ಅಶಾಂತಿಯುಂಟು ಮಾಡಿದ್ರೆ ಕಠಿಣ ಕ್ರಮ


Team Udayavani, Aug 24, 2019, 3:00 AM IST

ashantiyannu

ಕೊಳ್ಳೇಗಾಲ: ಹಬ್ಬ ಹರಿದಿನಗಳಲ್ಲಿ ಸಮಾಜಘಾತಕರು ಅಹಿತಕರ ಘಟನೆಗಳನ್ನು ನಡೆಸಿ ಅಶಾಂತಿ ಉಂಟು ಮಾಡುವವರನ್ನು ತಡೆಯಲು ಪೊಲೀಸ್‌ ಇಲಾಖೆ ಸದಾ ನಿಗಾವಹಿಸುತ್ತದೆ ಎಂದು ಡಿವೈಎಸ್ಪಿ ನವೀನ್‌ಕುಮಾರ್‌ ಹೇಳಿದರು.

ಪಟ್ಟಣ ಪೊಲೀಸ್‌ ಠಾಣೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗೌರಿಗಣೇಶ ಹಬ್ಬದ ಪ್ರಯುಕ್ತ ಎಲ್ಲಾ ಕೋಮಿನ ಸಮಾಜದವರು ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಣೆ ಮಾಡುವಂತೆ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.

ಪೊಲೀಸರೊಂದಿಗೆ ಸಹಕರಿಸಿ: ಗೌರಿ-ಗಣೇಶ ವಿಗ್ರಹಗಳನ್ನು ಕೂರಿಸುವ ನೆಪದಲ್ಲಿ ಅಹಿತಕರ ಘಟನೆಗೆ ಅವಕಾಶ ಕಲ್ಪಿಸದಂತೆ ಸ್ಥಳೀಯ ಮುಖಂಡರು ಪೊಲೀಸರೊಂದಿಗೆ ಸಹಕರಿಸಬೇಕು. ಹಬ್ಬ ಆಚರಣೆಯ ಸಂದರ್ಭದಲ್ಲಿ ಪೊಲೀಸ್‌ ಸದಾ ಕಾವಲು ಇರುತ್ತದೆ ಎಂದರು.

ಡಿಜೆ ಅಳವಡಿಸದಂತೆ ಸೂಚನೆ: ಹಬ್ಬದ ದಿನದಂದು ಅತಿಯಾದ ಸೌಂಡ್ಸ್‌ ಬರುವ ಮ್ಯೂಸಿಕ್‌ ಬಾಕ್ಸ್‌ (ಡಿಜೆ)ಗಳನ್ನು ಅಳವಡಿಸಬಾರದು. ಒಂದು ವೇಳೆ ಅಳವಡಿಸಿದ ಪಕ್ಷದಲ್ಲಿ ಅದರ ಶಬ್ದ ಕಡಿಮೆ ನೀಡಿ ಸ್ಥಳೀಯ ವೃದ್ಧರಿಗೆ ಮತ್ತು ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ತರಹದ ಆಡಚಣೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಕಾನೂನು ಪಾಲನೆ ಮಾಡಿ: ಪೊಲೀಸ್‌ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅನೇಕ ಕಾನೂನುಗಳನ್ನು ರೂಪಿಸಿದ್ದು, ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.

ಉತ್ತಮ ರೀತಿ ಹಬ್ಬ ಆಚರಿಸಿ: ಈ ಬಾರಿಯ ಗೌರಿ ಗಣೇಶ ಹಬ್ಬದ ದಿನದಂದು ವಿಗ್ರಹಗಳನ್ನು ಕೂರಿಸುವವರಿಗೆ ಸೆಸ್ಕ್ ಮತ್ತು ಅಗ್ನಿಶಾಮಕ ಹಾಗೂ ಪೊಲೀಸರ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸಿಕೊಡಲಾಗುವುದು. ಪ್ರತಿಯೊಬ್ಬರು ಕಡ್ಡಾಯವಾಗಿ ನೋಂದಣಿ ಪಡೆದುಕೊಂಡು ಉತ್ತಮ ರೀತಿಯಲ್ಲಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಪೊಲೀಸ್‌ ಇಲಾಖೆಗೆ ಕೀರ್ತಿ ತಂದುಕೊಡಬೇಕೆಂದು ಮನವಿ ಮಾಡಿದರು.

ಶಾಂತಿಯುತ ಹಬ್ಬ ಆಚರಣೆಗೆ ಸೂಚನೆ: ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಕಾಂತ್‌ ಮಾತನಾಡಿ, ಈಗಾಗಲೇ ವಿವಿಧ ಸಮಾಜದ ಮುಖಂಡರು ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಹಲವು ಸಲಹೆಗಳನ್ನು ನೀಡಿದ್ದು, ಎಲ್ಲಾ ಸಲಹೆಗಳನ್ನು ಸ್ವೀಕರಿಸಿ ಶಾಂತಿಯುತ ಹಬ್ಬ ಆಚರಣೆಗೆ ಎಲ್ಲಾ ಸಿದ್ಧತೆಗಳನ್ನು ಪೊಲೀಸ್‌ ಇಲಾಖೆ ಮಾಡಲಿದೆ ಎಂದರು.

11 ದಿನ ಮಾತ್ರ ಅವಕಾಶ: ವಿಗ್ರಹಗಳನ್ನು ಕೂರಿಸಲು 11 ದಿನ ಮಾತ್ರ ಅವಕಾಶವಿದ್ದು, ಅದರ ಮೇಲ್ಪಟ್ಟು ವಿಗ್ರಹಗಳನ್ನು ಕೂರಿಸಲು ಅವಕಾಶ ಇರುವುದಿಲ್ಲ ಎಂದು ಮುಖಂಡರಲ್ಲಿ ಮನವಿ ಮಾಡಿದ ಅವರು, ನೆರೆ ಹಾವಳಿಯಿಂದ ಜನರು ನೋಂದಿದ್ದು, ಸರಳವಾಗಿ ಹಬ್ಬವನ್ನು ಶಾಂತಿ ಭಂಗ ಉಂಟಾಗದಂತೆ ಆಚರಿಸಬೇಕು ಎಂದು ತಿಳಿಸಿದರು.

ನಗರ ಸಭೆ ಅನುಮತಿ ಕಡ್ಡಾಯ: ಹಿಂದುಗಳ ಹಬ್ಬ ಆಚರಣೆಯ ಸಂದರ್ಭದಲ್ಲಿ ಎಲ್ಲಾ ಸಮುದಾಯ ಸಂಭ್ರಮದಿಂದ ಆಚರಣೆ ಮಾಡಬೇಕು. ತಾಲೂಕಿನ ಗ್ರಾಮೀಣ ಪ್ರದೇಶದ ಮುಖಂಡರು ಸಂಬಂಧಿಸಿದ ಗ್ರಾಮ ಪಂಚಾಯಿತಿಯಲ್ಲಿ ಮತ್ತು ನಗರ ಪ್ರದೇಶದಲ್ಲಿ ಕೂರಿಸುವವರು ನಗರಸಭೆಯಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮತ್ತು ಅಕ್ರಮ ವಿದ್ಯುತ್‌ ಸಂಪರ್ಕ ಅಳವಡಿಸಿಕೊಳ್ಳಬಾರದು. ದೊಡ್ಡ ಗಣಪತಿಗಳನ್ನು ಕೂರಿಸುವ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಸೂಚನೆ ನೀಡಿದರು.

ವಿಗ್ರಹಗಳನ್ನು ಕೂರಿಸುವ ಸ್ಥಳಗಳಲ್ಲಿ ಸಂಬಂಧಿಸಿದ ಪೊಲೀಸ್‌, ಅಗ್ನಿಶಾಮಕ ಠಾಣೆ, ನಗರಸಭೆ ಮತ್ತು ಸೆಸ್ಕ್ ಇಲಾಖೆಯ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗಳನ್ನು ಮುದ್ರಣ ಮಾಡಿ ಅಳವಡಿಸಬೇಕು. ಯಾವುದೇ ಸ್ಥಳದಲ್ಲಿ ಯಾವುದೇ ಸಣ್ಣಪುಟ್ಟ ಘಟನೆಗಳು ಸಂಬಂಧಿಸಿದ ಪಕ್ಷದಲ್ಲಿ ಮೊಬೈಲ್‌ ಸಂಖ್ಯೆಗಳು ನೆರವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣ ಠಾಣೆ ಎಸ್‌ಐ ರಾಜೇಂದ್ರ, ಸೆಸ್ಕ್ ಎಇಇ ಲಿಂಗರಾಜು, ನಗರಸಭೆಯ ಆರೋಗ್ಯಾಧಿಕಾರಿ ಭೂಮಿಕಾ, ಅಗ್ನಿಶಾಮಕ ಠಾಣೆಯ ಎಎಸ್‌ಐ ರಮೇಶ್‌, ನಗರಸಭಾ ಸದಸ್ಯರಾದ ಕವಿತಾ, ರಾಮಕೃಷ್ಣ, ಮಂಜುನಾಥ, ಜಯಮೇರಿ, ರಾಘವೇಂದ್ರ, ಸುರೇಶ್‌, ತಾಲೂಕು ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ನಟರಾಜಮಾಳಿಗೆ, ಹಣ್ಣು ಮತ್ತು ತರಕಾರಿ ಸಂಘದ ಅಧ್ಯಕ್ಷ ಸಮೀವುಲ್ಲಾ, ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಅನ್ವರ್‌ ಬಾಷಾ, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜು, ಮುಖಂಡರಾದ ಚಿಕ್ಕಲಿಂಗಯ್ಯ, ಸೆಲ್ವರಾಜು ಇತರರು ಇದ್ದರು.

ಟಾಪ್ ನ್ಯೂಸ್

12-mng

ನೇಹಾ ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

ನೇಹಾ ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.