ಶೀಘ್ರದಲ್ಲೇ ಬಸ್‌ನಿಲ್ದಾಣ ಕಾಮಗಾರಿ ಪೂರ್ಣ

ನಿಲ್ದಾಣದ ಮೊದಲನೆ ಅಂತಸ್ತು ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣ: ವಿನೋದ್‌ಕುಮಾರ್‌

Team Udayavani, Jul 5, 2019, 10:00 AM IST

cn-tdy-1..

ಪಟ್ಟಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಯಿಂದ ನಿರ್ಮಾಣವಾಗುತ್ತಿರುವ ಮೊದಲನೇ ಅಂತಸ್ತಿನ ಬಸ್‌ನಿಲ್ದಾಣದ ಕಟ್ಟಡ.

ಕೊಳ್ಳೇಗಾಲ: ರಸ್ತೆ ಸಾರಿಗೆ ಇಲಾಖೆಗೆ ಎಲ್ಲಾ ತಾಲೂಕುಗಳಲ್ಲಿ ಸುಸರ್ಜಿತ ಬಸ್‌ ನಿಲ್ದಾಣ ನಿರ್ಮಿಸಿ ಪ್ರಯಾಣಿಕ‌ರಿಗೆ ಸೌಕರ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಟ್ಟಣದ ಬಸ್‌ ನಿಲ್ದಾಣ ನಿರ್ಮಾಣದ ಕಾಮಗಾರಿ ಬರದಿಂದ ಸಾಗುತ್ತಿದ್ದು, ಮೊದಲನೇ ಅಂತಸ್ತಿನ ಕಾಮಗಾರಿ ಪೂರ್ಣಗೊಂಡಿದೆ.

ರಾಜ್ಯದಲ್ಲಿ ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಟ್ಟಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಬಸ್‌ ನಿಲ್ದಾಣ ನಿರ್ಮಾಣಕ್ಕೆ 22 ಕೋಟಿ ರೂ. ಅಂದಾಜಿನ‌ಲ್ಲಿ 3 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಿಸುವಲ್ಲಿ ಕ್ಷೇತ್ರದ ಶಾಸಕ ಎಸ್‌.ಜಯಣ್ಣ ಮುಂದಾಗಿದ್ದನ್ನು ಸ್ಮರಿಸಬಹುದು.

ವಿಭಜನೆ: ತಾಲೂಕು ಕೇಂದ್ರದಲ್ಲಿ ಎರಡು ವಿಧಾನಸಭಾ ಕ್ಷೇತ್ರ ಹೊಂದಿರುವ ಕೊಳ್ಳೇಗಾಲ ಅತ್ಯಂತ ದೊಡ್ಡ ತಾಲೂಕಾಗಿದ್ದು, ಸರ್ಕಾರ ಹನೂರನ್ನು ಬೇರ್ಪಡಿಸಿ ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಮಾಡುವ ಮೂಲಕ ರಾಜ್ಯದಲ್ಲೇ ಬೃಹತ್‌ ತಾಲೂಕು ಕೇಂದ್ರವಾಗಿದ್ದನ್ನು ಎರಡು ತಾಲೂಕು ಕೇಂದ್ರವನ್ನಾಗಿ ಮಾಡಿ ಜನರಿಗೆ ಮತ್ತಷ್ಟು ಸೇವಾ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸರ್ಕಾರ ಮುಂದಾಗಿದೆ.

ಪ್ರಸಿದ್ಧ ದೇವಾಲಯ: ತಾಲೂಕು ಕೇಂದ್ರದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ ಮತ್ತು ಅಂತಾರಾಜ್ಯದಿಂದ ಲಕ್ಷಾಂತರ ಭಕ್ತರು ಆಗಮಿಸಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಹಾಗೂ ಅಪಾರ ಆದಾಯ ತಂದುಕೊಡುವ ದೇವಾಲಯ ಮತ್ತು ತಾಲೂಕಿನ ಶಿವನಸಮುದ್ರದ ಸಮೂಹ ದೇವಾಲಯ ಮತ್ತು ಗಗನಚುಕ್ಕಿ, ಭರಚುಕ್ಕಿ ಜಲಪಾತ, ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಾಲಯ, ಕುರುಬನಕಟ್ಟೆಯ ಚೆನ್ನಯ್ಯ, ಲಿಂಗಯ್ಯ ಗದ್ದುಗೆ ಸೇರಿದಂತೆ ಅನೇಕ ಪವಾಡ ಪುರುಷರ ನೆಲೆಬೀಡಿನ ದೇವಾಲಯಗಳು ಖ್ಯಾತಿ ಪಡೆದಿದೆ.

ವ್ಯಾಪಾರ ಕೇಂದ್ರ: ಪವಾಡ ಪುರುಷರು ನೆಲೆಸಿರುವ ಸ್ಥಳಗಳಿಗೆ ಭಕ್ತಾದಿಗಳು ಮತ್ತು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ವೀಕ್ಷಣೆ ಮಾಡಿ ರೇಷ್ಮೆನಗರಿ ಎಂದು ಖ್ಯಾತಿ ಪಡೆದಿರುವ ಕೊಳ್ಳೇಗಾಲದಲ್ಲಿ ರೇಷ್ಮೆ ಸೀರೆ ಮತ್ತು ಬಟ್ಟೆಗಳನ್ನು ಖರೀದಿಸಿ ವ್ಯಾಪಾರ ಕೇಂದ್ರವಾಗಿ ಹೆಸರುವಾಸಿಯಾಗಿತ್ತು.

ಬರದ ಸಿದ್ಧತೆ: ದೇವಾಲಯ ಮತ್ತು ಪ್ರವಾಸಿ ತಾಣಗಳ ಬಿಡಾಗಿರುವ ತಾಲೂಕು ಕೇಂದ್ರದಲ್ಲಿ ರಸ್ತೆ ಸಾರಿಗೆ ಇಲಾಖೆ ಬಸ್‌ ನಿಲ್ದಾಣ ನಿರ್ಮಾಣ ಮಾಡಿ ಪ್ರಯಾಣಿಕರಿಗೆ ಮತ್ತಷ್ಟು ಸೌಕರ್ಯಗಳನ್ನು ಕಲ್ಪಿಸಲು ಬಸ್‌ ನಿಲ್ದಾಣದ ಮೊದಲನೇ ಅಂತಸ್ತಿನ ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣಗೊಳ್ಳಲು ಕಾಮಗಾರಿ ಬರದ ಸಿದ್ಧತೆ ಕಾರ್ಯ ನಡೆಯುತ್ತಿದೆ.

ತಾತ್ಕಾಲಿಕ ಬಸ್‌ ನಿಲ್ದಾಣ: ಪಟ್ಟಣದ ಬಸ್‌ ನಿಲ್ದಾಣದ ಕಾಮಗಾರಿ ಆರಂಭಗೊಂಡ ಬಳಿಕ ಪ್ರಯಾಣಿಕರಿಗೆ ಬೇರೆಡೆಗೆ ತೆರಳಲು ಅವಕಾಶ ಕಲ್ಪಿಸುವ ಸಲುವಾಗಿ ನಗರಸಭಾ ವತಿಯಿಂದ ಹೊಸ ಅಣಗಳ್ಳಿ ಬಡಾವಣೆಯ ಸಮೀಪ ಇರುವ ಖಾಸಗಿ ಜಮೀನೊಂದರಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣ ನಿರ್ಮಿಸಿದ್ದು, ನಿಲ್ದಾಣದಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದಾಗಿ ಅದನ್ನು ನಿವಾರಣೆ ಮಾಡಲು ಪ್ರಥಮ ಅಂತಸ್ತು ನಿಲ್ದಾಣವನ್ನು ಪ್ರಯಾಣಿಕ ರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿ ಗಳು ಪ್ರಯತ್ನಿಸುತ್ತಿದ್ದಾರೆ.

ಮೊದಲನೆ ಅಂತಸ್ತು: ನಿಲ್ದಾಣದ ಮೊದಲನೆ ಅಂತಸ್ತು ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಕಾಮಗಾರಿಯನ್ನು ಚುರುಕುಗೊಳಿಸಿದ್ದು, ಶೀಘ್ರದಲ್ಲಿ ಸಿದ್ಧವಾಗಲಿದೆ ಎಂದು ಅಪೂರ್ವ ಕನ್ಸ್‌ಸ್ಟ್ರಕ್ಷನ್‌ ಪ್ರಾಜೆಕ್ಟ್ ವ್ಯವಸ್ಥಾಪಕ ವಿನೋದ್‌ ಕುಮಾರ್‌ ಉದಯವಾಣಿಗೆ ತಿಳಿಸಿದ್ದಾರೆ.

 

● ಡಿ.ನಟರಾಜು

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.