ಚಾಮರಾಜನಗರ ಜಿಲ್ಲೆಯ ಷಡಕ್ಷರಸ್ವಾಮಿ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪುರಸ್ಕಾರಕ್ಕೆ ಆಯ್ಕೆ
Team Udayavani, Sep 4, 2021, 8:59 PM IST
ಚಾಮರಾಜನಗರ: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 2021-22ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪುರಸ್ಕಾರಕ್ಕೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಜಿ. ಷಡಕ್ಷರಸ್ವಾಮಿ ಆಯ್ಕೆಯಾಗಿದ್ದಾರೆ.
ಸೆ. 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಒಟ್ಟು 10 ಮಂದಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಪುರಸ್ಕರಿಸಲಾಗುತ್ತಿದ್ದು, ಜಿಲ್ಲೆಯ ಷಡಕ್ಷರಸ್ವಾಮಿ ಅವರನ್ನೂ ಪ.ಪೂ. ಶಿಕ್ಷಣ ಇಲಾಖೆಯಿಂದ ಆಯ್ಕೆ ಮಾಡಲಾಗಿದೆ.