ಪ್ಯಾನೆಲ್‌ ವಕೀಲರಿಗೆ ಸೇವಾ ಮನೋಭಾವ ಮುಖ್ಯ


Team Udayavani, Aug 29, 2019, 3:00 AM IST

pannel-vak

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೇಮಕಗೊಂಡ ಪ್ಯಾನೆಲ್‌ ವಕೀಲರಿಗೆ ಸೇವಾ ಮನೋಭಾವ ತುಂಬಾ ಮುಖ್ಯ. ಹಣಗಳಿಕೆಯ ಉದ್ದೇಶವನ್ನು ಮೀರಿ ಸಾಮಾನ್ಯರಿಗೂ ನ್ಯಾಯ ದೊರೆಯುವಂತೆ ಮಾಡುವುದು ಪ್ಯಾನೆಲ್‌ ವಕೀಲರ ಕರ್ತವ್ಯವಾಗಿರುತ್ತದೆ ಎಂದು ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ‌ ಡಿ. ವಿನಯ್‌ ಹೇಳಿದರು.

ನಗರದ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ರಾಜ್ಯ ಕಾನೂನು ಸೇವೆಗಳರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಅಭಿಯೋಜನಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2019ನೇ ಸಾಲಿನಲ್ಲಿ ಹೊಸದಾಗಿ ನೇಮಕಗೊಂಡ ಪ್ಯಾನೆಲ್‌ ವಕೀಲರಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾರ್ಯಾಗಾರಗಳು ಸಹಕಾರಿ: ಪ್ಯಾನೆಲ್‌ ವಕೀಲರು ಅವರ ಕಾರ್ಯಾವಧಿಯಲ್ಲಿ ವಿವಿಧ ರೀತಿಯ ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ. ಅವುಗಳನ್ನು ಸಮರ್ಥವಾಗಿ ಮುನ್ನಡೆಸಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗಲಿವೆ. ಕೇವಲ ಉಪನ್ಯಾಸ ರೀತಿಯ ಮಾದರಿಯಾಗಿರದೇ, ವಿಚಾರ ವಿನಿಮಯಕ್ಕೆ ಅವಕಾಶವಿರುವುದರಿಂದ ನಿಮ್ಮ ಎಲ್ಲಾ ಅನುಮಾನಗಳು ಈ ಕಾರ್ಯಾಗಾರದ ಮುಖೇನ ಪರಿಹಾರಗೊಳ್ಳಲಿವೆ ಎಂದು ತಿಳಿಸಿದರು.

ನೈಪುಣ್ಯತೆ ಇರಬೇಕು: ನಗರದ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಗಣಪತಿ ಜಿ ಬಾದಾಮಿ ಮಾತನಾಡಿ, ಯಾವುದೇ ಪ್ರಕರಣವನ್ನು ಬಗೆಹರಿಸಲು ಪ್ಯಾನೆಲ್‌ ವಕೀಲರು ಮುಂದಾಗಬೇಕು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಬೇಕು. ಪ್ರಕರಣಗಳ ಇತ್ಯರ್ಥಕ್ಕೆ ಅಗತ್ಯವಿರುವ ನೈಪುಣ್ಯತೆ ಇಂತಹ ಕಾರ್ಯಾ ಗಾರಗಳಿಂದ ದೊರೆಯಲಿದೆ ಎಂದು ಹೇಳಿದರು.

ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಿ: ಇಂದಿಗೂ ಎಷ್ಟೋ ಜನರಿಗೆ ಕಾನೂನಿಗೆ ಬಗೆಗೆ ಸಂಪೂರ್ಣ ಮಾಹಿತಿ ಇಲ್ಲ. ಆಸ್ತಿ ವಿವಾದ, ವಿವಾಹ ವಿಚ್ಛೇದನ ಮುಂತಾದ ವಿಚಾರಗಳನ್ನು ಯಾವುದೇ ಕಾನೂನಿನ ಭದ್ರತೆ ಇಲ್ಲದೇ ತಮ್ಮಲ್ಲೇ ಬಗೆಹರಿಸಿಕೊಳ್ಳುವ ಪದ್ಧತಿ ಇದೆ. ಈ ಹಿಂಜರಿಕೆ ಮೊದಲು ಹೋಗಬೇಕು. ಪ್ರತಿಯೊಬ್ಬರೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ತೀರ್ಪುಗಳ ಬಗ್ಗೆ ಅರಿತು ಕೊಂಡಿರಬೇಕು: ನಗರ ಉಪ- ವಿಭಾಗದ ಪೊಲೀಸ್‌ ಡಿವೈಎಸ್‌ಪಿ ಜೆ. ಮೋಹನ್‌ ಮಾತನಾಡಿ ಕಲಿಕೆ ಎಂಬುದು ನಿರಂತರವಾದದ್ದು. ವಕೀಲರಾದವರು ಕಾನೂನಿನಲ್ಲಾದ ಹೊಸ ತಿದ್ದುಪಡಿಗಳು, ಐತಿಹಾಸಿಕ ತೀರ್ಪುಗಳು ಮುಂತಾದವುಗಳ ಬಗ್ಗೆ ಅರಿತುಕೊಂಡಿರಬೇಕು. ಆಗಲೇ ಯಾವುದೇ ಪ್ರಕರಣವನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ ಎಂದರು.

ಒಳ್ಳೆಯ ಸೇವೆ ಒದಗಿಸಬೇಕು: ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ. ಜಿ. ವಿಶಾಲಾಕ್ಷಿ ಮಾತನಾಡಿ, ದೇಶದ ಕಟ್ಟಕಡೆಯ ನಾಗರಿಕನಿಗೂ ನ್ಯಾಯ ಸಿಗಬೇಕು ಎಂದು ನಮ್ಮ ಸರ್ವೋತ್ಛ ನ್ಯಾಯಾಲಯ ಪ್ರತಿಪಾದಿಸುತ್ತದೆ. ಅದರಂತೆ ವಕೀಲರು ತಮ್ಮ ಜ್ಞಾನವನ್ನು ಸಾಮಾನ್ಯರಿಗೆ ಉಪಯೋಗವಾಗುವ ರೀತಿಯಲ್ಲಿ ಬಳಸಬೇಕು. ತನ್ಮೂಲಕ ಸಾಮಾನ್ಯರಿಗೂ ಒಳ್ಳೆಯ ಸೇವೆ ಒದಗಿಸಬೇಕು ಎಂದು ಹೇಳಿದರು.

ಸಾಮಾನ್ಯರ ನೆರವಿಗೆ ನಿಲ್ಲಬೇಕು: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌, ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಬಗೆಗೆ ಅರಿವಿರಬೇಕಾಗುತ್ತದೆ. ಕೇವಲ ಹಕ್ಕುಗಳನ್ನಷ್ಟೇ ಕೇಳದೇ ನಾವು ಮಾಡಬೇಕಿರುವ ಕರ್ತವ್ಯಗಳನ್ನು ನಿರ್ವಹಿಸಬೇಕು. ಪ್ಯಾನೆಲ್‌ ವಕೀಲರು ಈ ಗುಣವನ್ನು ರೂಢಿಸಿಕೊಂಡು ಸಾಮಾನ್ಯರ ನೆರವಿಗೆ ನಿಲ್ಲಬೇಕು ಎಂದು ತಿಳಿಸಿದರು.

ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಮತ್ತು ಪ್ರಥಮ ನ್ಯಾಯಿಕ ದಂಡಾಧಿಕಾರಿ ಸ್ಮಿತಾ, ಬೆಂಗಳೂರಿನ ವಕೀಲೆ ಮತ್ತು ವಿಶೇಷ ತರಬೇತುದಾರರಾದ ರಮಾ, ಜಿಲ್ಲಾ ಸರ್ಕಾರಿ ವಕೀಲ‌ ಎಚ್‌. ಎನ್‌ ಲೋಕೇಶ್‌, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್‌. ಮಂಜು ಹರವೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.