ಸವಿತಾ ಸಮಾಜ ಮೀಸಲಾತಿಗೆ ಹೋರಾಟ: ಶ್ರೀ
Team Udayavani, Mar 8, 2021, 2:22 PM IST
ಯಳಂದೂರು: ತುಳಿತಕೊಳಗಾಗಿರುವ ಸವಿತಾ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕು. ಈ ಬಗ್ಗೆ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು ಎಂದುಕಲಬುರಗಿ ಜಿಲ್ಲೆ ವಾಡಿಯ, ಕೊಂಚೂರು ಗ್ರಾಮದ ರಾಜ್ಯ ಸವಿತಾ ಪೀಠದ ಮಾಠಾಧ್ಯಕ್ಷ ಶ್ರೀಧರಾನಂದ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಬಳೇಪೇಟೆಯಲ್ಲಿರುವ ಸವಿತಾ ಭವನದಲ್ಲಿ ಸವಿತಾ ಸಮಾಜದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ ನಮಗೆ 10 ವರ್ಷ ಕಾಲ ಶೈಕ್ಷಣಿಕ, ಉದ್ಯೋಗ ಮೀಸಲಾತಿ ನೀಡಬೇಕು. ಈ ಬಗ್ಗೆ ರಾಜ್ಯಾದ್ಯಂತ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡಲಾಗುತ್ತಿದೆ.ಇದರ ಪ್ರಥಮ ಹಂತವಾಗಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗಳಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಗಮನ ಸೆಳೆಯಲಾಗುವುದು ಎಂದರು.
ಆರ್ಥಿಕವಾಗಿ ಸಂಘಟನೆಗಳನ್ನು ಗಟ್ಟಿಗೊಳಿಸಬೇಕು. ಮೀಸಲಾತಿ ಬಗ್ಗೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿರಾಜ್ಯ ಪ್ರವಾಸ ಕೈಗೊಂಡಿದ್ದು, ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಬಗ್ಗೆಮುಖ್ಯ ಮಂತ್ರಿಗಳು, ಮಂತ್ರಿಗಳು, ಸಂಸದರು, ಶಾಸಕರ ಗಮನ ಸೆಳೆಯಲು ಸಮುದಾಯ ಕೈಜೋಡಿಸ ಬೇಕು ಎಂದರು. ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಪಿ.ಸಿ. ಶ್ರೀಕಂಠಸ್ವಾಮಿಮಾತನಾಡಿ, ನಮ್ಮ ಸಮಾಜದಅಭಿವೃದ್ಧಿಗೆ ಶ್ರೀಗಳ ಪಾತ್ರ ಪ್ರಮುಖವಾಗಿದೆ. ಸಂಘಟನೆಗಳು ಅವರ ಕೈ ಬಲಪಡಿಸಬೇಕಿದ್ದು, ಈ ನಿಟ್ಟಿನಲ್ಲಿ ಯಳಂದೂರು ತಾಲೂಕು ಸಂಘವೂ ತಮ್ಮ ಜೊತೆಗಿದೆ ಎಂದರು.
ಈ ವೇಳೆ ಶಿಕ್ಷಕ, ಕವಿ ಗುಂಬಳ್ಳಿ ಬಸವ ರಾಜು ಸವಿತಾ ಸಮಾಜದ ಕೋಶಾಧ್ಯಕ್ಷ ರಾಮಣ್ಣ, ರಾಚಶೆಟ್ಟಿ, ನಾಗೇಶ್, ಕಾಂತರಾಜು, ನಿಂಗರಾಜು, ರಾಜೇಶ್, ಬಸವರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್