20 ವರ್ಷಗಳ ಕಾಲ ಬಾಳಿಕೆಗೆ ಬರುವಂತೆ ರಸ್ತೆ ನಿರ್ಮಿಸಿ


Team Udayavani, Sep 4, 2022, 3:34 PM IST

20 ವರ್ಷಗಳ ಕಾಲ ಬಾಳಿಕೆಗೆ ಬರುವಂತೆ ರಸ್ತೆ ನಿರ್ಮಿಸಿ

ಹನೂರು: ಅಜ್ಜಿಪುರ ಕಾಂಚಳ್ಳಿ ಮುಖ್ಯ ರಸ್ತೆಯ 2 ಕಿ.ಮೀ. ರಸ್ತೆ ಮತ್ತು ರಾಮಾಪುರ- ಮುನಿಯಪ್ಪನದೊಡ್ಡಿ ಗ್ರಾಮದ ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿಗೆ 1.43 ಕೋಟಿ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದು ಶಾಸಕ ಆರ್‌.ನರೇಂದ್ರ ಹೇಳಿದರು.

ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಅಜ್ಜಿಪುರ-ಕಾಂಚಳ್ಳಿ ಮುಖ್ಯ ರಸ್ತೆಯನ್ನು 1.03 ಕೋಟಿ ವೆಚದಲ್ಲಿ 2 ಕಿ.ಮೀ. ಹಾಗೂ ಮುನಿಯಪ್ಪನ ದೊಡ್ಡಿಗೆ 40 ಲಕ್ಷ ವೆಚ್ಚದಲ್ಲಿ ಬಾಕಿ ಉಳಿದಿರುವ ಕಾಮಗಾರಿಗೆ ಭೂಮಿಪೂಜೆ ನೆರವೇರಿ ಸಿದರು. ಬಳಿಕ ಮಾತನಾಡಿ, ಕಾಮಗಾರಿಯ ಹೊಣೆ ಹೊತ್ತ ವರು ಉತ್ತಮ ರೀತಿಯಲ್ಲಿ ಕಾಮಗಾರಿ ನಿರ್ವಹಿಸಿ ಮುಂದಿನ 20 ವರ್ಷಗಳ ಕಾಲ ಬಾಳಿಕೆಗೆ ಬರುವಂತೆ ನಿರ್ವಹಿಸಬೇಕು ಎಂದು ಮಾಹಿತಿ ನೀಡಿದರು.

6 ಗಂಟೆ ನಂತರ ಸಂಚಾರ ನಿಷೇಧಕ್ಕೆ ಕ್ರಮ: ಹನೂರು ತಾಲೂಕಿನಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ತಾಳಬೆಟ್ಟ- ಪಾಲಾರ್‌ ಮತ್ತು ನಾಲಾರೋಡ್‌ ಗರಿಕೆಕಂಡಿ ಮಾರ್ಗಗಳಲ್ಲಿ ಸಂಜೆ 6 ಗಂಟೆ ನಂತರ ಭಾರೀ ವಾಹನಗಳ ಸಂಚಾರ ನಿಷೇಧಕ್ಕೆ ಕ್ರಮವಹಿಸಲಾಗಿದೆ. ಭಾರೀ ವಾಹನಗಳ ಸಂಚಾರದಿಂದ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವುದು ಮತ್ತು ರಸ್ತೆಗಳು ಅತಿವೇಗ ಹಾಳಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಮಳೆಹಾನಿ ಬಗ್ಗೆ ಚರ್ಚಿಸಲಾಗಿದೆ: ನಿರಂತರ ಮಳೆಯಿಂದಾಗಿ ಹನೂರು ತಾಲೂಕಿನಲ್ಲಿ 24 ಹೆಕ್ಟೇರ್‌ ಭೂಮಿಯಲ್ಲಿ ಬೆಳೆದಿದ್ದ ಆಲೂಗೆಡ್ಡೆ, ಬೆಳ್ಳುಳ್ಳಿ ಬೆಳೆ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಬಂದಿದೆ. ಅಲ್ಲದೆ ಪ್ರವಾಹ ಸಂದರ್ಭದಲ್ಲಿ ಭನಗೆರೆ, ಸರಗೂರು, ಸತ್ತೇಗಾಲ, ಯಡಕುರಿಯಾದಲ್ಲಿ 20 ಎಕರೆ ಭೂಮಿ ಯಲ್ಲಿ ಬಎಳೆದಿದ್ದ ಭತ್ತದ ಬೆಳೆ ನಷ್ಟವಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದು ಸೂಕ್ತ ಪರಿಹಾರ ನೀಡಲು ಸೂಚನೆ ನೀಡಲಾಗಿದೆ.

ತಲಾ 3 ಲಕ್ಷ ಪರಿಹಾರ: ಅಲ್ಲದೆ 8-9 ಮನೆಗಳು ಹಾನಿಗೀಡಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು ತಾತ್ಕಾಲಿಕವಾಗಿ ತಲಾ 10 ಸಾವಿರ ಪರಿಹಾರ ನೀಡಿ ತಲಾ 3 ಲಕ್ಷ ಪರಿಹಾರ ಕಲ್ಪಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮುಳುಗು ಸೇತುವೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದು ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಅನುಮತಿಗಳನ್ನು ನೀಡಲು ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮುಖಂಡರಾದ ಅಜ್ಜಿಪುರ ನಾಗರಾಜು, ಬಸಪ್ಪನ ದೊಡ್ಡಿ ಮಹದೇವ ಪ್ರಸಾದ್‌, ಖಲಂದರ್‌ ಪಾಷ, ಗುತ್ತಿಗೆದಾರ ಅಪ್ಪಾದೊರೈ ಇದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.