Shakti Scheme: ಕೋಟಿ ವನಿತೆಯರಿಂದ ಉಚಿತ ಪ್ರಯಾಣ!
Team Udayavani, Aug 26, 2023, 3:19 PM IST
ಚಾಮರಾಜನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಚಾಮರಾಜನಗರ ವಿಭಾಗದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 1 ಕೋಟಿಯ ಮೈಲುಗಲ್ಲು ದಾಟಿದೆ!
ಶಕ್ತಿ ಯೋಜನೆ ಆರಂಭವಾದ ಜೂ.11ರಿಂದ ಇದುವರೆಗೆ ಜಿಲ್ಲೆಯಲ್ಲಿ 1,05,76,930 ಮಹಿಳೆಯರು ಉಚಿತ ಪ್ರಯಾಣದ ಟಿಕೆಟ್ಗಳನ್ನು ಪಡೆದಿದ್ದಾರೆ! ರಾಜ್ಯ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲಿಗೆ ಅನುಷ್ಠಾನಗೊಂಡಿತು. ಆರಂಭದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಉದ್ಯೋಗಕ್ಕಾಗಿ ದೂರದ ನಗರ, ಪಟ್ಟಣಗಳಿಗೆ ತೆರಳುವ ಮಹಿಳೆಯರಿಗೆ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಯೋಜನೆಯಿಂದ ಅನುಕೂಲವಾಗಿದೆ.
ಹೆಣ್ಣು ಮಕ್ಕಳು ಉದ್ಯೋಗಕ್ಕೆ, ಪ್ರವಾಸಿ ತಾಣ, ದೇವಾಲಯ, ಶಾಲಾ ಕಾಲೇಜು ಮತ್ತಿತರ ಕಾರ್ಯಗಳಿಗೆ ಹೋಗಿ ಬರಲು ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದರಿಂದ ಸಾಕಷ್ಟು ಅನುಕೂಲವಾಗಿದೆ.
1.05 ಕೋಟಿಗೇರಿದ ಫ್ರೀ ಟಿಕೆಟ್: ಜೂ.11ರಂದು ಶಕ್ತಿ ಯೋಜನೆ ಚಾಮರಾಜನಗರ ಜಿಲ್ಲೆಯಲ್ಲೂ ಆರಂಭಗೊಂಡಿತು. ಜೂನ್ ಅಂತ್ಯದವರೆಗೆ ಒಟ್ಟಾರೆ 41,93,946 ಪ್ರಯಾಣಿಕರು ನಿಗಮದ ಬಸ್ಗಳಲ್ಲಿ ಸಂಚರಿಸಿದ್ದಾರೆ. ಈ ಪೈಕಿ 24,10,918 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಮಾಣ ಶೇ.57.49ರಷ್ಟಿದೆ. ಜುಲೈ ತಿಂಗಳಿನಲ್ಲಿ ಒಟ್ಟು 79,05,964 ಪ್ರಯಾಣಿಕರು ಸಂಚರಿಸಿದ್ದಾರೆ. ಈ ಪೈಕಿ 54,76,569 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಮಾಣ ಶೇ.69.27ರಷ್ಟಿದೆ. ಆಗಸ್ಟ್ ತಿಂಗಳ 17ರವರೆಗೆ ಒಟ್ಟು 42,44,889 ಪ್ರಯಾಣಿಕರು ಸಂಚರಿಸಿದ್ದಾರೆ. ಈ ಪೈಕಿ 26,89,443 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಮಾಣ ಶೇ.63.36ರಷ್ಟಿದೆ.
ಒಟ್ಟಾರೆ ಯೋಜನೆ ಆರಂಭಗೊಂಡ ದಿನದಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 1,63,44,799 ಪ್ರಯಾಣಿಕರು ನಿಗಮದ ಬಸ್ಗಳಲ್ಲಿ ಸಂಚರಿಸಿದ್ದು, ಇವರಲ್ಲಿ 1,05,76,930 ಮಹಿಳಾ ಪ್ರಯಾಣಿಕರು ಇದ್ದು ಶೇ.64.71 ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದು, ಯೋಜನೆ ಸೌಲಭ್ಯ ಪಡೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ 507 ಬಸ್: ಚಾಮರಾಜನಗರ ವಿಭಾಗವು ಒಟ್ಟು 4 ಕೆಎಸ್ಆರ್ಟಿಸಿ ಘಟಕಗಳನ್ನು ಹೊಂದಿದ್ದು, 507 ಬಸ್ ಹೊಂದಿದೆ. ಮಹಿಳಾ ಸಬಲೀಕರಣದ ಭಾಗವಾಗಿ ಶಕ್ತಿ ಯೋಜನೆ ಯಶಸ್ವಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿನಿಯರು ನಗರಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆಯಲ್ಲಿ ಅವಕಾಶವಾಗಿದೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಕೆಲಸ ಕಾರ್ಯದ ನಿಮಿತ್ತ ಜಿಲ್ಲಾ, ತಾಲೂಕು ಕೇಂದ್ರಕ್ಕೆ ಹೋಗಿ ಬರಲು ಭರಿಸುತ್ತಿದ್ದ ಪ್ರಯಾಣದ ಖರ್ಚು ಉಳಿತಾಯವಾಗುತ್ತಿದೆ. ಬಡ ಕುಟುಂಬದ ನಮಗೆ ಬಸ್ ಚಾರ್ಜ್ಗೆ ಖರ್ಚಾಗುತ್ತಿದ್ದ ಹಣ ಅಗತ್ಯ ವಸ್ತುಗಳ ಖರೀದಿಗೆ ಬಳಸಲು ಸಹಾಯಕವಾಗಿದೆ.-ನಾಗಮ್ಮ, ಭೀಮನಬೀಡು, ಗುಂಡ್ಲುಪೇಟೆ ತಾಲೂಕು.
ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿದೆ. ವಾರಾಂತ್ಯದ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಬಸ್ಗಳನ್ನು ನಿಯೋಜಿಸಲಾಗುತ್ತಿದೆ. ಅಗತ್ಯಕ್ಕೆ ತಕ್ಕಂತೆ ನಿಗಮವು ಬಸ್ಗಳ ಕಾರ್ಯಾಚರಣೆಗೆ ಕ್ರಮ ವಹಿಸುತ್ತಿದೆ.-ಅಶೋಕ್ಕುಮಾರ್, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್ಆರ್ಟಿಸಿ, ಚಾ.ನಗರ ವಿಭಾಗ.
ತಿ.ನರಸೀಪುರ ತಾಲೂಕಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ಉದ್ಯೋಗಕ್ಕಾಗಿ ಬರುತ್ತಿದ್ದೇನೆ. ನನಗೆ ಬರುವ ಸ್ವಲ್ಪ ತಿಂಗಳ ವೇತನದಲ್ಲಿ ಬಸ್ ದರಕ್ಕೆ ಶೇ.25 ಖರ್ಚು ಆಗುತ್ತಿತ್ತು. ಉಚಿತ ಪ್ರಯಾಣದಿಂದ ನನಗೆ ಹಣ ಉಳಿತಾಯ ಆಗಿದೆ. ಇನ್ನಿತರ ಖರ್ಚು ಸರಿದೂಗಿಸಿಕೊಳ್ಳಲು ಅನುಕೂಲವಾಗಿದೆ.-ಪದ್ಮಾ, ಖಾಸಗಿ ಸಂಸ್ಥೆ ಉದ್ಯೋಗಿ. ಚಾ.ನಗರ.
– ಕೆ.ಎಸ್.ಬನಶಂಕರ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್