ಮೂರು ತಿಂಗಳೊಳಗೆ ಹಾಲಿ ಉಳಿದಿರುವ ಕಬ್ಬು ಅರೆಯಿರಿ


Team Udayavani, Sep 26, 2020, 1:47 PM IST

ಮೂರು ತಿಂಗಳೊಳಗೆ ಹಾಲಿ ಉಳಿದಿರುವ ಕಬ್ಬು ಅರೆಯಿರಿ

ಚಾಮರಾಜನಗರ: ಜಿಲ್ಲೆಯಲ್ಲಿ ಹಾಲಿ ಉಳಿದಿರುವ 5,000 ಎಕರೆ ಒಪ್ಪಂದದ ಕಬ್ಬನ್ನು ಇನ್ನು ಮೂರು ತಿಂಗಳ ಒಳಗಾಗಿ ಅರೆದು ಮುಗಿಸಬೇಕು. ಜಿಲ್ಲೆಯ ರೈತರ ಒಪ್ಪಂದದ ಕಬ್ಬಿಗೆ ಮೊದಲು ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ. ಆರ್‌. ರವಿ ಅವರು ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಕ್ಕರೆಕಾರ್ಖಾನೆಯವರು ಅನುಸರಿಸಬೇಕಾದ ಕ್ರಮಗಳ ಸಂಬಂಧ ಕಬ್ಬು ಬೆಳೆಗಾರರ ಸಂಘದ ಪ್ರತಿನಿಧಿಗಳು, ರೈತ ಮುಖಂಡರು ಹಾಗೂ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯವರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಅನುಮತಿ ಕಡ್ಡಾಯ: ಜಿಲ್ಲೆಯ ಕಬ್ಬನ್ನು ಕಟಾವು ಮಾಡದೇ ಹೊರ ಜಿಲ್ಲೆಯ ರೈತರ ಕಬ್ಬನ್ನು ತಂದು ಸಕ್ಕರೆ ಕಾರ್ಖಾನೆಯಲ್ಲಿ ಅರೆಯುತ್ತಿದ್ದಾರೆಂಬ ರೈತ ಮುಖಂಡರ ಆಕ್ಷೇಪಣೆಗೆ ಸ್ಪಂದಿಸಿದಜಿಲ್ಲಾಧಿಕಾರಿ, ನಮ್ಮ ಜಿಲ್ಲೆಯ ರೈತರಿಗೆ ಮೊದಲು ಆದ್ಯತೆ ನೀಡಬೇಕು. ಹೊರ ಜಿಲ್ಲೆಯಿಂದ ಕಬ್ಬು ತರುವುದಿದ್ದರೆ ಜಿಲ್ಲಾಧಿಕಾರಿಗಳ ಲಿಖೀತ ಅನುಮತಿಯನ್ನು ಕಡ್ಡಾಯವಾಗಿ ಪಡೆದು ಕಬ್ಬನ್ನು ತಂದು ಅರೆಯಬೇಕು. ಅಲ್ಲಿಯವರೆಗೆ ಹೊರ ಜಿಲ್ಲೆಯಿಂದ ಬರುತ್ತಿರುವಕಬ್ಬನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರಿಗೆ ಸೂಚಿಸಿದರು.

ಒಪ್ಪಂದ ಮತ್ತು ಒಪ್ಪಂದವಿಲ್ಲದ ಎಷ್ಟು ಟನ್‌ ಕಬ್ಬನ್ನು ಕಾರ್ಖಾನೆಯಲ್ಲಿ ಅರೆಯಲಾಗಿದೆ ಎಂಬ ಬಗ್ಗೆ ವರದಿ ನೀಡ ಬೇಕೆಂದು ಸಕ್ಕರೆ ಕಾರ್ಖಾನೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಂದಿನ 12 ತಿಂಗಳು ತುಂಬಿ ನಂತರ ಕಟಾವು ಮಾಡುವ ಕಬ್ಬಿಗೆ ನಷ್ಟ ಪರಿಹಾರವನ್ನು ಕಾರ್ಖಾನೆಯವರು ರೈತರಿಗೆ ಭರಿಸಬೇಕು. ಈ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿಯವರು ಚರ್ಚಿಸಿ ಒಂದು ವಾರದೊಳಗಾಗಿ ಮಾಹಿತಿ ನೀಡಬೇಕು. ಮಾರ್ಗಸೂಚಿ ಅನುಸಾರ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಮಾತ್ರ ಕಾರ್ಖಾನೆಯವರು ರೈತರಿಂದ ಪಡೆಯಬೇಕೆ ಹೊರತು ಹೆಚ್ಚಿನ ದರವನ್ನು ಪಡೆಯಬಾರದೆಂದು ಸೂಚಿಸಿದರು.

ಕಬ್ಬಿನ ಇಳುವರಿಯ ಲಾಭಾಂಶವನ್ನು ಸರ್ಕಾರವು ಘೋಷಣೆ ಮಾಡಿದಕೂಡಲೇ ಆಯಾಯ ವರ್ಷವೇ ರೈತರಿಗೆನೀಡಬೇಕು. ರೈತರು ಮತ್ತು ಕಾರ್ಖಾನೆಯ ದ್ವಿಪಕ್ಷೀಯ ಒಪ್ಪಂದದ ಬಗ್ಗೆ ಆಡಳಿತ ಮಂಡಳಿಯವರಿಂದ ಅನುಮತಿ ಪಡೆದು ಒಂದು ವಾರದೊಳಗೆ ಮಾಹಿತಿ ಒದಗಿಸುವಂತೆ ಅವರು ತಿಳಿಸಿದರು.

ಮಾಹಿತಿ: ವೇಬ್ರಿಡ್ಜ್ ಅನ್ನುಕಾರ್ಖಾನೆಯ ಗೇಟಿನ ಮುಂಭಾಗ ಅಳವಡಿಸಿ ಕಬ್ಬು ತೂಕವಾದ ತಕ್ಷಣ ಎಸ್‌ಎಂಎಸ್‌ ಮೂಲಕ ರೈತರಿಗೆ ಮಾಹಿತಿ ನೀಡಬೇಕು. ಸೂಚನೆ ಪಾಲಿಸದಿದ್ದಲ್ಲಿ ಜಿಲ್ಲಾಡಳಿತ ವತಿಯಿಂದಲೇ ವೇಬ್ರಿಡ್ಜ್ ಅಳವಡಿಸಲು ಕ್ರಮವಹಿಸಲಾಗುತ್ತದೆ. ಈ ಬಗ್ಗೆ ಕೂಡಲೇ ಮಾಹಿತಿ ಒದಗಿಸಬೇಕು ಎಂದರು.

ಉಪವಿಭಾಗಾಧಿಕಾರಿ ಡಾ. ಗಿರೀಶ್‌ ದಿಲೀಪ್‌ ಬಡೋಲೆ, ಆಹಾರ ಇಲಾಖೆ ಉಪನಿರ್ದೇಶಕ ಸಿ.ಎನ್‌. ರುದ್ರಸ್ವಾಮಿ, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ಶರವಣ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ತಾಲೂಕು ಅಧ್ಯಕ್ಷ ಮಹದೇವಸ್ವಾಮಿ ಎಚ್‌. ಮೂಕಳ್ಳಿ, ರಾಜ್ಯ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಮಹೇಶ್‌ ಪ್ರಭು, ರೈತ ಮುಖಂಡರಾದ ಹೆಬ್ಬಸೂರು ಬಸವಣ್ಣ, ಪಟೇಲ್‌ ಶಿವಮೂರ್ತಿ, ಅಣಗಳ್ಳಿ ಬಸವರಾಜು, ನಂಜುಂಡ ಸ್ವಾಮಿ, ನಾಗರಾಜು, ಬಿ.ಶಾಂತಮಲ್ಲು, ರೈತ ಸಂಘದ ಇತರ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.