ಭಾರತ ರತ್ನಕ್ಕಿಂತ ಜನರು ನೀಡಿದ ವಿಶ್ವರತ್ನ ಪ್ರಶಸ್ತಿ ಶ್ರೇಷ್ಠ: ಸ್ವಾಮೀಜಿ


Team Udayavani, Apr 2, 2022, 12:45 PM IST

ಭಾರತ ರತ್ನಕ್ಕಿಂತ ಜನರು ನೀಡಿದ ವಿಶ್ವರತ್ನ ಪ್ರಶಸ್ತಿ ಶ್ರೇಷ್ಠ: ಸ್ವಾಮೀಜಿ

ಕೊಳ್ಳೇಗಾಲ: ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರಸ್ವಾಮಿ ಅವರಿಗೆ ಭಾರತ ರತ್ನ ನೀಡುವುದಕ್ಕಿಂತ ಜನರು ನೀಡಿರುವ ವಿಶ್ವರತ್ನ ಪ್ರಶಸ್ತಿ ಶೇಷ್ಠ ಎಂದು ವಾಟಾಳು ಸೂರ್ಯಸಿಂಹಾಸನ ಮಠದ ಡಾ.ಸಿದ್ದಲಿಂಗಶಿವಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಲಿಂಗೈಕ್ಯ ಡಾ.ಶಿವಕುಮಾರಸ್ವಾಮಿ ಅವರ 115ನೇ ಜಯಂತ್ಯುತ್ಸವ ಅಂಗವಾಗಿ ಏರ್ಪಡಿಸಿದ್ದ ಗುರುವಂದನಾ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾಯಕವನ್ನು ನಂಬಿ ಬಾಲ್ಯದಿಂದಲೂ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಅವರ ಕಾರ್ಯವೈಖರಿ ಕಂಡು ಮಠಾಧ್ಯಕ್ಷರನ್ನಾಗಿ ಸಣ್ಣ ವಯಸ್ಸಿನಲ್ಲೇ ಆಯ್ಕೆಗೊಂಡ ಮಹಾಸ್ವಾಮೀಜಿ ಎಂದು ಲಿಂಗೈಕ್ಯ ಡಾ.ಶಿವಕುಮಾರಸ್ವಾಮಿ ಅವರ ಸ್ಮರಣೆ ಮಾಡಿದರು. ಜಯಂತ್ಯುತ್ಸವ ಸಾರ್ಥಕ: ಶಾಸಕ ಎನ್‌. ಮಹೇಶ್‌ ಮಾತನಾಡಿ, ಅನ್ನ ಮತ್ತು ಅಕ್ಷರ ದಾಸೋಹ ಮಾಡಿದ ಸ್ವಾಮೀಜಿಯ ಹೆಸರಿನಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿರುವುದು ಅರ್ಥಪೂರ್ಣ. ಪ್ರತಿ ಯೊಬ್ಬರು ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆದಾಗ ಮಾತ್ರ 115ನೇ ಜಯಂತ್ಯುತ್ಸವ ಸಾರ್ಥಕವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಹಸಿವು ಮುಕ್ತ ಮಾಡಿದ ಮಹಾದಾಸೋಹಿ: ಡಾ.ಶಿವಕುಮಾರ ಸ್ವಾಮಿ ಅವರ ಭಾವಚಿತ್ರವನ್ನು ಅನಾವರಣ ಮಾಡಿದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಮಾತನಾಡಿ, ದಾಸೋಹಕ್ಕಾಗಿ ಶಿವಕುಮಾರಸ್ವಾಮಿ ಅವರು ಭಿಕ್ಷಾಟನೆ ಮಾಡಿ ತಂದ ಆಹಾರ ಧಾನ್ಯದಲ್ಲಿ ಮಠಕ್ಕೆ ಬಂದ ಎಲ್ಲಾ ಅತಿಥಿಗಳಿಗೆ ಉಣಬಡಿಸಿ, ಹಸಿವು ಮುಕ್ತ ಮಾಡಿದ ಮಹಾದಾಸೋಹಿ ಎಂದು ವರ್ಣನೆ ಮಾಡಿದರು.

ನಿಜವಾದ ಪವಾಡ ಪುರುಷ: ಜನರು ಪವಾಡ ಪುರುಷರನ್ನು ಕಂಡಿಲ್ಲ. ಆದರೆ, ಸಿದ್ಧಗಂಗಾ ಶ್ರೀಗಳ ಶ್ರಮದ ಫ‌ಲವಾಗಿ ಮಠದಲ್ಲಿ ನೀಡುತ್ತಿದ್ದ ದಾಸೋಹದಿಂದ ನಿಜವಾದ ಪವಾಡ ಪುರುಷನನ್ನು ಪ್ರತಿ ಯೊಬ್ಬರು ಶಿವಕುಮಾರಸ್ವಾಮಿ ಅವರಿಂದ ಕಂಡಂತೆ ಆಗಿದೆ ಎಂದು ಹೇಳಿದರು.

ಎಸ್ಪಿ ಶಿವಕುಮಾರ್‌ ಮಾತನಾಡಿ, ಡಾ.ಶಿವಕುಮಾರಸ್ವಾಮಿ ಅವರ 115ನೇ ಜಯಂತಿ ಅಂಗವಾಗಿ 115 ಜನರು ರಕ್ತದಾನ ಮಾಡಿ ಜೀವ ಉಳಿಸುವ ಕೆಲಸ ಮಾಡುತ್ತಿದ್ದು, ಇದೊಂದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು ಎಂದು ಹೇಳಿದರು.

ಲಿಂಗೈಕ್ಯ ಡಾ.ಶಿವಕುಮಾರಸ್ವಾಮಿ ಜಯಂತಿ ಅಂಗವಾಗಿ ವೀರಶೈವ ಲಿಂಗಾಯಿತ ಪ್ರಗತಿಪರ ಸಂಘಟನೆ ಮುಖಂಡರು ಪಾನಕ, ಮಜ್ಜಿಗೆ, ಮೊಸರನ್ನ, ರೈಸ್‌ ಬಾತ್‌, ಹೆಸರು ಬೇಳೆ ವಿತರಣೆ ಮಾಡಿದರು.

ಮಹಾಸಭಾ ಜಿಲ್ಲಾಧ್ಯಕ್ಷ ನಂದೀಶ್‌ ಮೂಡ್ಲೂಪುರ, ತಾಲೂಕು ಅಧ್ಯಕ್ಷ ಮಹದೇವ ಪ್ರಸಾದ್‌, ಮಹಿಳಾ ಘಟಕದ ಅಧ್ಯಕ್ಷೆ ಜಗದಾಂಬ ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.