ಪೊಲೀಸರಿಗೆ ಬೆಂಬಲಿಸಿ ವಿದ್ಯಾರ್ಥಿಗಳ ವಿಜಯೋತ್ಸವ


Team Udayavani, Dec 8, 2019, 3:00 AM IST

poliarige

ಚಾಮರಾಜನಗರ: ತೆಲಂಗಾಣದಲ್ಲಿ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಅಮಾನವೀಯವಾಗಿ ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಅಲ್ಲಿನ ಪೋಲಿಸರು ಎನ್‌ಕೌಂಟರ್‌ ಮಾಡಿರುವುದನ್ನು ಬೆಂಬಲಿಸಿ, ಪೊಲೀಸರಿಗೆ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ ನಗರದ ವಿದ್ಯಾ ವಿಕಾಸ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿಜಯೋತ್ಸವ ಆಚರಣೆ ಮಾಡಿ, ಸಿಹಿ, ಹಂಚಿ ಸಂಭ್ರಮಿಸಿದರು.

ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಕಾಲೇಜಿನ ಅವರಣದಲ್ಲಿ ವಿದ್ಯಾರ್ಥಿಗಳು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಯುವಶಕ್ತಿ ಪರಿಷತ್‌ನ ಸಹಯೋಗದಲ್ಲಿ ಸಮಾವೇಶಗೊಂಡರು. ಆತ್ಯಾಚಾರ ಆರೋಪಿಗಳನ್ನು ಕೊಂದಿರುವ ಪೊಲೀಸರಿಗೆ ನಮ್ಮ ಬೆಂಬಲ, ಪೊಲೀಸ್‌ ಅಧಿಕಾರಿಗಳ ಕಾರ್ಯಕ್ಕೆ ಜಯವಾಗಲಿ, ಅತ್ಯಾಚಾರಿಗಳಿಗೆ ಶಿಕ್ಷೆಯಾಗಲಿ, ಕನ್ನಡಿಗ ಪೊಲೀಸ್‌ ಅಧಿಕಾರಿ ವಿಶ್ವನಾಥ್‌ ಸಜ್ಜನ ಅವರಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆ ಕೂಗಿದರು. ಬಳಿಕ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿ.ಕೆ. ದಾನೇಶ್ವರಿ, ಪಶುವೈದ್ಯೆಯನ್ನು ನಾಲ್ವರು ಯುವಕರು ಅಮಾನುಷವಾಗಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದರು. ಇವರು ಮಾಡಿದ ಕರ್ಮಕ್ಕೆ ಭಗವಂತನೇ ಶಿಕ್ಷೆ ವಿಧಿಸಿದ್ದಾನೆ. ಪೊಲೀಸ್‌ ಅಧಿಕಾರಿಗಳ ಮೂಲಕ ಅವರು ಪಾಪದ ಕೆಲಸಕ್ಕೆ ತಕ್ಕ ಶಿಕ್ಷೆಯನ್ನು ನೀಡುವಂತೆ ಪ್ರೇರಣೆ ನೀಡಿದ್ದಾನೆ. ಇಂಥ ಕೃತ್ಯಗಳು ನಿಲ್ಲಬೇಕು. ಮನುಷ್ಯ ಕುಲದಲ್ಲಿ ಹುಟ್ಟಿರುವ ನಾವೆಲ್ಲರು ಶಾಂತಿ ಸಹಬಾಳ್ವೆ ಹಾಗೂ ಪರಸ್ಪರ ಸಹೋದರತ್ವದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಮಹಿಳೆಯ ಮೇಲಿನ ಅತ್ಯಾಚಾರ ಸಮಾಜವೇ ತಲೆತಗ್ಗಿಸುವಂತಹ ವಿಚಾರವಾಗಿದೆ. ಕಳೆದ 8 ದಿನಗಳ ಹಿಂದೆ ಈ ಕೃತ್ಯವನ್ನು ನೋಡಿ, ಕೇಳಿ ಮನಸ್ಸಿಗೆ ಬಹಳ ಬೇಸರವಾಗಿತ್ತು. ಅದರೆ, ಇಂದು ಪೊಲೀಸರು ಮಾಡಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಪಾಪಿಗಳು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸಮಾಧಾನ ತಂದಿದೆ. ಇಂಥ ಪ್ರಕರಣಗಳಿಗೆ ತಕ್ಕ ಉತ್ತರ ನೀಡಬೇಕು ಎಂದರು.

ಯುವಶಕ್ತಿ ಪರಿಷತ್‌ನ ಅಧ್ಯಕ್ಷ ಎಲ್‌. ಸುರೇಶ್‌ ಮಾತನಾಡಿ, ಕನ್ನಡಿಗ ಪೊಲೀಸ್‌ ಅಧಿಕಾರಿ ವಿಶ್ವನಾಥ್‌ ಸಜ್ಜನರ್‌ ಸಾಹಸದ ಕೆಲಸ ಮಾಡಿದ್ದಾರೆ. ನಾಲ್ವರು ಕ್ರೂರಿಗಳು ಪೊಲೀಸರಿಂದ ತಪ್ಪಿಸಿಕೊಂಡು ಮತ್ತೆ ತಮ್ಮ ಚಾಳಿಯನ್ನು ಮುಂದುವರಿಸಲು ಹೊಂಚು ಹೋಗುತ್ತಿದ್ದರು. ಇವರು ತಪ್ಪಿಸಿಕೊಳ್ಳದಂತೆ ಎನ್‌ಕೌಂಟರ್‌ ಮಾಡಿ ಕೊಂದಿರುವ ಪೊಲೀಸರ ಸಾಹಸದ ಕೆಲಸವನ್ನು ಇಡೀ ಪ್ರಪಂಚವೇ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಎನ್‌. ಗೌಡ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣಕುಮಾರ್‌, ಉಪನ್ಯಾಸಕರಾದ ರಾಜೇಶ್ವರಿ, ಕುಸುಮಾ, ಕುಮಾರಿ, ಅನುರಾಜ್‌, ಓಂ ಶಾಂತಿ ಬಿ.ಕೆ. ಆರಾಧ್ಯ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.