ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ
Team Udayavani, Jul 14, 2021, 4:49 PM IST
ಗುಂಡ್ಲುಪೇಟೆ: ಕೇರಳದ ಚಿಪ್ಸ್ ವ್ಯಾಪಾರಿಯನ್ನು ಅಪಹರಿಸಿ ಹಣ ಕಿತ್ತುಕೊಂಡು ದರೋಡೆ ಮಾಡಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ಕೋಟೆ ಕೆರೆ ರಸ್ತೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಕೇರಳ ಮೂಲದ ಹರ್ಷದ ಅಲಿ ಹಣ ಕಳೆದುಕೊಂಡ ವ್ಯಾಪಾರಿ. ಇವರು ಕೋಟೆಕೆರೆ ಸಮೀಪ ಚಿಪ್ಸ್ ಕಾರ್ಖಾನೆ ನಡೆಸುತ್ತಿದ್ದು, ಎಂದಿ ನಂತೆ ತನ್ನ ವ್ಯಾಪಾರ ಮುಗಿಸಿಕೊಂಡು ಕೋಟೆಕೆರೆಗೆ ಹಿಂತಿರುಗುವಾಗ ಮೂರು ಕಾರಿನಲ್ಲಿ ಬಂದ ಎಂಟು ಮಂದಿ ದುಷ್ಕರ್ಮಿ ಗಳು, ಇನೋವಾ ಕಾರಿನ ಮೇಲೆ ರಾಡಿನಿಂದ ದಾಂಧಲೆ ನಡೆಸಿ ಕಾರಿನಲ್ಲಿದ್ದ ಹರ್ಷದ್ ಅಲಿ ಹಾಗೂ ಸ್ನೇಹಿತ ಚಿನ್ನಸ್ವಾಮಿ ಅವರಿಗೆ ಖಾರದ ಪುಡಿ ಎರಚಿ ಇಬ್ಬರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈವೇಳೆ ಕಾರಿನ ಡ್ಯಾಶ್ ಬೋರ್ಡಿನಲ್ಲಿಟ್ಟಿದ್ದ 15 ಸಾವಿರ ರೂ.ಲಪಟಾಯಿಸಿ ಕಾರು ಹಾಗೂ ಮಾಲೀಕನನ್ನು ಬಿಟ್ಟು ಮುಸುಕುದಾರಿ ದರೋಡೆಕೋರರು ಪರಾರಿಯಾಗಿದ್ದಾರೆ.
ದರೋಡೆಕೋರರು ಮಲಯಾಳಂ ಭಾಷೆ ಮಾತನಾಡಿದ್ದು, ಕೇರಳದವರಾಗಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖ ಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ