ರಜೆಗೆ ಊರಿಗೆ ಬಂದಿದ್ದ ಯೋಧ ಸಾವು
Team Udayavani, Nov 29, 2022, 2:36 PM IST
ಕೊಳ್ಳೇಗಾಲ: ಕುಟುಂಬಸ್ಥರನ್ನು ನೋಡುವ ಸಲುವಾಗಿ ಯೋಧನೋರ್ವ ರಜೆಯ ಮೇಲೆ ಬಂದು ಮನೆ ಮುಂಭಾಗ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೆ.ಸುಬ್ರಮಣ್ಯ (44) ಮೃತ ಯೋಧ.
ಮೃತ ಪಶ್ಚಿಮಬಂಗಾಳದ ಬಿಎಸ್ಎಫ್ ಮುಖ್ಯ ಪೇದೆ ಕಳೆದ 23 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕುಟುಂಬಸ್ಥರನ್ನು ನೋಡಲು 2 ವಾರ ರಜೆಯ ಮೇಲೆ ಬಂದಿದ್ದರು. 24ರಂದು ಮನೆಯ ಮುಂದೆಯ ರಸ್ತೆಯ ಮೇಲೆ ಕಾಲುಜಾರಿ ಆಯತಪ್ಪಿ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಬಳಿಕ ನಗರದ ಜನನಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
ಕುಟುಂಬಸ್ಥರು ನಗರ ಠಾಣೆಗೆ ದೂರು ಸಲ್ಲಿಸಿದ ಹಿನ್ನೆಲೆ ಪ್ರಕರಣ ದಾಖಲಿಸಿದ ಎಸ್ಐ ಚೇತನ್ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ರಾಜು ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ನೀಡಿದರು. ಪೊಲೀಸರು ಮೃತರ ನಿವಾಸಕ್ಕೆ ತೆರಳಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು. ಎಸ್ಐ ಚೇತನ್, ಶಿರಸ್ತೇದಾರ್ ಶ್ರೀನಿವಾಸ್, ರಾಜಸ್ವ ನಿರೀಕ್ಷಕ ನಿರಂಜನ್, ಪೊಲೀಸ್ ಸಿಬ್ಬಂದಿ ಇದ್ದರು.
ನಮ್ಮ ಸಂವಿಧಾನ ವಿಶ್ವಕ್ಕೆ ಮಾದರಿ: ನ್ಯಾಯಾಧೀಶೆ ಭಾರತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ