Hanur: ಚಿರತೆ ದಾಳಿಗೆ ಕುರಿಗಳು ಬಲಿ; ಸಾವಿರಾರು ರೂ. ನಷ್ಟ
Team Udayavani, Feb 27, 2024, 10:24 AM IST
ಹನೂರು (ಚಾಮರಾಜನಗರ): ಚಿರತೆ ದಾಳಿಗೆ 4 ಕುರಿಗಳು ಬಲಿಯಾಗಿರುವ ಘಟನೆ ಪೆ. 26ರ ಸೋಮವಾರ ತಡರಾತ್ರಿ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಈ ಕುರಿಗಳು ಗ್ರಾಮದ ಪಾಸ್ಕ ಮೇರಿ ಎಂಬುವರಿಗೆ ಸೇರಿವೆ.
ಪಾಸ್ಕ ಮೇರಿ ಎಂಬ ರೈತ ಮಹಿಳೆ ಜೀವನಕ್ಕಾಗಿ 4 ಕುರಿಗಳನ್ನು ಸಾಕುತ್ತಿದ್ದರು. ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಸೋಮವಾರ ತಡರಾತ್ರಿ ಚಿರತೆ ದಾಳಿ ನಡೆಸಿ 4 ಕುರಿಗಳನ್ನು ಬಲಿ ಪಡೆದುಕೊಂಡಿದೆ.
ಇದರಿಂದ ಸಾವಿರಾರು ರೂ. ನಷ್ಟವಾಗಿದ್ದು, ರೈತನಿಗೆ ತುಂಬಲಾರದ ನಷ್ಟ ಉಂಟಾಗಿದ್ದು, ಪರಿಹಾರ ನೀಡಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.
ಜೀವನಕ್ಕೆ ಆಧಾರವಾಗಿದ್ದ ಕುರಿ: ತಾನು ಈ ಮೊದಲೇ ವಿಕಲಚೇತನ ಮಹಿಳೆಯಾಗಿದ್ದು, ಜೀವನಕ್ಕಾಗಿ 4 ಕುರಿಗಳನ್ನು ಸಾಕುತ್ತಿದ್ದೆ. ಕುರಿಗಳನ್ನು ಕಳೆದುಕೊಂಡ ಕಾರಣ ಜೀವನ ನಡೆಸಲು ಕಷ್ಟವಾಗಿದೆ ಎಂದು ಮೇರಿ ಅಳಲು ತೋಡಿಕೊಂಡರು.
ಚಿರತೆ ಸೆರೆಗೆ ಆಗ್ರಹ: ಈ ಭಾಗದಲ್ಲಿ ಇದು ಎರಡನೇ ಬಾರಿ ದಾಳಿಯಾಗಿದ್ದು, ಜನರು ಭಯಭೀತರಾಗಿದ್ದಾರೆ ಇದರಿಂದ ಆದಷ್ಟು ಬೇಗ ಚಿರತೆ ಸೆರೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ