ಸಾಲೂರು ಮಠದ ಉತ್ತಾರಾಧಿಕಾರಿಯಾಗಿ ಶಾಂತಮಲ್ಲಿಕಾರ್ಜುನಸ್ವಾಮಿ ಪಟ್ಟಾಭಿಷೇಕ
Team Udayavani, Aug 8, 2020, 6:02 PM IST
ಹನೂರು (ಚಾಮರಾಜನಗರ): ಸಾಲೂರು ಮಠಕ್ಕೆ ಶತಮಾನಗಳ ಶ್ರೀ ಪರಂಪರೆಯಿದ್ದು ಹೆಚ್ಚು ಸಾಮಾಜಿಕ ಸೇವೆಗಳನ್ನು ಕೈಗೊಳ್ಳುವ ಮೂಲಕ ಮಠದ ಏಳ್ಗೆಗೆ ಒತ್ತು ನೀಡಬೇಕು ಎಂದು ಸುತ್ತೂರು ವೀಸಿಂಹಾಸನ ಮಹಾಸಂಸ್ಥಾನಮಠದ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಉತ್ತರಾಧಿಕಾರಿಯಾಗಿ ಆಯ್ಕೆಯಾದ ವಟು ನಾಗೇಂದ್ರ ಅವರಿಗೆ ಪಟ್ಟಾಭೀಷೇಕ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಸುತ್ತೂರು ಶ್ರೀಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ನಾನಾಕಡೆಯಿಂದ ಭಕ್ತರು ಆಗಮಿಸುತ್ತಾರೆ. ಇಲ್ಲಿಗೆ ಆಗಮಿಸುವ ಭಕ್ತರಿಗೂ ಸಾಲೂರು ಬೃಹನ್ಮಠಕ್ಕೂ ಅವಿನಾಭಾವ ಸಂಬಂಧವಿದ್ದು ಐತಿಹಾಸಿಕ ಹಿನ್ನೆಲೆಯಿದೆ. ಅಲ್ಲದೆ ಶ್ರೀ ಕ್ಷೇತ್ರದಲ್ಲಿ ಜರುಗುವ ವಿವಿಧ ಪೂಜಾ ಕೈಂಕರ್ಯಗಳಲ್ಲಿ ಮಠದ ರ್ಶರೀಗಳು ಭಾಗವಹಿಸುವುದು ಹಿರಿಮೆಯಾಗಿದೆ. ಆದುದರಿಂದ ಮಠದ ಸಂಪ್ರದಾಯದ ಜೊತೆಗೆ ಹೆಚ್ಚಿನ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಠದ ಕೀರ್ತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.
ಸಾಲೂರು ಮಠದಲ್ಲಿ ಪಟ್ಟದ ಗುರುಸ್ವಾಮಿಗಳಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದ ಹಿನ್ನೆಲೆ ಮಠದ ಭಕ್ತರು ತಮ್ಮ ಬಳಿ ಬಂದು ಉತ್ತರಾಧಿಕಾರಿ ಆಯ್ಕೆ ಮಾಡಿಕೊಡುವಂತೆ ಮನವಿ ಮಾಡಿದರು. ಈ ಹಿನ್ನೆಲೆ 9 ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿತ್ತು. ಈ ಸಮಿತಿಯು ಉತ್ತರಾಧಿಕಾರಿ ಸ್ಥಾನಕ್ಕೆ ವಟು ನಾಗೇಂದ್ರ ಅವರೇ ಸೂಕ್ತ ಎಂದು ಅಂತಿಮ ವರದಿ ನೀಡಿದ ಹಿನ್ನೆಲೆ ಪಟ್ಟಾಭಿಷೇಕ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ನರೇಂದ್ರ ಮಾತನಾಡಿ ಸಾಲೂರು ಮಠದ ಪಟ್ಟದ ಗುರುಸ್ವಾಮಿಗಳ ಆರೋಗ್ಯ ಕ್ಷೀಣಿಸಿದ್ದ ಹಿನ್ನೆಲೆ ಮಠದ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮಂಕು ಕವಿದಂತಾಗಿತ್ತು. ಇದೀಗ ಉತ್ತರಾಧಿಕಾರಿ ಆಯ್ಕೆಯಾಗಿರುವುದರಿಂದ ಆ ಮಂಕು ಸರಿದಂತಾಗಿದೆ. ಮುಂದಿನ ದಿನಗಳಲ್ಲಿ ಮಠದ ಶೈಕ್ಷಣಿಕ ಸಂಸ್ಥೆ ವತಿಯಿಂದ ಮಹದೇಶ್ವರ ಬೆಟ್ಟ ಸುತ್ತಮುತ್ತಲ 26 ಹಳ್ಳಿಗಳ ಮಕ್ಕಳಿಗೆ ಉತ್ತಮ ವಿದ್ಯಾದಾನ ನೀಡಬೇಕು. ಈ ಮೂಲಕ ಮಠವನ್ನು ಇನ್ನೂ ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಸಿದ್ಧಗಂಗಾ ಕ್ಷೇತ್ರದ ಸಿದ್ದಲಿಂಗ ಮಹಾಸ್ವಾಮಿಗಳು, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಮಾತನಾಡಿದರು.
ಈ ಸಂದರ್ಭದಲ್ಲಿ ಗುಂಡ್ಲುಪೇಡೆ ಶಾಸಕ ನಿರಂಜನ್ಕುಮಾರ್, ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಪಟ್ಟದ ಗುರುಸ್ವಾಮಿಗಳು, ಉತ್ತರಾಧಿಕಾರಿ ಆಯ್ಕೆ ಸಮಿತಿ ಅಧ್ಯಕ್ಷ ಶಾಗ್ಯ ರವಿ, ನಿರ್ದೇಶಕ ತೋಟೇಶ್ ಪದಾಧಿಕಾರಿಗಳು, ವಿವಿಧ ಮಠಗಳ ಮಠಾಧೀಶರು ಮತ್ತು ಭಕ್ತ ಸಮೂಹ ಭಾಗವಹಿಸಿದ್ದರು.
ಪಟ್ಟಾಭಿಷೇಕ ಕಾರ್ಯಕ್ರಮ: ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆ ಶನಿವಾರ ಬೆಳ್ಳಂ ಬೆಳಗ್ಗೆಯೇ ಬ್ರಾಹ್ಮಿ ಮುಹೂರ್ತದಲ್ಲಿ ಪೂಜಾ ಕೈಂಕರ್ಯಗಳನ್ನು ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಬೆಳಗ್ಗೆಯೇ ಪಂಚಕಳಸ ಪೂಜೆ, ಶ್ರೀಕರ್ತೃ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮಾವಳಿಗಳು ಜರುಗಿದವು. ಈ ವೇಳೆ ವಟು ನಾಗೇಂದ್ರ ಅವರು ನಾಡಿನ 3 ಮಠಗಳಾದ ಸುತ್ತೂರು ಶ್ರೀ, ಸಿದ್ಧಗಂಗಾ ಶ್ರೀ ಮತ್ತು ಕನಕಪುರದ ದೇಗುಲ ಮಠದ ಶ್ರೀಗಳಿಗೆ ಪೂಜೆ ನೆರವೇರಿಸಿದರು. ಬಳಿಕ ಸಾಂಪ್ರದಾಯಿಕವಾಗಿ ದೀಕ್ಷೆ ನೀಡಿ ಶಾಂತಮಲ್ಲಿಕಾರ್ಜುನಸ್ವಾಮಿ ಎಂದು ನಾಮಕರಣ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ