ಸರ್ಕಟನ್‌ ನಾಲೆ ಪರಿಶೀಲಿಸಿದ ಅಧಿಕಾರಿಗಳು


Team Udayavani, May 16, 2019, 3:00 AM IST

sarkatan

ಕೊಳ್ಳೇಗಾಲ: ನಗರದ ಹೃದಯ ಭಾಗದಲ್ಲಿರುವ ಸರ್ಕಟನ್‌ ನಾಲೆ ಕಾಮಗಾರಿ ಆರಂಭಗೊಂಡು ವರ್ಷವೇ ಪೂರೈಸಿದ್ದರೂ ಕಾಮಗಾರಿ ಪೂರ್ಣಗೊಳ್ಳದೆ ನಾಲೆ ಅಕ್ರಮ ಒತ್ತುವರಿಗೆ ಸಿಲುಕಿ ಗಬ್ಬುನಾರುತ್ತಿದೆ ಎಂದು ಉದಯವಾಣಿ ದಿನಪತ್ರಿಕೆಯಲ್ಲಿ ವಿಶೇಷ ವರದಿ ಹಿನ್ನೆಲೆಯಲ್ಲಿ ನಾಲೆಗೆ ಉನ್ನತ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹೃದಯಭಾಗದಿಂದ ಆರಂಭಿಸಬೇಕಾಗಿದ್ದ ಸರ್ಕಟನ್‌ ನಾಲೆಯ ಕಾಮಗಾರಿಯನ್ನು ಅಧಿಕಾರಿಗಳು ಕೊನೆಯ ಭಾಗದಿಂದ ಆರಂಭಿಸಿ ಕಾಮಗಾರಿ ಸಂಪೂರ್ಣ ನನೆಗುದಿಗೆ ಬಿದ್ದಿರುವ ವರದಿಯನ್ನು ಕಳೆದ ಏ.22 ರಂದು ಉದಯವಾಣಿ ಪ್ರಕಟಿಸಿದ ಹಿನ್ನೆಲೆ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು, ಕಾಮಗಾರಿ ಕೂಡಲೇ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಮೈಸೂರಿನ ಕಬಿನಿ ನಾಲಾ ವಿಭಾಗದ ಸೂಪರಿಟೆಂಡೆಂಟ್‌ ಇಂಜಿನಿಯರ್‌ ಶ್ರೀಕಂಠ ಪ್ರಸಾದ್‌ ಸೂಚನೆ ನೀಡಿದರು.

ತಾಂತ್ರಿ ಕಾರಣದಿಂದ ಸಮಸ್ಯೆ: ಇದೇ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಇಂಜಿನಿಯರ್‌ ಶ್ರೀಕಂಠ ಪ್ರಸಾದ್‌, ಸರ್ಕಟನ್‌ ನಾಲೆ, ಕುಪ್ಪಮ್ಮ ಕಾಲುವೆ, ಹಂಪಾಪುರ ಕೆರೆಯ ನಾಲೆ ದುರಸ್ತಿಗೆ 20.30 ಕೋಟಿ ರೂ. ವೆಚ್ಚದಲ್ಲಿ ಅನುದಾನ ಬಿಡುಗಡೆಯಾಗಿದ್ದು, ಕುಪ್ಪಮ್ಮ ಕಾಲುವೆ ಕಾಮಗಾರಿ ಪ್ರಾರಂಭವಾಗಿದ್ದು, ಸರ್ಕಟನ್‌ ನಾಲೆಯಲ್ಲಿ ಹೂಳೆತ್ತಿಸಿದ ಅಧಿಕಾರಿಗಳು, ತಾಂತ್ರಿಕ ಕಾರಣದಿಂದ ನಂತರ ಕಾಮಗಾರಿ ಸಂಪೂರ್ಣ ನನೆಗುದಿಗೆ ಬಂದಿದೆ ಎಂದರು.

4 ತಿಂಗಳಲ್ಲಿ ಕಾಮಗಾರಿ ಪೂರ್ಣ: ನಾಲೆಯ ಕಾಮಗಾರಿಯನ್ನು 4 ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಚಿಕ್ಕರಂಗನಾಥ ಕೆರೆಯ ಕೋಡಿಯಿಂದ ಕೊಂಗಳಕೆರೆವರೆಗೂ ಸುಮಾರು 1600 ಮೀ. ಉದ್ದ, 7.5 ಮೀ. ಅಗಲದಲ್ಲಿ ಬಾಕ್ಸ್‌ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು. ಚರಂಡಿ ಮಧ್ಯಭಾಗದಲ್ಲಿ ಗಟ್ಟಿ ಮಣ್ಣು ಸಿಗುವವರೆಗೂ ನಾಲೆಯ ಹಳೆಯ ಮಣ್ಣುಗಳನ್ನು ಹೊರ ತೆಗೆಯಲಾಗುವುದು. ನಂತರ ರೋಲ್‌ ಮಾಡಿ ಎರಡು ಕಡೆ ಗೋಡೆಗಳನ್ನು ನಿರ್ಮಾಣ ಮಾಡಿ, ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಇಲಾಖೆಗಳ ಗುದ್ದಾಟ: ನಾಲೆಯ ಉದ್ದಕ್ಕೂ ಇದ್ದ ಮರಗಳನ್ನು ಅರಣ್ಯ ಇಲಾಖೆಯವರು ತೆರವು ಮಾಡುವಲ್ಲಿ ಮೆದು ಧೋರಣೆ ತೋರಿದರು ಮತ್ತು ನಾಲೆಯ ಎರಡು ಬದಿಯಲ್ಲಿ ಅಕ್ರಮ ಒತ್ತುವರಿ ಸ್ಥಳವವನ್ನು ತೆರವು ಮಾಡುವಲ್ಲಿ ನಗರಸಭೆ ಅಧಿಕಾರಿಗಳು ಸಹಕಾರ ನೀಡದ ಪ್ರತಿಫ‌ಲವಾಗಿ ಕಾಮಗಾರಿ ವಿಳಂಬವಾಗಬೇಕಾಯಿತು ಎಂದು ಇಲಾಖೆಗಳ ಒಳಗಿನ ಗುದ್ದಾಟವನ್ನು ಹೊರ ಹಾಕಿದರು.

ವಿನ್ಯಾಸ ಶಾಖೆಯ ಎಇಇ ಚಂದ್ರಶೇಖರ, ನಿವೃತ್ತ ಸೂಪರಿಟೆಂಡೆಂಟ್‌ ಎಂಜಿನಿಯರ ಸಂಪತ್‌ ಕುಮಾರ್‌, ಕಬಿನಿ ನಾಲಾ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಉಮೇಶ್‌ ಮತ್ತು ಸಿಬ್ಬಂದಿ ವರ್ಗ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.