ಹಿಮವದ್‌ ಗೋಪಾಲಸ್ವಾಮಿಗೆ ವಿಶೇಷ ಪೂಜೆ


Team Udayavani, Aug 26, 2019, 2:16 PM IST

cn-tdy-2

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಕಡೆಯ ಶ್ರಾವಣ ಶನಿವಾರದ ಅಂಗವಾಗಿ ಶನಿದೇವರ ಹೂವಿನ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ಗುಂಡ್ಲುಪೇಟೆ: ಶ್ರಾವಣ ಮಾಸದ ಕಡೆಯ ಶನಿ ವಾರದ ಅಂಗವಾಗಿ ತಾಲೂಕಿನ ವಿವಿಧ ದೇವ ಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬಂದಿತ್ತು.

ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಆರಾ ಧನಾ ಮಹೋತ್ಸವ ನಡೆಯಿತು.

ತಾಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟ ಹಾಗೂ ತೆರಕಣಾಂಬಿ ಸಮೀಪದಲ್ಲಿರುವ ಚಿಕ್ಕ ತಿರುಪತಿ ಎಂದೇ ಖ್ಯಾತಿಯಾಗಿರುವ ಹುಲುಗನಮುರಡಿ ವೆಂಕಟರಮಣಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ವೇಣುಗೋಪಾಲನ ದರ್ಶನಕ್ಕೆ ಭೇಟಿ ನೀಡಿದ್ದರು. ಭಕ್ತರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯು ಪಟ್ಟಣದ ನಿಲ್ದಾಣದಿಂದಲೇ 25 ಬಸ್‌ಗಳನ್ನು ನಿಯೋಜಿ ಸಿತ್ತು. ಅಲ್ಲದೆ ಬೆಟ್ಟದ ತಪ್ಪಲಿನಿಂದಲೂ 4 ಮಿನಿ ಬಸ್‌ಗಳು ಎಂದಿನಂತೆ ಸಂಚಾರಿಸಿದವು.

ಸಾರಿಗೆ ಬಸ್‌ಗಳು ಪಟ್ಟಣದಿಂದ 70 ಟ್ರಿಪ್‌, ಮಿನಿ ಬಸ್‌ಗಳು ತಪ್ಪಲಿನಿಂದ ಬೆಟ್ಟದವರೆಗೆ ಸರಿ ಸುಮಾರು 100 ಟ್ರಿಪ್‌ ಸಂಚರಿಸಿದವು ಎಂದು ಸಾರಿಗೆ ಘಟಕದ ವ್ಯವಸ್ಥಾಪಕ ಎಂ.ಜಿ.ಜಯಕುಮಾರ್‌ ಉದಯವಾಣಿಗೆ ಮಾಹಿತಿ ನೀಡಿದರು.

ಪ್ರವಾಸಿಗರು ಹಾಗೂ ಭಕ್ತರಿಂದ ನೂಕು ನುಗ್ಗಲಾಗದಂತೆ ಸಾರಿಗೆ ಇಲಾಖೆಯು ತಪ್ಪಲಿನಲ್ಲಿಯೇ ಟಿಕೆಟ್ ಕೌಂಟರ್‌ ತೆರೆಯಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸರು ಬಂದೋಬಸ್ತ್ ಆಯೋಜಿಸಿದ್ದರು.

ಹುಲುಗಿನ ಮುರಡಿಯಲ್ಲಿ ಜನ ಜಾತ್ರೆ: ಅಲ್ಲದೆ ತಾಲೂಕಿನ ಹುಲುಗಿನ ಮುರಡಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಕಡೇ ಶ್ರಾವಣ ಶನಿವಾರದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಈ ವಿಶೇಷ ಪೂಜೆಗೆ ನಾಡಿನ ವಿವಿಧೆಡೆಯಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ಹುಲುಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟಕ್ಕೆ 5 ಬಸ್‌ಗಳನ್ನು ನಿಯೋ ಜಿಸಿತ್ತು. ಪಟ್ಟಣದ ಹೊರವಲಯದಲ್ಲಿರುವ ಕೆಬ್ಬೇಕಟ್ಟೆ ಶನೈಶ್ಚರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ಬೆಳಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶನಿದೇವರು, ಮಹದೇಶ್ವರ, ಸಿದ್ದಪ್ಪಾಜಿ ಹಾಗೂ ಹೊಣಕಾರ ಸಿದ್ದೇಶ್ವರರ ಕಂಡಾಯ ಹಾಗೂ ಉತ್ಸವಮೂರ್ತಿಗಳನ್ನು ಸತ್ತಿಗೆ ಸುರಾಪಾನಿ, ನಂದಿಧ್ವಜ ಮಂಗಳವಾದ್ಯಗಳ ಸಮೇತ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ತೆರಕಣಾಂಬಿಯಲ್ಲಿ ಉತ್ಸವ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಆರ್ಯನಯನ ಕ್ಷತ್ರಿಯ ಮಂಡಲಿಯ ವತಿಯಿಂದ 43ನೇ ವರ್ಷದ ಮಹೋತ್ಸವದ ಅಂಗವಾಗಿ ಶ್ರೀ ಶನಿದೇವರ ಹೂವಿನ ಪಲ್ಲಕ್ಕಿ ಉತ್ಸವ ಸಾಂಗವಾಗಿ ನೆರವೇರಿತು. ಶನಿದೇವರ ಭಾವಚಿತ್ರವನ್ನು ಹೂವಿನ ಪಲ್ಲಕ್ಕಿಯಲ್ಲಿ ಇಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.