ರೈತರ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ


Team Udayavani, Nov 19, 2022, 4:31 PM IST

tdy-12

ಚಾಮರಾಜನಗರ: ಜಿಲ್ಲೆಯ ರೈತರು, ಜನ ಸಾಮಾನ್ಯರ ಸಮಸ್ಯೆ ಆಶೋತ್ತರಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ನಿರ್ಲಕ್ಷ್ಯ ಧೋರಣೆ ತೋರಿದರೆ ಸಹಿಸುವುದಿಲ್ಲ ಎಂದು ವಸತಿ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ, ರೈತರಿಗೆ ಸಂಬಂಧಿಸಿದ ವಿಷಯಗಳು, ಕೆರೆಗಳಿಗೆ ನೀರು ತುಂಬಿಸುವ ಸಂಬಂಧ ರೈತ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರ ಅನುಕೂಲಕ್ಕಾಗಿ ಇರುವ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಲೋಪವಾದರೆ ಕ್ರಮ ಜರುಗಿಸ ಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಬೆಂಗಳೂರಿಗೆ ಬನ್ನಿ: ಕರ ನಿರಾಕರಣೆ ಸಂಬಂಧ ವಿದ್ಯುತ್‌ ಬಾಕಿ ಮನ್ನಾ ಮಾಡುವ ಸಂಬಂಧ ಸಚಿವ ಸಂಪುಟದ ಮುಂದೆ ತರುವ ನಿಟ್ಟಿನಲ್ಲಿ ಸೋಮವಾರ ಇಲ್ಲವೇ ಮಂಗಳ ವಾರವೇ ಅಧಿಕಾರಿಗಳು ಬೆಂಗಳೂರಿಗೆ ಬಂದು ಅಗತ್ಯ ಪ್ರಕ್ರಿಯೆ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಪರಿಹಾರ ಹೆಚ್ಚಿಸಿ: ರೈತ ಮುಖಂಡರು ಮಾತನಾಡಿ, ಅಕ್ರಮ ಗಣಿಗಾರಿಕೆ ತಡೆಯಬೇಕು. ಪರಿಶೀಲನೆಗೆ ಚೆಕ್‌ ಪೋಸ್ಟ್‌ಗಳನ್ನು ತೆರೆಯಬೇಕು. ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ನೀಡುತ್ತಿಲ್ಲ. ಈ ಬಗ್ಗೆ ನಿರ್ದೇಶನ ನೀಡಬೇಕು. ಹಾವು ಕಚ್ಚಿದರೆ ನೀಡಲಾಗುವ ಪರಿಹಾರ ಹೆಚ್ಚಳವಾಗಬೇಕು, ಪರಿಹಾರ ಪಡೆಯಲು ಹಾಲಿ ಇರುವ ನಿಯಮಗಳನ್ನು ಸಡಲಿಕೆ ಮಾಡಬೇಕು ಎಂದು ಹೇಳಿದರು.

ಖರೀದಿ ಕೇಂದ್ರ ತೆರೆಯಿರಿ: ಪ್ರತಿ ಟನ್‌ ಕಬ್ಬಿಗೆ ಹೆಚ್ಚಿನ ಬೆಲೆ ನಿಗದಿ ಮಾಡಬೇಕು, ರಾಗಿ, ಭತ್ತ ಖರೀದಿ ಕೇಂದ್ರ ತೆರೆಯಬೇಕು. ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಪೋಡುಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. ಹೊರ ಜಿಲ್ಲೆಗಳ ಕಬ್ಬನ್ನು ಇಲ್ಲಿನ ಸಕ್ಕರೆ ಕಾರ್ಖಾ ನೆಯಲ್ಲಿ ಅರೆಯಬಾರದು. ಕಬ್ಬಿಗೆ ಎಫ್ಆರ್‌ಪಿ 500 ರೂ. ಕೊಡಿ ಸಬೇಕು ಎಂಬ ವಿಷಯ ಸಭೆಯಲ್ಲಿ ಪ್ರಸ್ತಾಪಿಸಿದರು.

ವಿದ್ಯುತ್‌ ಕಡಿತ ಬೇಡ: ಎಲ್ಲಾ ಅಹವಾಲು, ಸಮಸ್ಯೆಗಳನ್ನು ಆಲಿಸಿದ ಸಚಿವ ಸೋಮಣ್ಣ ಮಾತನಾಡಿ, ಇಲಾಖೆಗಳು ರೈತರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಕಮಿಷನ್‌ ಪಡೆಯಬಾರದು. ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಬೇಕು. ವಾರಕ್ಕೆ ಒಂದು ದಿನ ರೈತರ ಸಭೆ ಕರೆದು ಅವರ ಸಮಸ್ಯೆಗಳನ್ನು ಪರಿಹರಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಹಾಡಿ ಪೋಡುಗಳ ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ವಿದ್ಯುತ್‌ ಸಂಪರ್ಕ ಕಡಿತ ಮಾಡಬಾರದು ಎಂದು ಹೇಳಿದರು.

ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ: ಜಿಲ್ಲೆಯ ಪ್ರಕೃತಿ ಸಂಪತ್ತು ಲೂಟಿಯಾಗುವುದನ್ನು ತಡೆಯಬೇಕು. ಅಕ್ರಮ ಗಣಿಗಾರಿಕೆಗೆ ಅವಕಾಶವಾಗಬಾರದು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಬೇಕು ಎಂದು ಸಚಿವರು ತಿಳಿಸಿದರು. ಆನೆಮಡುವಿನ ಕೆರೆಗೆ ನೀರು ಹರಿಸಲಾಗುತ್ತದೆ. ಕಬ್ಬು ಬೆಳೆಗಾರರ ಸಮಸ್ಯೆ ತಮಗೆ ಅರಿವಿದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಗಮನಕ್ಕೆ ತರಲಾಗುವುದು. ರೈತರಿಗೆ ಸಾಗುವಳಿ ಪತ್ರ, ದುರಸ್ತಿ, ಪೋಡು ಇನ್ನಿತರ ಕಂದಾಯ ಇಲಾಖೆಯಿಂದ ಆಗಬೇಕಿರುವ ಕೆಲಸಗಳಿಗೆ ತ್ವರಿತವಾಗಿ ಕ್ರಮವಹಿಸಲಾಗು ತ್ತದೆ ಎಂದು ಸಚಿವರು ತಿಳಿಸಿದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ‌ ಜಿ. ನಿಜಗುಣರಾಜು, ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕುಲಕರ್ಣಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಹಿರಿಯ ಅರಣ್ಯ ಅಧಿಕಾರಿಗಳಾದ ಡಾ. ಸಂತೋಷ್‌ ಕುಮಾರ್‌, ರಮೇಶ್‌ಕುಮಾರ್‌, ದೀಪಾ, ರೈತ ಮುಖಂಡರಾದ ಹೊನ್ನೂರು ಪ್ರಕಾಶ್‌, ಮಹೇಶ್‌ ಪ್ರಭು, ಡಾ.ಗುರುಪ್ರಸಾದ್‌, ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಹೆಗ್ಗವಾಡಿಪುರ ಮಹೇಶ್‌ಕುಮಾರ್‌, ಕಡಬೂರು ಮಂಜುನಾಥ್‌, ಶಾಂತಮಲ್ಲಪ್ಪ, ಶೈಲೇಂದ್ರ, ಮಹದೇವಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.