3ನೇ ದಿನವೂ ದೊರಕದ ಫ‌ಲಿತಾಂಶ


Team Udayavani, Jul 1, 2020, 6:13 AM IST

3ne-dina

ಚಾಮರಾಜನಗರ: ಜಿಲ್ಲೆಯ ಕೋವಿಡ್‌ ಪರೀಕ್ಷಾ ಪ್ರಯೋಗಾಲಯ ಸೀಲ್‌ಡೌನ್‌ ಆಗಿರುವುದರಿಂದ ಸತತ 3ನೇ ದಿನವೂ ಪ್ರಕರಣಗಳ ಫ‌ಲಿತಾಂಶ ದೊರಕಲಿಲ್ಲ. ಈ ರೀತಿ ವಿಳಂಬವಾದರೆ ಗಂಟಲು ದ್ರವ ಪರೀಕ್ಷೆಗೆ ಕೊಟ್ಟಿರುವವರಲ್ಲಿ  ಸೋಂಕಿತರಿದ್ದು ಅವರು ಎಲ್ಲೆಡೆ ಓಡಾಡಿದರೆ ಸೋಂಕು ಹರಡುವುದಿಲ್ಲವೇ? ಎಂಬ ಪ್ರಶ್ನೆ ಎದ್ದಿದೆ. ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿರುವ ಕೋವಿಡ್‌ ಪರೀಕ್ಷಾ ಪ್ರಯೋಗಾಲಯದ ತಂತ್ರಜ್ಞೆಯೋರ್ವ ರಿಗೆ ಸೋಂಕು  ತಗುಲಿರುವ ಕಾರಣ ಸೀಲ್‌ಡೌನ್‌ ಆಗಿದೆ.

ಹೀಗಾಗಿ ಕಳೆದ ಶನಿವಾರ (ಜೂ.27) ದಿಂದ ಪ್ರಯೋಗಾಲಯದಲ್ಲಿ ಕೋವಿಡ್‌ನ‌ ಗಂಟಲು ಮಾದರಿ ಪರೀಕ್ಷೆಗಳು ನಡೆಯುತ್ತಿಲ್ಲ. ನಗರದ ಪೇಟೆ ಶಾಲೆಯ ಆವರಣದಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಂಕಿತರ ಗಂಟಲು ದ್ರವ ಸಂಗ್ರಹಣೆ ನಡೆಯುತ್ತಿದೆ. ಆದರೆ ಈ ಮಾದರಿಗಳ ಪರೀಕ್ಷೆ ಸ್ಥಗಿತವಾಗಿದೆ. ಶನಿವಾರ ಭಾನುವಾರದ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಪ್ರತಿ ದಿನ ಸರಾಸರಿ ಸುಮಾರು 500  ಮಾದರಿಗಳ ಸಂಗ್ರಹವಾಗುತ್ತದೆ. ಈಗಾಗಲೇ 1,678 ಮಾದರಿಗಳನ್ನು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೂ 1 ಸಾವಿರ ಮಾದರಿಗಳು ನಗರದಲ್ಲೇ ಉಳಿದಿವೆ.

ವರದಿಗಾಗಿ ಕಾಯುತ್ತಿದ್ದೇವೆ: ಪರೀಕ್ಷೆ ಮಾಡಿಸಿಕೊಂಡು ಮೂರ್‍ನಾಲ್ಕು ದಿನಗಳಿಂದ ಮನೆಯಲ್ಲೇ ಉಳಿದಿರುವ ಇಬ್ಬರು ಉದಯವಾಣಿಯೊಂದಿಗೆ ಮಾತನಾಡಿ, ನಾವು ಪರೀಕ್ಷೆ ಫ‌ಲಿತಾಂಶ ಬರುತ್ತದೆಂದು ಭಾನುವಾರದಿಂದ ಕಾಯುತ್ತಿದ್ದೇವೆ. ಮಂಗಳವಾರವೂ ಪರೀಕ್ಷೆಯ ವರದಿ ಬಂದಿಲ್ಲ. ಬೇರೆಯವರಿಗೆ ಸೋಂಕು ಹರಡೀತು ಎಂಬ ಮುಂದಾಲೋಚನೆಯಿಂದ ಮನೆಯಲ್ಲೇ ಉಳಿದಿದ್ದೇವೆ. ಮನೆಯ ಲ್ಲೂ ಇತರರಿಂದ ಅಂತರ ಕಾಪಾಡಿ ಕೊಂಡು ಪ್ರತ್ಯೇಕ  ಕೋಣೆಯಲ್ಲಿದ್ದೇವೆ. ಫ‌ಲಿತಾಂಶ ಬಂದು ನೆಗೆಟಿವ್‌ ಆದರೆ ನಿರಾಳವಾಗಬಹುದು. ಪಾಸಿಟಿವ್‌ ಬಂದರೆ ಆಸ್ಪತ್ರೆಗಾದರೂ ದಾಖಲಾಗ ಬಹುದು. ಆದರೆ ಫ‌ಲಿತಾಂಶವೇ ಬಾರದೇ ಇಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಎಂದು ಅಳಲು  ತೋಡಿಕೊಂಡರು.

ಕಂಟೈನ್‌ಮೆಂಟ್‌ ವಲಯದಲ್ಲಿ ಕೇಳುವವರಿಲ್ಲ: ಇನ್ನೊಂದೆಡೆ, ನಗರದಲ್ಲಿ ಕಂಟೈನ್‌ಮೆಂಟ್‌ ವಲಯಗಳೆಂದು ಸೀಲ್‌ಡೌನ್‌ ಮಾಡಿರುವ ಪ್ರದೇಶಗಳಲ್ಲಿ ಉಸ್ತುವಾರಿ ನೋಡಿಕೊಳ್ಳುವವರಿಲ್ಲದೇ ಅನಾಥ ವಾಗಿವೆ. ನಗರದ ಭ್ರಮರಾಂಬ  ಬಡಾವಣೆ 6ನೇ ಕ್ರಾಸ್‌ನಲ್ಲಿ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಿ ಎರಡು ಬ್ಯಾರಿಕೇಡ್‌ ಹಾಕಲಾಗಿದೆ. ಒಂದೆರಡು ದಿನ ಅಲ್ಲಿ ಉಸ್ತುವಾರಿ ಸಿಬ್ಬಂದಿ, ಪೊಲೀಸ್‌, ಹೋಂ ಗಾರ್ಡ್‌ ಇದ್ದರು. ಆದರೆ ಮಂಗಳವಾರ  ಮಧ್ಯಾಹ್ನದವರೆಗೆ ಹೋಂ ಗಾರ್ಡ್‌ ಮಾತ್ರ ಇದ್ದರು. ಸೀಲ್‌ ಡೌನ್‌ ಪ್ರದೇಶದ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿ ಇರಲಿಲ್ಲ. ಸೀಲ್‌ಡೌನ್‌ ಪ್ರದೇಶದ ಜನರ ಅವಶ್ಯಕತೆಗಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಆ ಪ್ರದೇಶದ  ನಾಗರಿಕರು ಆರೋಪಿಸಿದ್ದಾರೆ.

* ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.