ಮಳೆಗೆ ಕೆಟ್ಟುಹೋದ ಗೋಪಾಲಸ್ವಾಮಿ ಬೆಟ್ಟದ ರಸ್ತೆ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
Team Udayavani, Oct 16, 2022, 1:11 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ದೊಡ್ಡ ತಿರುವು ಸೇರಿದಂತೆ ಹಲವು ಕಡೆ ರಸ್ತೆ ಕೆಟ್ಟುಹೋಗಿದ್ದು ಬೆಟ್ಟಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕಳೆದ ಮೂರು ದಿನದಿಂದಲೂ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ನಿರಂತರವಾಗಿ ಮಳೆಯಾದ ಕಾರಣ ಮಳೆ ನೀರು ಹರಿದು ರಸ್ತೆಯ ಎರಡು ಬದಿಯಲ್ಲಿ ಹೊಂಡಗಳು ಉಂಟಾಗಿದೆ. ಈ ಹಿನ್ನೆಲೆ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳನ್ನು ತಪ್ಪಲಿನ ಗೇಟ್ ನಲ್ಲಿ ನಿಲುಗಡೆ ಮಾಡಲಾಗಿದೆ.
ಪ್ರವಾಸಿಗರಿಗೆ ತೊಂದರೆ:
ಇಂದು ಭಾನುವಾರವಾದ ಹಿನ್ನೆಲೆ ಮೈಸೂರು, ಬೆಂಗಳೂರು ಸೇರಿದಂತೆ ನೆರೆಯ ತಮಿಳುನಾಡು, ಕೇರಳದಿಂದ ಅಧಿಕ ಮಂದಿ ಪ್ರವಾಸಿಗರು ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಆಗಮಿಸಿದರು. ಆದರೆ ಬೆಟ್ಟಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿರುವ ಕಾರಣ ಭಕ್ತಾದಿಗಳು ಹಾಗೂ ಪ್ರವಾಸಿಗರು ವಿಧಿಯಿಲ್ಲದೆ ವಾಪಸ್ ತೆರಳುತ್ತಿದ್ದಾರೆ. ಇನ್ನು ಹಂಗಳ ಗ್ರಾಮದ ಪ್ರವೇಶ ದ್ವಾರದಲ್ಲಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿಂತು ಬಸ್ ಗಳನ್ನು ವಾಪಸ್ ಕಳುಹಿಸುತ್ತಿದ್ದಾರೆ.
ಮಾಹಿತಿ ಇದ್ದರೂ ಗುಂಡಿಮುಚ್ಚದ ಅಧಿಕಾರಿಗಳು:
ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಗುಂಡಿ ಬಿದ್ದಿತ್ತು. ಇದನ್ನು ದುರಸ್ತಿ ಪಡಿಸದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳಿದ ಹಿನ್ನೆಲೆ ಇಂದು ಅದೇ ಗುಂಡಿಗಳು ದೊಡ್ಡದಾಗಿ ಮಾರ್ಪಾಡಾಗಿದೆ. ಕಾರಣದಿಂದ ಬೆಟ್ಟಕ್ಕೆ ಬಸ್ ಸಂಚಾರ ನಿಲ್ಲಿಸಲಾಗಿದೆ ಎಂದು ಪುರಸಭೆ ಸದಸ್ಯ ರಾಜಗೋಪಾಲ್ ದೂರಿದರು.
ಇದನ್ನೂ ಓದಿ : ಮನೆ ಮೆಚ್ಚಿದ ಮಗಳಾದ ಕರಾವಳಿ ಕುವರಿ ಅಮಿತಾ ಕುಲಾಲ್ ಬ್ಯೂಟಿಫುಲ್ ಗ್ಯಾಲರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!