ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮ ಅನುಸರಿಸಿ
Team Udayavani, May 24, 2020, 5:14 AM IST
ಚಾಮರಾಜನಗರ: ಕೋವಿಡ್-19 ವೈರಾಣು ಹರಡದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿ ಜನರ ಆರೋಗ್ಯ ಕಾಪಾಡಬೇಕೆಂದು ಸಂಸದ ಶ್ರೀನಿವಾಸ್ ಪ್ರಸಾದ್ ಸೂಚಿಸಿದರು. ನಗರದಲ್ಲಿ ಕೋವಿಡ್-19 ತಡೆಗಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಪರಾಮರ್ಶೆ ಸಭೆಯಲ್ಲಿ ಮಾತನಾಡಿದರು.
ಮುನ್ನೆಚ್ಚರಿಕೆ ಪಾಲಿಸಿ: ಕೋವಿಡ್-19 ವ್ಯಾಪಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ವೈಯಕ್ತಿಕ ಶುಚಿತ್ವ ಮತ್ತಿತರ ಪರಿಣಾಮಕಾರಿ ವಿಧಾನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಹೇಳಿದರು.
ಪ್ರಯೋಗಾಲಯ ಪರಿಶೀಲನೆ: ಕೋವಿಡ್ ಆಸ್ಪತ್ರೆ ಸ್ಥಾಪನೆ, ಫೀವರ್ ಕ್ಲಿನಿಕ್ಗಳ ಕಾರ್ಯ, ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರಂಭಿಸಿರುವ ಪಿಸಿಆರ್ ಪ್ರಯೋಗಾಲಯ ಕಾರ್ಯವೈಖರಿಯನ್ನು ಪರಿಶೀಲಿಸಿ ದ ಸಂಸದರು, ಸುಸಜ್ಜಿತ ವ್ಯವಸ್ಥೆ, ಸೌಲಭ್ಯ ಜಿಲ್ಲೆಯಲ್ಲಿಯೇ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ಹೆಚ್ಚು ಗಮನ ನೀಡಿದೆ ಎಂದರು.
ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹಾಗೂ ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸಿರುವ ಇಲ್ಲಿನ ಕಾರ್ಮಿಕರ ಬಗ್ಗೆ ವಹಿಸಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕಾರ್ಮಿಕರ ಹಿತ ಕಾಯುವ ವಿಷಯಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು. ನಗರಸಭೆ ವ್ಯಾಪ್ತಿಯ ಆಟೋ, ಟ್ಯಾಕ್ಸಿ ಚಾಲಕರಿಗೆ ಆಹಾರ, ದಿನಸಿ ಪದಾರ್ಥಗಳ ಕಿಟ್ ನೀಡಲು ನಿರ್ಧರಿಸಲಾಗಿದೆ.
ಚಾಲಕರ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಶಾಸಕ ಮಹೇಶ್, ಜಿಪಂ ಅಧ್ಯಕ್ಷ ಮಹೇಶ್, ಸಿಇಒ ನಾರಾಯಣರಾವ್, ಎಸ್ಪಿ ಆನಂದಕುಮಾರ್, ಎಡೀಸಿ ಆನಂದ್, ಉಪ ವಿಭಾಗಾಧಿಕಾರಿ ನಿಖೀತಾ, ಡಿಎಚ್ಒ ಡಾ.ಎಂ.ಸಿ.ರವಿ, ಸಿಮ್ಸ್ ಡೀನ್ ಡಾ.ಸಂಜೀವ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ