ಚಕ್ರಕ್ಕೆ ಹುರುಳಿ ಸೆತ್ತೆ ಸಿಲುಕಿ ಹೊತ್ತಿ ಉರಿದ ಕಾರು; ಏಳು ಮಂದಿ ಪಾರು
Team Udayavani, Jan 1, 2023, 7:48 PM IST
ಗುಂಡ್ಲುಪೇಟೆ(ಚಾಮರಾಜನಗರ): ರಸ್ತೆಯಲ್ಲಿ ಹಾಕಿದ್ದ ಹುರುಳಿ ಸೆತ್ತೆ ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾರು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ನಡೆದಿದೆ.
ಕೇರಳ ನೋಂದಣಿಯ ಕಾರು ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರಿನ ಚಕ್ರಕ್ಕೆ ಹುರುಳಿ ಸೆತ್ತೆ ಸುತ್ತಿಕೊಂಡಿದೆ. ಇದರಿಂದ ಕ್ಷಣ ಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಕಾರಿನಲ್ಲಿದ್ದ ಏಳು ಮಂದಿ ಯುವಕರು ತಮ್ಮ ವಸ್ತುಗಳ ಸಮೇತ ಕೇಳಗಿಳಿದಿದ್ದಾರೆ. ನಂತರ ಕಾರಿನ ತುಂಬಾ ಬೆಂಕಿ ಆವರಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.
ಈ ವೇಳೆ ಸ್ಥಳೀಯರು ಬೆಂಕಿ ನಂದಿಸುವ ಕೆಲಸ ಮಾಡಿದ್ದರೂ ಪ್ರಯೋಜನವಾಗಿಲ್ಲ. ನಂತರ ಮಾಹಿತಿ ಅರಿತ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ವಿಷಯ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಮುದ್ದುರಾಜು ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಸ್ತೆಯಲ್ಲಿ ಹುರುಳಿ ಒಕ್ಕಣೆಗೆ ಕಡಿವಾಣ ಹಾಕಿ
ತಾಲೂಕಿನಲ್ಲಿ ಅಧಿಕ ಮಂದಿ ರೈತರು ಹುರುಳು ಫಸಲು ಬೆಳೆದಿದ್ದು, ಸಮಪರ್ಕಕವಾಗಿ ಒಕ್ಕಣೆ ಇಲ್ಲದೆ ಕಾರಣ ರಸ್ತೆಯಲ್ಲಿ ಹಾಕಿಕೊಳ್ಳುತ್ತಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಪೊಲೀಸರು ಕ್ರಮ ವಹಿಸಿ ರಸ್ತೆಯಲ್ಲಿ ಹುರುಳಿ ಒಕ್ಕಣೆಗೆ ಕಡಿವಾಣ ಹಾಕುವಂತೆ ರೈತ ಮುಖಂಡ ಶಂಭುಲಿಂಗಪ್ಪ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ