗಿ ಶ್ರೀಮಂತಿಕೆಯನ್ನು ಹೊಂದಿದ್ದು, ನೀಲಗಾರ ಪಂರಪರೆಯನ್ನು ಇಲ್ಲಿನ ಕಲಾವಿದರು ಯಾವುದೇ ಅಪೇಕ್ಷೆ ಇಲ್ಲದೆ ವಂಶಪಾರಂಪರ್ಯವಾಗಿ ಉಳಿಸಿಕೊಂಡು ಬಂದಿದ್ದಾರೆ. ನೀಲಗಾರರ ಬದುಕನ್ನು ಸುಲಲಿತವಾಗಿ ಹಾಡಿನ ಮೂಲಕ ಕಟ್ಟಿಕೊಡುವ ಮಳವಳ್ಳಿ ಮಹದೇವಸ್ವಾಮಿಯವರಿಗೆ ಲಭಿಸಿರುವ ಗೌರವ ಡಾಕ್ಟರೆಟ್‌ ನೀಲಗಾರರಿಗೆ ಸಂದ ಗೌರವವಾಗಿದೆ. ನೀಲಗಾರರ ಆರ್ಥಿಕ ಮತ್ತು ಸಾಮಾಜಿಕ ಜೀವನವನ್ನು ನಾವು ಕೂಗುವ ಕೂಗು ಕೃತಿಯಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎಂದರು.

ಸುವರ್ಣ ಗಂಗೋತ್ರಿಯು ಅತಿ ವೇಗವಾಗಿ ಅಭಿವೃದ್ಧಿ ಹೊಂದುತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ ಸುವರ್ಣಗಂಗೋತ್ರಿ ಹೆಚ್ಚಿನ ಅಭಿವೃದ್ಧಿ ಕಾಣಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಆಶಾಕಿರಣವಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಮೈಸೂರು ವಿ.ವಿ. ಕುಲಪತಿ ಪ್ರೊ. ಹೇಮಂತಕುಮಾರ್‌ ಮಾತನಾಡಿ, ಕೇವಲ 6 ತಿಂಗಳಲ್ಲಿ ನೀಲಗಾರ ಪರಂಪರೆ ಕಲಾವಿದರನ್ನು ಒಗ್ಗೂಡಿಸಿ ಮಾಹಿತಿಯನ್ನು ಸಂಗ್ರಹಿಸಿ ನಾವು ಕೂಗುವ ಕೂಗು ಕೃತಿ ರಚಿಸಲಾಗಿದೆ. ಸ್ನಾತಕೋತ್ತರ ಕೇಂದ್ರವನ್ನು ಆಧುನಿಕ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ಅಭಿವೃದ್ಧಿ ಪಡಿಸಲಾಗುತಿದ್ದು ಇನ್ನು ಹಲವು ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.

ನೀಲಗಾರರ ಸಂಸ್ಕೃತಿ ಮುಂದುವರಿಸಿ: ಮಂಟೇಸ್ವಾಮಿ ಅಧ್ಯಯನ ಪೀಠ ಹಾಗೂ ಕನ್ನಡ ವಿಭಾಗದ ಸಂದರ್ಶಕ ಪ್ರಾಧ್ಯಾಪಕ ಡಾ. ಕೃಷ್ಣಮೂರ್ತಿ ಹನೂರು ಮಾತನಾಡಿ ಹಲವಾರು ತತ್ವಪದಗಳನ್ನು ಒಳಗೊಂಡಿರುವ ನೀಲಗಾರರ ಸಾಹಿತ್ಯಗಳು ಸುಧೀರ್ಘ‌ವಾಗಿ ಹಾಡುವ ಕಲೆಯಾಗಿದೆ.ನೀಲಗಾರರ ಸಂಸ್ಕೃತಿ ನಶಿಸಿಹೋಗದಂತೆ ದಾಖಲೀಕರಿಸಿ ಮುಂದಿನ ಪೀಳಿಗೆಗೆ ಉಳಿಸಿ, ಮುಂದುವರೆಸುವ ಕೆಲಸ ಆಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ವಿ.ವಿ. ಕುಲಸಚಿವ ಆರ್‌. ಶಿವಪ್ಪ, ಹಣಕಾಸು ಅಧಿಕಾರಿ ಡಾ. ಸಂಗೀತಾ ಗಜಾನನ, ಸಿಂಡಿಕೇಟ್‌ ಸದಸ್ಯ ಪ್ರದೀಪ್‌ಕುಮಾರ್‌ ದೀಕ್ಷಿತ್‌, ಡಾ. ಬಿ.ಆರ್‌. ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪೊ›. ಆರ್‌. ಮಹೇಶ್‌, ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ. ವಿಜಯಕುಮಾರಿ ಕರಿಕಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.