ಶಿಕ್ಷಕನಿಂದ ಅಸಭ್ಯ ವರ್ತನೆ: ಬಿಇಒಗೆ ದೂರು


Team Udayavani, Dec 10, 2022, 4:23 PM IST

ಶಿಕ್ಷಕನಿಂದ ಅಸಭ್ಯ ವರ್ತನೆ: ಬಿಇಒಗೆ ದೂರು

ಮಂಡ್ಯ: ಮಕ್ಕಳನ್ನು ಭವಿಷ್ಯದ ಸತøಜೆಗಳನ್ನಾಗಿ ರೂಪಿಸಬೇಕಾದ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಮಂಡ್ಯ ತಾಲೂಕಿನ ಬೇಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಹಲವು ಬಾರಿ ದೂರು ಸಲ್ಲಿಕೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ ಮಹದೇವು ಎಂಬಾತನೇ ಈ ಕೃತ್ಯ ನಡೆಸಿ ದ್ದಾನೆ. ವಿದ್ಯಾರ್ಥಿನಿಯರ ಜತೆ ಅಸಭ್ಯ ವಾಗಿ ವರ್ತಿಸುವುದಲ್ಲದೆ, ಅವರ ಮೈ, ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಸ್ವತಃ ವಿದ್ಯಾರ್ಥಿನಿಯರೇ ತಮ್ಮ ಪೋಷಕರ ಬಳಿ ಅಳಲು ತೋಡಿಕೊಂಡಿ ದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಈ ರೀತಿಯಾಗುತ್ತಿದ್ದು ಪೋಷಕರು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಬಿಇಒಗೆ ಕರೆ: ಆದರೆ, ಅಧಿಕಾರಿಗಳು ಈವ ರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ಪೋಷಕರು ಎಸ್‌ಡಿಎಂಸಿ ಗಮನಕ್ಕೆ ತಂದಿಲ್ಲದೆ, ಸ್ಥಳೀಯ ಗ್ರಾಮ ಪಂಚಾಯ್ತಿಗೂ ದೂರು ನೀಡಿದ್ದಾರೆ. ಶುಕ್ರವಾರ ಇದ್ದಕ್ಕಿದ್ದಂತೆ ಎಸ್‌ಡಿಎಂಸಿ ಸಭೆ ಸೇರಿ ಈ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೆ, ಶಿಕ್ಷಕ ಮಹದೇವು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಒಂದು ಹಂತದಲ್ಲಿ ಹಲ್ಲೆ ಮಾಡಲೂ ಮುಂದಾಗಿದ್ದಾರೆ. ತಕ್ಷಣ ಪಂಚಾಯ್ತಿ ಸದಸ್ಯರು ತಡೆದು ಬಿಇಒಗೆ ಕರೆ ಮಾಡಿ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಇಒ ಸೌಭಾಗ್ಯ ಅವರು ಪೋಷಕರ ದೂರನ್ನು ಆಲಿಸಿದರಲ್ಲದೆ, ಶಿಕ್ಷಕ ಮಹದೇವು ಅವರನ್ನು ಶುಕ್ರವಾರದಿಂದಲೇ ಕಡ್ಡಾಯ ರಜೆ ಮೇಲೆ ತೆರಳುವಂತೆ ಆದೇಶ ಹೊರಡಿಸಿದರು.

ಡಿಡಿಪಿಐ ಜತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಕ್ಕಳ ಪೋಷಕರಿಗೆ ಭರವಸೆ ನೀಡಿದರು. ಈ ಬಗ್ಗೆ ಅಸಮಾಧಾನಗೊಂಡ ಪೋಷಕರು, ಮಹದೇವು ಅವರನ್ನು ಅಮಾನತು ಮಾಡಬೇಕು. ಬೇರೆ ಯಾವುದೇ ಶಾಲೆಗೆ ಕಳುಹಿಸಬಾರದೆಂದು ಪಟ್ಟು ಹಿಡಿದರು.

ನಂತರ ಮಾತನಾಡಿದ ಬಿಇಒ, ಅವರನ್ನು ಅಮಾನತು ಮಾಡುವ ಅಧಿ ಕಾರ ನನಗಿಲ್ಲ. ಡಿಡಿಪಿಐ ಜತೆ ಚರ್ಚೆ ಮಾಡಿ ವಿವರಣೆ ನೀಡುತ್ತೇನೆ. ಖಂಡಿತವಾಗಿಯೂ ಶಿಕ್ಷಕ ಮಹದೇವು ಅವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಸಮಾಧಾನಪಡಿಸಿದರು.

ಡಿಡಿಪಿಐಗೆ ವರದಿ ಸಲ್ಲಿಸುವೆ: ಇದು ವಿದ್ಯಾರ್ಥಿನಿಯರ ವಿಚಾರವಾ ಗಿರುವುದರಿಂದ ಗ್ರಾಮಸ್ಥರು ತುಂಬಾ ಆಕ್ರೋಶಗೊಂಡಿದ್ದರು. ಕೂಡಲೇ ನಾನು ಸ್ಥಳಕ್ಕೆ ಹೋಗಿ ಎಲ್ಲರನ್ನೂ ಸಮಾಧಾನಪಡಿಸಿ ವರದಿ ತೆಗೆದುಕೊಂಡು ಬಂದಿದ್ದೇನೆ. ಶಿಕ್ಷಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಮಂಡ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ಸೌಭಾಗ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.