ಆಮೆಗತಿಯಲ್ಲಿ ಕಾಮಗಾರಿ: ಸಂಚಾರಕ್ಕೆ ಸಂಚಕಾರ
Team Udayavani, Jun 12, 2022, 12:54 PM IST
ಗುಂಡ್ಲುಪೇಟೆ: ಗುಂಡ್ಲುಪೇಟೆ-ಚಾಮರಾಜನಗರ ರಸ್ತೆ ಮಾರ್ಗ ಮಧ್ಯೆದ ತ್ರಿಯಂಬಕಪುರ ಬಸ್ ನಿಲ್ದಾಣದ ಬಳಿ ಆರಂಭವಾಗಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಆಗಿದೆ.
ಗುಂಡ್ಲುಪೇಟೆ ಮೂಲಕ ತೆರಳುವ ತೆರಕಣಾಂಬಿ ಬಳಿ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿ ಆರಂಭಿಸಿ ಎರಡು ತಿಂಗಳು ಸಮೀಪಿಸುತ್ತಿದ್ದರೂ ಗುತ್ತಿಗೆದಾರರು ಪೂರ್ಣಗೊಳಿಸದೇ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ. ಈಗಾಗಲೇ ರಸ್ತೆಯಲ್ಲಿ ಹಾಕಿದ್ದ ಜೆಲ್ಲಿಕಲ್ಲು ಮೇಲೆದ್ದು, ದೂಳು ಆವರಿಸಿಕೊಳ್ಳುತ್ತಿದೆ. ದ್ವಿಚಕ್ರ ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಾಗಿದೆ.
ಜನದಟ್ಟಣೆ ರಸ್ತೆ: ಗುಂಡ್ಲುಪೇಟೆ – ಚಾಮರಾಜ ನಗರ ರಸ್ತೆ ಜನದಟ್ಟಣೆಯಿಂದ ಕೂಡಿದ್ದು, ಪ್ರತಿನಿತ್ಯ ಸಾವಿರಾರು ವಾಹನಗಳು ಈ ಸಂಚಾರ ಮಾಡುತ್ತಿವೆ. ಜಲ್ಲಿಕಲ್ಲುಗಳು ಮೇಲೆದ್ದಿರುವ ಹಿನ್ನೆಲೆ ಒಂದು ಕಿ.ಮೀ. ಸಂಚರಿಸಲು ಹತ್ತು ನಿಮಿಷಗಳೇ ಬೇಕಾಗುತ್ತದೆ. ಕಳಪೆ ಕಾಮಗಾರಿ ಆರೋಪ: ನಿಗದಿಯಂತೆ ಜಲ್ಲಿ ಸೇರಿ ಇತರೆ ವಸ್ತುಗಳನ್ನು ಬಳಕೆ ಮಾಡದೆ, ಈ ಹಿಂದೆ ಡಾಂಬರ್ ತೆಗೆದು ಜಲ್ಲಿ ಹಾಕಲಾಗುತ್ತಿದ್ದು, ಕಾಮಗಾರಿ ಕಳಪೆ ಆಗಿದೆ. ಇದರ ಅರಿವಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ತ್ರಿಯಂಬಕಪುರದ ನಿವಾಸಿಗಳು ಆರೋಪಿಸಿದ್ದಾರೆ.
ಶಾಸಕರೇ ಇತ್ತ ಗಮನಿಸಿ: ಪ್ರಸ್ತುತ ದಕ್ಷಿಣ ಪದವೀ ಧರ ಕ್ಷೇತ್ರ, ಚಾಮುಲ್ ಚುನಾವಣೆ ಇರುವುದರಿಂದ ಶಾಸಕ ಸಿ.ಎಸ್.ನಿರಂಜನಕುಮಾರ್ ಈ ಮಾರ್ಗವಾಗಿ ಹಲವು ಬಾರಿ ಸಂಚರಿಸುತ್ತಿದ್ದಾರೆ. ಹೀಗಿದ್ದರೂ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಮತ್ತು ಕಳಪೆಯಿಂದ ನಿರ್ಮಾಣವಾಗುತ್ತಿರುವ ಬಗ್ಗೆ ಯಾವುದೇ ರೀತಿಯ ಚಕಾರ ಎತ್ತುತ್ತಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಶೀಘ್ರ ಮುಗಿಸುವಂತೆ ಒತ್ತಾಯ: ಗುತ್ತಿಗೆದಾರ ರಸ್ತೆ ಕಾಮಗಾರಿ ಶೀಘ್ರ ಮುಗಿಸಬೇಕು. ಇಲ್ಲವೆ, ದೂಳು ಮೇಲೆಳದಂತೆ ನೀರು ಹಾಕಿಸಿ, ವಾಹನ ಸವಾರರು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ವಾಹನ ಸವಾರ ಆನಂದ್ ಒತ್ತಾಯಿಸಿದ್ದಾರೆ.
ತ್ರಿಯಂಬಕಪುರ ಬಸ್ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಕಳಪೆ ಆಗಿದೆ. ಜೊತೆಗೆ ರಸ್ತೆ ಕಿತ್ತು ಹೋಗಿ ತಿಂಗಳು ಕಳೆದ್ರೂ ಗುತ್ತಿಗೆದಾರ ಶೀಘ್ರ ಮುಗಿಸುತ್ತಿಲ್ಲ. ಇದರಿಂದ ಜನರ ಓಡಾಟ, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಆಗಿದೆ. ಸದ್ಯದಲ್ಲೆ ಕಾಮಗಾರಿ ಮುಗಿಸದಿದ್ದರೆ ರಸ್ತೆ ತಡೆದು ಪ್ರತಿಭಟಿಸಲಾಗುವುದು. -ಕಡಬೂರು ಮಂಜು, ರೈತ ಮುಖಂಡ.
– ಬಸವರಾಜು ಎಸ್.ಹಂಗಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ